ಹತ್ತು ವರ್ಷ ಕಳೆದರೂ ಮುಗಿದಿಲ್ಲ ಕುಂದಾಪುರದ ಈ ಫ್ಲೈ ಓವರ್ ಕಾಮಗಾರಿ
ಉಡುಪಿ, ಅಕ್ಟೋಬರ್ 21: ಕರಾವಳಿಯ ರಾಷ್ಟ್ರೀಯ ಹೆದ್ದಾರಿಯ ಮೇಲ್ಸೇತುವೆಗಳದ್ದು ದೊಡ್ಡ ಗೋಳು. ಮಂಗಳೂರಿನ ಪಂಪ್ ವೆಲ್ ಫ್ಲೈ ಓವರ್ ಕಾಮಗಾರಿ ವರ್ಷಗಟ್ಟಲೆ ನಡೆಯುತ್ತಲೇ ಇದ್ದು, ಸಂಚಾರಕ್ಕೆ ಇನ್ನೂ ಮುಕ್ತವಾಗಿಲ್ಲ. ಈ ಸಾಲಿಗೆ ಸೇರುವ ಇನ್ನೂ ಒಂದು ಮೇಲ್ಸೇತುವೆ ಎಂದರೆ ಕುಂದಾಪುರದ ಶಾಸ್ತ್ರಿ ಸರ್ಕಲ್ ನದ್ದು. ಬಹುತೇಕ ದಶಮಾನೋತ್ಸವ ಕಂಡರೂ ಈ ಸೇತುವೆ ಕಾಮಗಾರಿ ಮುಗಿಸಿ ಸಂಚಾರಕ್ಕೆ ಮುಕ್ತಗೊಳಿಸಬೇಕು ಎಂದು ಇಲ್ಲಿನ ಸಂಸದರಿಗೂ ಅನ್ನಿಸಿಲ್ಲ.

ಹತ್ತು ವರ್ಷಗಳ ಹಿಂದೆ ಕಾಮಗಾರಿ ಆರಂಭ
ಈ ಮೇಲ್ಸೇತುವೆ ಕಾಮಗಾರಿ ಆರಂಭಿಸಿ ಸುಮಾರು ಹತ್ತು ವರ್ಷಗಳೇ ಆಗಿವೆ. ಅಂಡರ್ಪಾಸ್ ಕೆಲಸಕ್ಕೆ ಐದು ವರ್ಷ ತೆಗೆದುಕೊಂಡರೆ, ರಸ್ತೆ ಹಾಗೂ ಬ್ರಿಜ್ ಗಳ ಅರೆಬರೆ ಕಾಮಗಾರಿಯಷ್ಟೆ ಮುಗಿದಿದೆ. ಸುಗಮ ಸಂಚಾರಕ್ಕಾಗಿ ಕೈಗೊಂಡ ಹೆದ್ದಾರಿ ವಿಸ್ತರಣೆ ಸದ್ಯ ವಾಹನ ಸವಾರರ ಪ್ರಾಣಕ್ಕೇ ಸಂಚಕಾರ ತರುವಂತಿದೆ.
Recommended Video

ಕೂಳೂರು ಟು ಕುಂದಾಪುರ ಹೆದ್ದಾರಿ 66
ಇದು ಕೂಳೂರು ಟು ಕುಂದಾಪುರ ರಾಷ್ಟ್ರೀಯ ಹೆದ್ದಾರಿ 66ರ ಕಥೆ. 2012ರಲ್ಲಿ ಹೆದ್ದಾರಿ ವಿಸ್ತರಣೆ ಕಾಮಗಾರಿ ಮುಗಿಸಿ, ಸಂಚಾರಕ್ಕೆ ಬಿಟ್ಟು ಕೊಡಬೇಕಿದ್ದರೂ ಅವಧಿ ವಿಸ್ತರಣೆಗೊಂಡು 2014ಕ್ಕೆ ರಸ್ತೆ ಕಾಮಗಾರಿ ಪೂರೈಸಬೇಕಿತ್ತು. ಆದರೆ 2020 ಕಾಲಿಡುತ್ತಿದ್ದರೂ ರಸ್ತೆ ಇನ್ನೂ ಸಂಚಾರಕ್ಕೆ ಮುಕ್ತವಾಗಿಲ್ಲ. ಜನ ಹಲವು ಬಾರಿ ಹೋರಾಟ ಮಾಡಿ, ಜನಪ್ರತಿನಿಧಿಗಳಿಗೆ ಮನವಿ ಸಲ್ಲಿಸಿದ್ದರೂ ಗುತ್ತಿಗೆದಾರರು ಕ್ಯಾರೇ ಮಾಡುತ್ತಿಲ್ಲ. ಸಾಮಾಜಿಕ ಜಾಲತಾಣದಲ್ಲಿ ಅತಿ ಹೆಚ್ಚು ಟ್ರೋಲ್ ಗೆ ಒಳಗಾಗಿ ಕಾಮಗಾರಿ ನಿಂತು ತಿಂಗಳುಗಳೇ ಉರುಳಿವೆ.

