ಉಡುಪಿಯಲ್ಲಿ ಗ್ಯಾಂಗ್ವಾರ್: ಬ್ರದರ್ಸ್ ಸರ್ಕಾರ ವಿರುದ್ಧ ಗುಡುಗಿದ ಮಾಜಿ ಶಾಸಕ ರಘುಪತಿ ಭಟ್
ಉಡುಪಿ, ಮೇ 27: ಉಡುಪಿ ನಗರದಲ್ಲಿ ನಡೆದ ಗ್ಯಾಂಗ್ವಾರ್ ಬಗ್ಗೆ ಮಾಜಿ ಶಾಸಕ ರಘುಪತಿ ಭಟ್ ಕಳವಳ ವ್ಯಕ್ತಪಡಿಸಿದ್ದಾರೆ. ಉಡುಪಿಯಲ್ಲಿ ಇಂತಹ ಘಟನೆ ನಡೆದಿರುವುದು ನಂಬಲು ಅಸಾಧ್ಯ. ಜಿಲ್ಲೆಯಲ್ಲಿ ಭಯಾನಕ ವಾತಾವರಣ ಸೃಷ್ಟಿಯಾಗಿದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.
ಜಿಲ್ಲೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿನಿಮಾದಲ್ಲಿ ನಡೆದಂತೆ ಉಡುಪಿಯಲ್ಲಿ ಗ್ಯಾಂಗ್ವಾರ್ ನಡೆದಿದೆ. ಉಡುಪಿ ನಗರದಲ್ಲಿ ಇದು ಊಹಿಸಲು ಸಾಧ್ಯವಿಲ್ಲದ ಘಟನೆ. ಕರಾವಳಿ ಭಾಗದ ಮೂಲಭೂತವಾದಿ ಮುಸ್ಲಿಂ ಸಂಘಟನೆ ಯಾವ ಮಟ್ಟಿಗೆ ಬೆಳೆದಿದ್ದಾರೆ ಎಂದು ಗೊತ್ತಾಗುತ್ತದೆ. ಹಿಂದೂ ಸಂಘಟನೆ, ಹಿಂದೂ ನಾಯಕರ ಮೇಲೆ ಈ ರೀತಿ ನಡೆದರೆ ಎನ್ನುವ ಭಯ ಇದೆ ಎಂದರು.

ಸರ್ಕಾರ ಗರುಡ ಸಂಘಟನೆಯಲ್ಲಿರುವ ಎಲ್ಲರನ್ನು ತನಿಖೆಗೆ ಒಳಪಡಿಸಬೇಕು. ಹಿಂದೂ ನಾಯಕರಿಗೆಲ್ಲ ಬೆದರಿಕೆ ಇದೆ. ಹಿಜಾಬ್ ವಿವಾದದ ವೇಳೆ ನನ್ನ ಹಾಗೂ ಕುಟುಂಬದ ಮೇಲೂ ಬೆದರಿಕೆ ಇತ್ತು. ಗರುಡ ಎಂಬ ಮೂಲಭೂತ ಸಂಘಟನೆ ಗೋ-ಸಾಗಾಟಕ್ಕೆ ಬೆಂಬಲ ಕೊಡುವ ಸಂಘಟನೆ. ಸಮಗ್ರ ತನಿಖೆ ನಡೆಸಿ ಸೂಕ್ತ ಕ್ರಮ ತೆಗೆದುಕೊಳ್ಳದಿದ್ದಲ್ಲಿ ಕರಾವಳಿಗೆ ಆತಂಕದ ದಿನ ಬರಲಿದೆ.
ರಾಜ್ಯದಲ್ಲಿ ಬ್ರದರ್ಸ್ ಸರ್ಕಾರ ಇರುವ ಕಾರಣ ಏನು ಬೇಕಾದರೂ ಮಾಡಬಹುದು ಎನ್ನುವ ಧೈರ್ಯ ಇದೆ. ಯೋಗಿಯಂತಹ ಸರ್ಕಾರ ಇದ್ದರೆ, ಇಂತಹ ಕೃತ್ಯ ನಡೆಯುತ್ತಿರಲಿಲ್ಲ. ಉತ್ತರ ಪ್ರದೇಶದಲ್ಲಿ ಕ್ರಿಮಿನಲ್ಗಳನ್ನು ಮಟ್ಟ ಹಾಕಲಾಗುತ್ತಿದೆ. ಅಲ್ಲಿ ಹಿಂದೂ ಮುಸ್ಲಿಂ ಎಲ್ಲರೂ ಸಂತೋಷದಲ್ಲಿದ್ದಾರೆ. ಇಲ್ಲಿ ಬ್ರದರ್ಸ್ ಸರ್ಕಾರ ಇರುವ ಕಾರಣ ಕ್ರಿಮಿನಲ್ಗಳು ಹಾರಾಟ ನಡೆಸುತ್ತಿದ್ದಾರೆ ಎಂದು ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಗುಡುಗಿದರು.

