ಕಡಲ್ಕೊರೆತ ಪ್ರದೇಶಕ್ಕೆ ಸಚಿವ ಆರ್.ಅಶೋಕ್ ಭೇಟಿ: 5 ಕೋಟಿ ರೂ. ಘೋಷಣೆ
ಉಡುಪಿ, ಆಗಸ್ಟ್ 07: ಉಡುಪಿ ಜಿಲ್ಲೆ ಪಡುಬಿದ್ರೆಯ ಕಡಲ್ಕೊರೆತ ಪ್ರದೇಶಕ್ಕೆ ಇಂದು ಕಂದಾಯ ಸಚಿವ ಆರ್.ಅಶೋಕ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.
Recommended Video
ಈ ವೇಳೆ ಮಾತನಾಡಿದ ಸಚಿವ ಆರ್.ಅಶೋಕ್, ಉಡುಪಿ ಜಿಲ್ಲೆಯೂ ಸೇರಿದಂತೆ ರಾಜ್ಯದ ಹನ್ನೊಂದು ಜಿಲ್ಲೆಗಳಿಗೆ ಪ್ರಕೃತಿ ವಿಕೋಪ ನಿಧಿಯಿಂದ ತಲಾ ಐದು ಕೋಟಿ ರುಪಾಯಿ ಬಿಡುಗಡೆ ಮಾಡುವುದಾಗಿ ಘೋಷಿಸಿದರು.
ಕೊಡಗು ಹೊರತುಪಡಿಸಿದರೆ ಉಳಿದ ಜಿಲ್ಲೆಗಳಲ್ಲಿ ಸಾಮಾನ್ಯ ಸ್ಥಿತಿ ಇದೆ ಎಂದ ಸಚಿವರು, ಮಳೆ ಮತ್ತು ನೆರೆಯ ಪರಿಸ್ಥಿತಿ ನಿಯಂತ್ರಣದಲ್ಲಿದೆ. ಕೊಡಗಿನಲ್ಲಿ ಅರ್ಚಕರು ಮನೆ ಖಾಲಿ ಮಾಡದ ಕಾರಣ ಸಮಸ್ಯೆಯಾಗಿದೆ. ಕೊಡಗಿಗೂ ನಾನು ಭೇಟಿ ನೀಡುತ್ತೇನೆ ಎಂದರು.

ಸದ್ಯ ಉಡುಪಿ-ಮಂಗಳೂರು, ಕಾರವಾರ ಪ್ರವಾಸದಲ್ಲಿದ್ದೇನೆ. ಅಧಿಕಾರಿಗಳನ್ನು ಅಲರ್ಟ್ ಮಾಡಲು ಈ ಪ್ರವಾಸ ಕೈಗೊಂಡಿದ್ದು, ಯಾವುದೇ ಅಧಿಕಾರಿಗಳು ರಜೆ ತೆಗೆದುಕೊಳ್ಳದೆ ಕೆಲಸ ಮಾಡಬೇಕು. ಕಂದಾಯ, ಪೊಲೀಸ್ ಇಲಾಖೆಯ ಜವಾಬ್ದಾರಿ ತುಂಬಾ ಹೆಚ್ಚಿದೆ. ಕಳೆದ ಬಾರಿಯಾದಂತೆ ಯಾವುದೇ ಅನಾಹುತ ಆಗಬಾರದು ಎಂದು ಹೇಳಿದರು.
ಕಳೆದ ಬಾರಿ ನಮ್ಮ ಸರ್ಕಾರ ಆಗಷ್ಟೆ ಅಧಿಕಾರಕ್ಕೆ ಬಂದಿತ್ತು. ಹಿಂದಿನ ಸರಕಾರ ಯಾವುದೇ ತಯಾರಿ ಮಾಡಿರಲಿಲ್ಲ. ಈ ಬಾರಿ ಎಲ್ಲ ರೀತಿಯ ತಯಾರಿ ಮಾಡಿಕೊಂಡಿದ್ದೇವೆ ಎಂದು ಹೇಳಿದರು. ಕಳೆದ ಒಂದು ತಿಂಗಳಿಂದ ಸನ್ನದ್ಧ ಸ್ಥಿತಿಯಲ್ಲಿದ್ದೇವೆ. ಎಲ್ಲ ಜಿಲ್ಲಾಧಿಕಾರಿಗಳ ಜೊತೆ ಸಭೆ ನಡೆಸಿದ್ದೇನೆ. ಜಿಲ್ಲಾಡಳಿತ ಕೇಳಿದಷ್ಟು ಹಣವನ್ನು ನೀಡಿದ್ದೇವೆ ಎಂದು ತಿಳಿಸಿದರು.