2020 ಬರುತ್ತಿದ್ದರೂ ಮುಗಿಯುವ ಲಕ್ಷಣವಿಲ್ಲ
ಹೆದ್ದಾರಿ ವಿಸ್ತರಣೆ ಗುತ್ತಿಗೆ ಪಡೆದ ಕಂಪನಿ ಇಷ್ಟು ಹೊತ್ತಿಗೆ ಮೇಲ್ಸೇತುವೆ ಹಾಗೂ ಅಂಡರ್ಪಾಸ್ ಕೆಲಸ ಮುಗಿಸಬೇಕಿತ್ತು. ಸಾರ್ವಜನಿಕರು ಫ್ಲೈಓವರ್ ಮತ್ತು ಅಂಡರ್ಪಾಸ್ ಕಾಮಗಾರಿ ನಿಧಾನಗತಿ ವಿರುದ್ಧ ಕುಂದಾಪುರ ಅಂದಿನ ಎಸಿ ಭೂಬಾಲನ್ ಅವರಿಗೆ ದೂರು ನೀಡಿದ್ದರು. ದೂರು ದಾಖಲಿಸಿಕೊಂಡಿದ್ದ ಎಸಿ ಕಂಪೆನಿ ವಿರುದ್ಧ ಪ್ರಕರಣ ದಾಖಲಿಸಿ, ಕೋರ್ಟಿಗೆ ಹಾಜರಾಗುವಂತೆ ಸೂಚಿಸಿದ್ದರು.
ಎಸಿ ಕೋರ್ಟ್ನಲ್ಲಿ ಕಂಪನಿ 2019, ಮಾ.31ರೊಳಗೆ ಫ್ಲೈಓವರ್ ಹಾಗೂ 2019 ಮೇ 31ರ ಒಳಗೆ ಬಸ್ರೂರು ಅಂಡರ್ಪಾಸ್ ಕಾಮಗಾರಿ ಮುಗಿಸುತ್ತೇವೆ ಎಂದು ಹೇಳಿಕೆ ನೀಡಿತ್ತು. ಆದರೆ 2020 ಸಮೀಪಿಸುತ್ತಿದ್ದರೂ ಕಾಮಗಾರಿ ಮುಗಿಯುವ ಲಕ್ಷಣ ಕಾಣುತ್ತಿಲ್ಲ.