ಪರಿಷತ್ ಚುನಾವಣೆಯಲ್ಲಿ ಗೆದ್ದ ಮೇಲೆ ವಜಾ ರದ್ದಾಗುತ್ತದೆ
ಇನ್ನು ಬಿಜೆಪಿಯಿಂದ ಉಚ್ಚಾಟನೆ ಮಾಡಿರುವ ಬಗ್ಗೆ ಮಾತನಾಡಿದ ರಘುಪತಿ ಭಟ್, ಉಚ್ಛಾಟನೆಯಾದದ್ದು ಮಾಧ್ಯಮದ ಮೂಲಕ ತಿಳಿಯಿತು ಬೇಸರವಾಯಿತು. ಶಿಸ್ತು ಸಮಿತಿಯ ನೋಟಿಸ್ ಈವರೆಗೆ ನನಗೆ ತಲುಪಿಲ್ಲ. ಪಕ್ಷ ಎಂದರೆ ಜೀವ ಬಿಡುವ ಕಾರ್ಯಕರ್ತರಿಗೆ ನಿರಂತರ ನೋವಾಗುತ್ತಿದೆ. ಪಕ್ಷದ ಎಲ್ಲಾ ಹುದ್ದೆಯಿಂದ ವಜಾ ಮಾಡುವುದಾಗಿ ಹೇಳಿದ್ದಾರೆ. ನನ್ನದು ಕಾರ್ಯಕರ್ತ ಹುದ್ದೆ, ಪಕ್ಷದಲ್ಲಿ ನನಗೆ ಯಾವ ಹುದ್ದೆಯನ್ನು ಕೊಟ್ಟಿಲ್ಲ ಎಂದರು.
ಬಿಜೆಪಿ ನನ್ನನ್ನು ಯಾವ ಹುದ್ದೆಯಿಂದ ವಜಾ ಮಾಡಿದೆ ಸ್ಪಷ್ಟಪಡಿಸಬೇಕು. ಟಿಕೆಟ್ ತಪ್ಪಿದಾಗ ಸ್ಥಾನಮಾನ ಕೊಡುತ್ತೇವೆ ಎಂದಿದ್ದರು. ಪಕ್ಷ ನನ್ನನ್ನು ರಾಜ್ಯ ಕಾರ್ಯಕಾರಿ ಸದಸ್ಯನನ್ನೂ ಮಾಡಿಲ್ಲ. ಈ ವಜಾಕ್ಕೆಲ್ಲ ನಾನು ತಲೆ ಬಿಸಿ ಮಾಡಿಕೊಳ್ಳಲ್ಲ. ನಾನು ಮೋದಿಗೆ ಬೈದಿಲ್ಲ.. ರಾಜ್ಯದ ನಾಯಕರಿಗೆ ಬೈದಿಲ್ಲ. ಬಿಜೆಪಿ ಪಕ್ಷದ ವ್ಯವಸ್ಥೆಯ ಬಗ್ಗೆ ನನಗೆ ಅಸಮಾಧಾನವಿದೆ. ಪಕ್ಷ ನಾಯಕರನ್ನು ಟೀಕೆ ಮಾಡಿದ ಜಗದೀಶ್ ಶೆಟ್ಟರ್ ಒಂದು ವರ್ಷದಲ್ಲಿ ವಾಪಾಸಾದರು. ಪಕ್ಷಕ್ಕೆ ವಾಪಸ್ ಆಗಿ ಲೋಕಸಭಾ ಟಿಕೆಟ್ ಪಡೆದುಕೊಂಡರು. ಇದು ಶಾಶ್ವತ ವಜಾ ಅಲ್ಲ ಪರಿಷತ್ ಚುನಾವಣೆಯಲ್ಲಿ ನಾನು ಗೆದ್ದ ಮೇಲೆ ವಜಾ ರದ್ದಾಗುತ್ತದೆ. ಒಬ್ಬ ಬಿಜೆಪಿ ಕಾರ್ಯಕರ್ತನನ್ನು ವಜಾ ಮಾಡಲು ಸಾಧ್ಯವಿಲ್ಲ ಎಂದು ಹೇಳಿದರು.
