Get Updates
Get notified of breaking news, exclusive insights, and must-see stories!

ಉಡುಪಿಯಲ್ಲಿ ಪರಿಸರ ದಿನದಂದೇ ಮರಗಳ ಹನನ

ಉಡುಪಿ, ಜೂನ್ 06: ವಿಶ್ವ ಪರಿಸರ ದಿನದಂದೇ ಮರಗಳನ್ನು ಕಡಿದು ಹಾಕಿದ ಘಟನೆ ಉಡುಪಿಯಲ್ಲಿ ನಡೆದಿದೆ. ನಿನ್ನೆ ಪರಿಸರ ದಿನಕ್ಕಾಗಿ ಎಲ್ಲೆಡೆ ಗಿಡ ನೆಡುತ್ತಿದ್ದರೆ, ಇಲ್ಲಿ ಮಾತ್ರ ಬೆಳೆದು ನಿಂತ ಹತ್ತಾರು ಮರಗಳನ್ನು ಕಡಿದುರುಳಿಸಿದ್ದು ನಗರದ ನಾಗರೀಕರ ಅಸಮಾಧಾನಕ್ಕೆ ಕಾರಣವಾಗಿದೆ.

Recommended Video

      ಬದಲಾಯಿಸಲು ಯಾರೆಲ್ಲಾ ಸ್ಟಾರ್ ಗಳು ಬಂದಿದ್ದಾರೆ ನೋಡಿ | Badalagu Neenu Badalayisu Neenu | Oneindia Kannada

      ಉಡುಪಿ ನಗರದ ಸರಕಾರಿ ಬಸ್ ನಿಲ್ದಾಣ ನಿರ್ಮಾಣ ಕಾಮಗಾರಿಗೆ ಅಡ್ಡವಾಗಿದೆ ಎಂಬ ನೆಪವೊಡ್ಡಿ ಮರಗಳ ಹನನ ನಡೆದಿದೆ. ಈ ಮೊದಲು ಮರಗಳನ್ನು ಬೇರೆ ಕಡೆ ಶಿಫ್ಟ್ ಮಾಡುತ್ತೇವೆ ಎಂದು ಅರಣ್ಯ ಸಚಿವರು ಭರವಸೆ ಕೊಟ್ಟು ಹೋಗಿದ್ದರು. ಆದರೆ ನಿನ್ನೆ ಮರ ಕತ್ತರಿಸುವ ಕೆಲಸಕ್ಕೆ ಯಾರೂ ಅಡ್ಡಿಪಡಿಸದಂತೆ ಗೇಟಿಗೆ ಬೀಗ ಜಡಿದು ಕಾರ್ಯಾಚರಣೆ ನಡೆಸಿ ಮರಗಳನ್ನು ಕಡಿಯಲಾಗಿದೆ.

      Forest Department Cut Large Trees On World Environment Day In Udupi

      30 ವರ್ಷ ಹಳೆಯದಾದ ಸುಮಾರು 12 ಬೃಹತ್ ಮರಗಳನ್ನು ಅರಣ್ಯ ಇಲಾಖೆ ಕಡಿದಿದ್ದಾರೆ. ಮಾತ್ರವಲ್ಲ, ಪರಿಸರ ದಿನಾಚರಣೆಯ ದಿನವೇ ಅರಣ್ಯ ಇಲಾಖೆಯಿಂದ ಇಲಾಖೆಯ ಉದ್ದೇಶವನ್ನೇ ಅಣಕಿಸುವ ರೀತಿ ಈ ಕೆಲಸ ನಡೆದಿದ್ದಕ್ಕೆ ಇದರ ವಿರುದ್ಧ ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

      More From
      Prev
      Next
      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+