ಬೋಟು, ಕಟ್ಟಿಂಗ್ ಮಿಷನ್, ಲೈಟ್ ಎಲ್ಲ ವ್ಯವಸ್ಥೆ ಮಾಡಿದ್ದಾರೆ. ಅಗ್ನಿಶಾಮಕ ದಳಕ್ಕೆ ಪ್ರತ್ಯೇಕವಾಗಿ 20 ಕೋಟಿ ರೂ. ಬಿಡುಗಡೆ ಮಾಡಲಾಗಿದೆ. ಪೊಲೀಸ್, ಅಗ್ನಿಶಾಮಕ ದಳ, ಕಂದಾಯ ಇಲಾಖೆ ಜಂಟಿಯಾಗಿ ಕೆಲಸ ಮಾಡುತ್ತೇವೆ. ಕಳೆದ ಬಾರಿಯ ರೀತಿಯಲ್ಲಿ ಯಾವುದೇ ಅನಾಹುತ ಆಗದಂತೆ ಕ್ರಮ ಕೈಗೊಂಡು, ಮಳೆ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸುತ್ತೇವೆ ಎಂದರು.
ಉಡುಪಿಯ ಪಡುಬಿದ್ರಿ ಬೀಚ್ ನಲ್ಲಿ ಕಡಲ್ಕೊರೆತ ಆಗಿದೆ. ಕಡಲ್ಕೊರೆತಕ್ಕೆ ಪ್ರವಾಸೋದ್ಯಮದ ಕೇಂದ್ರ ಕೊಚ್ಚಿಹೋಗಿದ್ದು, ಈ ಭಾಗದಲ್ಲಿ ಸಾಕಷ್ಟು ಮನೆಗಳು ಕೂಡ ಇವೆ. ಶಾಶ್ವತ ತಡೆಗೋಡೆ ನಿರ್ಮಿಸಲು ಎಸ್ಟಿಮೇಟ್ ಮಾಡಲು ಹೇಳಿದ್ದೇನೆ. ಕೇಂದ್ರ ಸರ್ಕಾರದ NDRF ಹಣ 300 ಕೋಟಿ ರುಪಾಯಿ ಇದೆ ಎಂದು ಹೇಳಿದರು.
-
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Gold Rate Today: ಬೆಂಗಳೂರಿನಲ್ಲಿ ಚಿನ್ನದ ದರ ಮತ್ತೆ ಏರಿಕೆ: 15,000 ರೂಪಾಯಿ ಗಡಿ ದಾಟಿದ 24 ಕ್ಯಾರೆಟ್ ಚಿನ್ನ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
Rishab Shetty: ಅಧ್ಯಾಯ ಎರಡು ಇಲ್ಲಿಂದ ಶುರು; ಸ್ಯಾಂಡಲ್ವುಡ್ನಲ್ಲಿ ಸಂಚಲನ ಮೂಡಿಸಿದ ರಿಷಬ್ ಶೆಟ್ಟಿ ಪೋಸ್ಟ್ -
ಹೊಸತೊಡಕು: ಮಧ್ಯರಾತ್ರಿಯಿಂದಲೇ ಮಾಂಸ ಖರೀದಿ ಭರಾಟೆ, ಎಷ್ಟಿದೆ ಇಂದಿನ ಚಿಕನ್-ಮಟನ್ ದರ? -
World Happiness Report 2026: ಫಿನ್ಲೆಂಡ್ ಜಗತ್ತಿನ ಅತ್ಯಂತ ಸಂತೋಷದಾಯಕ ದೇಶ: ನಮ್ಮ ಭಾರತಕ್ಕೆ ಸಿಕ್ಕ ಸ್ಥಾನವೆಷ್ಟು? -
ಈ ಸಂವತ್ಸರಕ್ಕೇಕೆ ಈ ಹೆಸರು? ‘ಪರಾಭವ’ ಅಂದ್ರೆ ‘ಸೋಲು’ ಎಂಬ ಅರ್ಥವಲ್ಲವೇ? -
Rashmika Mandanna: ಮನೆಮಗಳಾಗಿ ಇಲ್ಲಿಗೆ ಬಂದೆ, ಈಗ ಸೊಸೆಯಾಗಿ ನಿಂತಿದ್ದೇನೆ: ರಶ್ಮಿಕಾ ಮಂದಣ್ಣ ಭಾವುಕ -
ಕೇಂದ್ರೀಯ ವಿದ್ಯಾಲಯ 1ನೇ ತರಗತಿ ಪ್ರವೇಶಾತಿ 2026: ಇಂದಿನಿಂದಲೇ ಅರ್ಜಿ ಸಲ್ಲಿಕೆ ಶುರು, ಪೋಷಕರೇ ಈಗಲೇ ಗಮನಿಸಿ












Click it and Unblock the Notifications