ಅಸಮಾಧಾನ ಹೊರಹಾಕಿದ್ದ ಶೋಭಾ ಕರಂದ್ಲಾಜೆ ಎಲ್ಲಿ?
ಸ್ಥಳೀಯ ಸಂಸದೆ ಶೋಭಾ ಕರಂದ್ಲಾಜೆ ಅವರನ್ನೂ ಈ ಕುರಿತು ಪ್ರಶ್ನಿಸಿದರೆ ಸಿಟ್ಟಾಗುತ್ತಿದ್ದಾರೆ. ಈ ಮೊದಲು ಬಿಜೆಪಿಯೇತರ ಸಂಸದರಿದ್ದಾಗ ರಾಷ್ಟ್ರೀಯ ಹೆದ್ದಾರಿ ವಿಸ್ತರಣೆ ಮತ್ತು ಫ್ಲೈ ಓವರ್ ಕಾಮಗಾರಿ ನಿಧಾನಗತಿ ಬಗ್ಗೆ ಅಸಮಾಧಾನ ಹೊರಹಾಕುತ್ತಿದ್ದ ಅವರು, ಈಗ ಮೌನಕ್ಕೆ ಜಾರಿದ್ದಾರೆ. ಮಾತ್ರವಲ್ಲ, ಉಡುಪಿ ಚಿಕ್ಕಮಗಳೂರು ಕ್ಷೇತ್ರದ ಸಂಸದೆಯಾಗಿರುವ ಶೋಭಾ, ಕ್ಷೇತ್ರಕ್ಕೆ ತಲೆ ಹಾಕದೆ, ರಾಜ್ಯ ರಾಜಕಾರಣದಲ್ಲಿ ಬ್ಯುಸಿಯಾಗಿದ್ದಾರೆ.
ಈ ಮೇಲ್ಸೇತುವೆ ಕಾಮಗಾರಿ ಕುರಿತು ಹೇಳುವವರು ಕೇಳುವವರೇ ಇಲ್ಲವಾಗಿದ್ದಾರೆ.
-
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
Karnataka Weather: ಕರ್ನಾಟಕದಲ್ಲಿ ಹೆಚ್ಚಿದ ಬಿಸಿಲ ಧಗೆ: ಬಳ್ಳಾರಿಯಲ್ಲಿ ಗರಿಷ್ಠ ತಾಪಮಾನ ದಾಖಲು, ಬೀದರ್ನಲ್ಲಿ ಚಳಿ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Expenses: ಬೆಂಗಳೂರು ಎಷ್ಟು ದುಬಾರಿ, ಅಮೆಜಾನ್ ಉದ್ಯೋಗಿ ಹಂಚಿಕೊಂಡ ವಾರಾಂತ್ಯದ ವೆಚ್ಚದ ವಿಡಿಯೋ ವೈರಲ್ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
Vijay Divorce: ನನ್ನ ಸಮಸ್ಯೆಗಳ ಬಗ್ಗೆ ನೀವು ತಲೆಕೆಡಿಸಿಕೊಳ್ಳಬೇಡಿ: ಡಿವೋರ್ಸ್ ಬಗ್ಗೆ ಕೊನೆಗೂ ಮೌನ ಮುರಿದ ನಟ ದಳಪತಿ ವಿಜಯ್ -
Horoscope March 8: ಈ ರಾಶಿಯವರಿಗೆ ಉದ್ಯೋಗದಲ್ಲಿ ಒಳಿತು, ಹೂಡಿಕೆಗಳಿಂದ ಲಾಭ, ದಿನ ಭವಿಷ್ಯ -
Kamal Haasan: ನಿಮ್ಮ ಕೆಲಸ ಎಷ್ಟಿದೆಯೋ ಅಷ್ಟು ನೋಡಿಕೊಳ್ಳಿ; ಭಾರತ ಸಾರ್ವಭೌಮ ರಾಷ್ಟ್ರ: ಟ್ರಂಪ್ಗೆ ಕಮಲ್ ಹಾಸನ್ ತಿರುಗೇಟು -
ಚಿಕ್ಕಬಳ್ಳಾಪುರದ ಜಿಲ್ಲೆಯ ಸತ್ಯಸಾಯಿ ಗ್ರಾಮಕ್ಕೆ ನಟ ರಿಷಬ್ ಶೆಟ್ಟಿ ಭೇಟಿ: ಮಾನವೀಯ ಕಾರ್ಯಗಳಿಗೆ ಶ್ಲಾಘನೆ -
Kiccha Sudeep: ಸುದೀಪ್ ನಂ 1 ಅಂತ ಗೂಗಲ್ನಲ್ಲಿ ಬರುತ್ತಾ, ನಟ ಆದ್ರೆ ತಲೆ ಮೇಲೆ ಕೊಂಬು ಇದ್ಯಾ: ಡಾಗ್ ಸತೀಶ್, ವೈರಲ್ ವಿಡಿಯೋ -
IMD Weather Forecast: ಭಾರತ vs ನ್ಯೂಜಿಲೆಂಡ್ ಟಿ20 ವಿಶ್ವಕಪ್ ಫೈನಲ್: ಅಹಮದಾಬಾದ್ನಲ್ಲಿ ಹವಾಮಾನ ಹೇಗಿದೆ, ಮಳೆ ಭೀತಿ ಇದೆಯೇ












Click it and Unblock the Notifications