-
April 10 Horoscope: 12 ರಾಶಿಗಳಿಗೆ ಇಂದು ಆರೋಗ್ಯ, ಹಣಕಾಸು ಮತ್ತು ಪ್ರೇಮದಲ್ಲಿ ಮಿಶ್ರ ಫಲ -
ಬೆಂಗಳೂರು ನಾಯಂಡಳ್ಳಿಯಲ್ಲಿ ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಕಂದಮ್ಮ -
SSLC Hindi: ಅಂಕ ಬದಲು ಗ್ರೇಡಿಂಗ್ ವಿರೋಧಿಸಿ ಅರ್ಜಿ ಸಲ್ಲಿಸಿದ ಅರ್ಜಿದಾರರಿಗೆ 1 ಲಕ್ಷ ರೂ. ದಂಡ: ಕರವೇ ಹೇಳಿದ್ದೇನು -
Bengaluru: ಬೆಂಗಳೂರು ನಗರದಲ್ಲಿ ಸ್ವಿಗ್ಗಿ, ಜೊಮ್ಯಾಟೋ ಡೆಲಿವರಿ ಬಾಯ್ಸ್ಗೆ ಸಂಕಷ್ಟ, ಅಮಾನವೀಯ ಲಿಫ್ಟ್ ಸಂಸ್ಕೃತಿ -
ಚಿಕ್ಕಮಗಳೂರಲ್ಲಿ ನಾಪತ್ತೆಯಾಗಿದ್ದ ಕೇರಳದ ಬಾಲಕಿ ಶ್ರಿನಂದಾ ಸಾವು: 2 ಸಾವಿರ ಅಡಿ ಪ್ರಪಾತದಲ್ಲಿ ಶವ ಪತ್ತೆ -
Copra: ತಿಪಟೂರು ಎಪಿಎಂಸಿ ಮಾರುಕಟ್ಟೆಯಲ್ಲಿ ಮತ್ತೆ ದಾಖಲೆ ಬೆಲೆಗೆ ಮಾರಾಟವಾದ ಕೊಬ್ಬರಿ: ನಿರ್ಮಾಣವಾಯ್ತು ಹೊಸ ಇತಿಹಾಸ -
Mona Lisa: ಮಹಾಕುಂಭ ಮೇಳದ ಫೇಮಸ್ ಮೊನಾಲಿಸಾ ಪತಿಗೆ ಕಾನೂನು ಸಂಕಷ್ಟ: ಫರ್ಮಾನ್ ಖಾನ್ ಮೇಲೆ ಪೋಕ್ಸೋ ಪ್ರಕರಣ -
2nd PUC: ಬೆಂಗಳೂರು - ಪಿಯುಸಿಯಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ 260 ವಿದ್ಯಾರ್ಥಿಗಳಿಗೆ 35,000 ರೂ. -
RBI New Rule: ಇನ್ಮುಂದೆ ಆನ್ಲೈನ್ ವಹಿವಾಟಿನಲ್ಲಿ ದೊಡ್ಡ ಬದಲಾವಣೆ: 10,000 ರೂ. ಹಣ ವರ್ಗಾವಣೆಗೂ ಹೊಸ ನಿಯಮ -
Gold Rate April 10: ಚಿನ್ನ - ಬೆಳ್ಳಿ ಬೆಲೆಯಲ್ಲಿ ಅಚ್ಚರಿಯ ಬೆಳವಣಿಗೆ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
ದ್ವಿತೀಯ PUC ರಿಪೀಟರ್ಸ್ ಗಮನಕ್ಕೆ: ತಾಂತ್ರಿಕ ದೋಷ ಸರಿಪಡಿಸಿ ಪರಿಷ್ಕೃತ ಫಲಿತಾಂಶ ಪ್ರಕಟಿಸಿದ ಮಂಡಳಿ -
ಸಾಮಾಜಿಕ ಜಾಲತಾಣದ ಕರೆಗೆ ಓಗೊಟ್ಟ ಹೆಚ್.ಡಿ.ಕುಮಾರಸ್ವಾಮಿ: ನಂಜನಗೂಡಿನ ಹುಲ್ಲಳ್ಳಿಯ ನೊಂದ ಕುಟುಂಬಕ್ಕೆ ಅಭಯ












Click it and Unblock the Notifications