ಕರಾವಳಿ ಯುವಕನ ಕಾಗೆ ಬಿಸ್ನೆಸ್ ಗೆ ಬ್ರೇಕ್; ಕಾಗೆ ಈಗ ಕಾಡಿಗೆ...
ಮಂಗಳೂರು, ಜುಲೈ 15: ಕಾಗೆ ಬಳಸಿ ವ್ಯವಹಾರ ನಡೆಸುತ್ತಿದ್ದ ಕರಾವಳಿಯ ಯುವಕನ ಕಾಗೆ ಬಿಸ್ನೆಸ್ ಗೆ ಅರಣ್ಯ ಇಲಾಖೆ ಬ್ರೇಕ್ ಹಾಕಿದೆ.
ಕಾಪು ನಿವಾಸಿ ಪ್ರಶಾಂತ್ ಪೂಜಾರಿ, ವೈಕುಂಠ ಸಮಾರಾಧನೆ ದಿನ ಕಾಗೆ ಒದಗಿಸುವ ವ್ಯವಹಾರ ಆರಂಭಿಸಿದ್ದರು. ಇದೀಗ ಅರಣ್ಯ ಇಲಾಖೆ ಅಧಿಕಾರಿಗಳು ಆ ಸಾಕಿದ ಕಾಗೆಯನ್ನು ವಶಕ್ಕೆ ಪಡೆದು ಕಾಡಿಗೆ ಬಿಟ್ಟಿದ್ದಾರೆ.
ಹಿಂದೂ ಸಂಪ್ರದಾಯದಲ್ಲಿ ಮನುಷ್ಯ ಸತ್ತು ಹನ್ನೊಂದನೇ ಅಥವಾ ಹದಿಮೂರನೇ ದಿನ ಉತ್ತರಕ್ರಿಯೆ ಮಾಡುವುದು ವಾಡಿಕೆ. ಈ ಸಂದರ್ಭ, ಸತ್ತವರಿಗೆ ಎಡೆ ಇಡುವ ಆಹಾರವನ್ನು ಮೊದಲು ಕಾಗೆ ತಿನ್ನಬೇಕು. ಸತ್ತವರ ಆತ್ಮ ಕಾಗೆ ರೂಪದಲ್ಲಿ ಬಂದು ಆಹಾರ ಸೇವಿಸುತ್ತದೆ ಎಂಬ ನಂಬಿಕೆ ಇಲ್ಲಿಯದು. ಇದನ್ನೇ ಬಂಡವಾಳ ಮಾಡಿಕೊಂಡ ಉಡುಪಿ ಜಿಲ್ಲೆಯ ಕಾಪು ನಿವಾಸಿ ಪ್ರಶಾಂತ್ ಪೂಜಾರಿ ಕಾಗೆಯನ್ನೇ ತನ್ನ ನೂತನ ಬಿಸ್ನೆಸ್ ಗೆ ಬಳಸಿಕೊಂಡಿದ್ದರು. ವೈಕುಂಠ ಸಮಾರಾಧನೆ ದಿನ ಕಾಗೆ ಒದಗಿಸುವ ಹೊಸ ಬಿಸ್ನೆಸ್ ಆರಂಭಿಸಿದ್ದರು.

ಪ್ರಶಾಂತ್ ಅವರ ಈ ಬಿಸ್ನೆಸ್ ವಿಚಾರ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಪ್ರಶಾಂತ್ ಅವರ ಈ ಸೇವೆಗೆ ಸಾಮಾಜಿಕ ಜಾಲತಾಣದಲ್ಲಿ ಕೆಲವರು ಮೆಚ್ಚುಗೆ ವ್ಯಕ್ತಪಡಿಸಿದ್ದರೆ, ಮತ್ತೆ ಕೆಲವರು ವಿರೋಧ ವ್ಯಕ್ತಪಡಿಸಿದ್ದರು. ಕಾಗೆ ವಿಷಯ ರಾಜ್ಯದಾದ್ಯಂತ ಭಾರೀ ಸುದ್ದಿಯಾಗುತ್ತಿದ್ದಂತೆ ಎಚ್ಚೆತ್ತ ಪ್ರಾಣಿ ದಯಾ ಸಂಘದ ಸದಸ್ಯರು ಈ ಬಗ್ಗೆ ಅರಣ್ಯ ಇಲಾಖೆ ಹಿರಿಯ ಅಧಿಕಾರಿಗಳ ಗಮನಕ್ಕೆ ತಂದಿದ್ದಾರೆ ಎಂದು ಹೇಳಲಾಗಿದೆ.
ಈ ಹಿನ್ನೆಲೆಯಲ್ಲಿ ಉಡುಪಿ ವಲಯ ಅರಣ್ಯಾಧಿಕಾರಿಗಳ ಆದೇಶದ ಮೇರೆಗೆ ಕಾಪು ಅರಣ್ಯ ಇಲಾಖಾ ಅಧಿಕಾರಿಗಳು ಪ್ರಶಾಂತ್ ಪೂಜಾರಿ ಮನೆಗೆ ತೆರಳಿ ಕಾಗೆಯನ್ನು ವಶಕ್ಕೆ ಪಡೆದಿದ್ದಾರೆ. ನಂತರ ಅದನ್ನು ಕಾಡಿಗೆ ಬಿಟ್ಟಿದ್ದಾರೆ.
-
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Bengaluru Drone Survey: ಬೆಂಗಳೂರಿನಲ್ಲಿ ಆಸ್ತಿಗಳ ಡ್ರೋನ್ ಸರ್ವೇ: ಇದರ ಉದ್ದೇಶವೇನು, ವಿರೋಧವೇಕೆ ಇಲ್ಲಿದೆ ಮಾಹಿತಿ -
ಇರಾನ್ ಸಂಘರ್ಷ: ಭಾರತದ ಪ್ರಯತ್ನಕ್ಕೆ ಫಲ, ಕೊಲ್ಲಿ ಮಾರ್ಗವಾಗಿ ಭಾರತಕ್ಕೆ ಬಂದ ಮೊದಲ ತೈಲ ಟ್ಯಾಂಕರ್ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
ಭಾರತದ ಹಡಗುಗಳಿಗೆ ಭರ್ಜರಿ ಸುದ್ದಿ ನೀಡಿದ ಇರಾನ್, ಗ್ಯಾಸ್ ಸಮಸ್ಯೆ ಇತ್ಯರ್ಥ ಸಾಧ್ಯತೆ | Operation Roaring Lion -
Swamijis: ಬಹುತೇಕ ಕಾವಿಧಾರಿ ಸ್ವಾಮೀಜಿಗಳು ಅವಿವಾಹಿತರು, ಆದರೆ ಅವರೆಲ್ಲರೂ ಬ್ರಹ್ಮಚಾರಿಗಳಲ್ಲ: ರವಿಕೃಷ್ಣ ರೆಡ್ಡಿ -
ಬೆಂಗಳೂರಿನ ಪ್ರಮುಖ ವಿದ್ಯುತ್ ಸ್ಥಾವರ ಬಂದ್; ರಾಜ್ಯದಲ್ಲಿ ವಿದ್ಯುತ್ ಕಡಿತದ ಭೀತಿ!












Click it and Unblock the Notifications