ಉಡುಪಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕೊಡೇರಿ ಸಮುದ್ರದಲ್ಲಿ ನಾಡದೋಣಿ ಅವಘಡ: ಮೂವರು ಮೀನುಗಾರರು ನೀರುಪಾಲು

By ಉಡುಪಿ ಪ್ರತಿನಿಧಿ
|
Google Oneindia Kannada News

ಉಡುಪಿ, ಆಗಸ್ಟ್ 16: ಉಡುಪಿ ಜಿಲ್ಲೆಯ ಕಿರಿಮಂಜೇಶ್ವರ ಸಮೀಪದ ಕೊಡೇರಿ ಸಮುದ್ರದಲ್ಲಿ ನಾಡದೋಣಿ ದುರಂತ ಸಂಭವಿಸಿದೆ. ಮೀನುಗಾರಿಕೆ ನಡೆಸಿ ವಾಪಾಸ್ಸಾಗುತ್ತಿದ್ದ ನಾಡದೋಣಿಯೊಂದು ಬಂಡೆಗೆ ಡಿಕ್ಕಿ ಹೊಡೆದ ಪರಿಣಾಮ ದೋಣಿಯಲ್ಲಿದ್ದ ಮೂವರು ನೀರು ಪಾಲಾಗಿದ್ದಾರೆ.

Recommended Video

Malaysia detects 10 times more dangerous Corona virus strain | Oneindia Kannada

ಮೀನುಗಾರಿಕೆಗೆ ತೆರಳಿದ್ದ ಸಾಗರಶ್ರೀ ಎಂಬ ನಾಡದೋಣಿ, ಬಂಡೆಗೆ ಬಡಿದ ಪರಿಣಾಮ ನಿಯಂತ್ರಣ ತಪ್ಪಿದ ದೋಣಿಯು ನೀರಿನಲ್ಲಿ ಮುಳುಗಿದೆ. ದುರಂತಕ್ಕೀಡಾದ ದೋಣಿಯಲ್ಲಿ ಒಟ್ಟು ಹತ್ತು‌ ಮಂದಿ ಮೀನುಗಾರಿಕೆಗೆ ಇದ್ದರು ಎನ್ನಲಾಗಿದೆ.

ಉಡುಪಿ: ಕಾಪು ಕ್ಷೇತ್ರದ ಬಿಜೆಪಿ ಶಾಸಕರಿಗೆ ಕೊರೊನಾ ಸೋಂಕು ದೃಢಉಡುಪಿ: ಕಾಪು ಕ್ಷೇತ್ರದ ಬಿಜೆಪಿ ಶಾಸಕರಿಗೆ ಕೊರೊನಾ ಸೋಂಕು ದೃಢ

Udupi: Fishing Boat Crash In Koderi Sea, Three People Missing

ದೋಣಿಯು ಅಲೆಗಳ ಹೊಡೆತಕ್ಕೆ ಸಿಕ್ಕಿ ಮಗುಚಿ ಬಿದ್ದಿದೆ. ಈ ವೇಳೆ ಮೀನುಗಾರರು ಈಜಿ ಬಚಾವಾಗುವ ಪ್ರಯತ್ನ‌ ಮಾಡಿದರೆ, ಮೂವರು ಅಲೆಗಳ ರಭಸಕ್ಕೆ ಸಿಲುಕಿ ಕಣ್ಮರೆಯಾದರು.

Udupi: Fishing Boat Crash In Koderi Sea, Three People Missing

ಬಂಡೆಗೆ ಹೊಡೆದ ಸಾಗರಶ್ರೀ ಎಂಬ ನಾಡದೋಣಿ ಸಂಪೂರ್ಣ ಹಾನಿಗೊಂಡಿದೆ. ಕುಂದಾಪುರ ತಾಲೂಕಿನ ಗಂಗೊಳ್ಳಿ ಕರಾವಳಿ ಕಾವಲು ಪೊಲೀಸ್ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಕಣ್ಮರೆಯಾಗಿರುವ ಮೂವರು ಮೀನುಗಾರರಿಗಾಗಿ ಶೋಧ ನಡೆಯುತ್ತಿದೆ.

English summary
Fishing boat disaster occurred at Koderi Sea near Kirimanjeswara in Udupi district.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X