Get Updates
Get notified of breaking news, exclusive insights, and must-see stories!

ಗೋಕಳ್ಳರ ಜೊತೆ ಶಾಮೀಲು: ಭಜರಂಗದಳ ಮಾಜಿ ಸಂಚಾಲಕ ಅನಿಲ್ ಪ್ರಭು ಬಂಧನ

ಉಡುಪಿ, ಡಿಸೆಂಬರ್ 15: ರಾಜ್ಯದಲ್ಲಿ ಗೋಹತ್ಯೆ ನಿಷೇಧ ಆಗಬೇಕು ಎಂದು ಅನೇಕ ವರ್ಷಗಳಿಂದ ಹೋರಾಟ ಮಾಡುತ್ತಿದ್ದ ಹಿಂದೂಪರ ಸಂಘಟನೆಯ ಮುಖಂಡನೊಬ್ಬ ಅಕ್ರಮ ದನದ ಮಾಂಸ ಸಾಗಾಟ ಪ್ರಕರಣದಲ್ಲಿ ಸಿಕ್ಕಿ ಬಿದ್ದಿದ್ದಾನೆ.

ಗೋವು ಕಳ್ಳರಿಗೆ ಗೋವು ಸಾಗಾಟ ಮಾಡಲು ಸಹಾಯ ಮಾಡುತ್ತಿದ್ದ ಮತ್ತು ಅದಕ್ಕೆ ಪ್ರತಿಯಾಗಿ ಪಾಲು(ಹಣ) ಪಡೆಯುತ್ತಿದ್ದ ಕಾರ್ಕಳ ನಗರದ ಭಜರಂಗದಳ ಮಾಜಿ ಸಂಚಾಲಕ ಅನಿಲ್ ಪ್ರಭುವನ್ನು ಪೊಲೀಸರು ಬಂಧಿಸಿದ್ದಾರೆ.

ದನಗಳನ್ನು ಕಳವುಗೈದು ಅದರ ಮಾಂಸ ಮಾರಾಟ ಮಾಡುತ್ತಿದ್ದ ಆರೋಪಿಗಳು ನೀಡಿದ ಸುಳಿವಿನ ಮೇರೆಗೆ ಕಾರ್ಕಳ ಪೊಲೀಸರು ಈತನನ್ನು ಬಂಧಿಸಿದ್ದಾರೆ. ಪೊಲೀಸರಿಂದ ಯಾವುದೇ ರೀತಿ ತೊಂದರೆಯಾಗದಂತೆ ನಾನಿದ್ದೇನೆ ಎಂದು ವಾಗ್ದಾನ ನೀಡಿ, ಅವರಿಂದ ಪಾಲು ಪಡೆಯುತ್ತಿದ್ದನೆಂದು ತನಿಖೆಯ ವೇಳೆ ಗೊತ್ತಾಗಿದೆ. ಈ ಹಿನ್ನೆಲೆಯಲ್ಲಿ ಪೊಲೀಸರು ಪ್ರಕರಣ ದಾಖಲಿಸಿ ಅನಿಲ್ ಪ್ರಭುನನ್ನು ಬಂಧಿಸಿದ್ದಾರೆ.

Udupi: Former Convener Of Bajrang Dal Anil Prabhu Arrested for Joining Hands With Cattle Thieves

ಕಾರ್ಕಳದಲ್ಲಿ ದ್ವಿಚಕ್ರ ವಾಹನದಲ್ಲಿ ಅಕ್ರಮ ದನದ ಮಾಂಸ ಸಾಗಾಟ ಮಾಡುತ್ತಿದ್ದ ಆರೋಪಿಯನ್ನು ಬಂಧಿಸಿ, ವಿಚಾರಿಸಿದಾಗ ಈ ವಿಷಯ ಬಹಿರಂಗಗೊಂಡಿತು. ಆರೋಪಿ ಅನಿಲ್ ಪ್ರಭು ಈ ಹಿಂದೆ ಕಾರ್ಕಳ ಭಜರಂಗದಳದ ಸಂಚಾಲಕನಾಗಿದ್ದನು.

Recommended Video

      ಹೀಗೆ ಮಾಡೋಕೆ ಕಾರಣ ಇದೆ! | BSF Soldiers Run 180 Kms | Oneindia Kannada

      More From
      Prev
      Next
      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+