ಭಾರೀ ಚರ್ಚೆಗೆ ಗ್ರಾಸವಾದ ಜಯಪ್ರಕಾಶ್ ಹೆಗ್ಡೆ ಮತ್ತು ಆಸ್ಕರ್ ಫೆರ್ನಾಂಡೀಸ್ ಚುನಾವಣೆ ಪೂರ್ವ ಭೇಟಿ
ಉಡುಪಿ, ಫೆಬ್ರವರಿ 26: ಬಿಜೆಪಿ ನಾಯಕ ಜಯಪ್ರಕಾಶ್ ಹೆಗ್ಡೆ ಮತ್ತು ಆಸ್ಕರ್ ಫೆರ್ನಾಂಡೀಸ್ ಚುನಾವಣೆ ಪೂರ್ವ ಭೇಟಿ ಭಾರೀ ಚರ್ಚೆಗೆ ಕಾರಣವಾಗಿದೆ. ಈ ಮಹತ್ವಪೂರ್ಣ ಭೇಟಿ ಕುರಿತು ವಿಮರ್ಶೆಗಳು, ಗಾಳಿ ಸುದ್ದಿಗಳು ಹರಡತೊಡಗಿವೆ.
ಮಾಜಿ ಸಂಸದ ಹಾಗೂ ಉಡುಪಿ -ಚಿಕ್ಕಮಗಳೂರು ಕ್ಷೇತ್ರಕ್ಕೆ ಬಿಜೆಪಿಯಿಂದ ಪ್ರಬಲ ಟಿಕೆಟ್ ಆಕಾಂಕ್ಷಿಯಾದ ಜಯಪ್ರಕಾಶ ಹೆಗ್ಡೆ, ಕಾಂಗ್ರೆಸ್ ರಾಜ್ಯಸಭಾ ಸದಸ್ಯ ಆಸ್ಕರ್ ಫೆರ್ನಾಂಡೀಸ್ ಅವರನ್ನು ಭೇಟಿಯಾಗಿರುವುದು ರಾಜಕೀಯ ವಲಯದಲ್ಲ ತೀರ್ವ ಚರ್ಚೆಗೆ ಗ್ರಾಸವಾಗಿದೆ.
ಕಾಂಗ್ರೆಸ್ ಪಕ್ಷದಿಂದ ಉಚ್ಛಾಟನೆಗೊಂಡ ನಂತರ ಇದು ಉಭಯ ನಾಯಕರ ಪ್ರಥಮ ಭೇಟಿಯಾಗಿದೆ. ಮೂರು ವರ್ಷಗಳ ಹಿಂದೆ ಕಾಂಗ್ರೆಸ್ ಪಕ್ಷದಿಂದ ಆರು ವರ್ಷದವರೆಗೆ ಹೊರ ಹಾಕಲ್ಪಟ್ಟ ಜಯಪ್ರಕಾಶ ಹೆಗ್ಡೆ ಲೋಕಸಭಾ ಚುನಾವಣೆ ಹತ್ತಿರವಾಗುತ್ತಿರುವಂತೆ ಆಸ್ಕರ್ ಫೆರ್ನಾಂಡೀಸ್ ಅವರನ್ನು ಭೇಟಿಯಾಗಿದ್ದಾರೆ.

ಆಸ್ಕರ್ ಫೆರ್ನಾಂಡೀಸ್ ಭೇಟಿ ಸಂದರ್ಭದಲ್ಲಿ ಬಿಲ್ಲವ ನಾಯಕ ಕಾಪು ಕ್ಷೇತ್ರದ ಮಾಜಿ ಶಾಸಕ ವಿನಯಕುಮಾರ್ ಸೊರಕೆ ಇದ್ದರು. ಕಾಂಗ್ರೆಸ್ ನಿಂದ ಬಿಜೆಪಿ ಕಡೆಗೆ ಪಕ್ಷಾಂತರಗೊಂಡ ಹೆಗ್ಡೆಯವರಿಗೆ ಬಿಜೆಪಿಯಿಂದ ಟೆಕೆಟ್ ಸಿಗವುದು ಅನುಮಾನವಾಗಿರುವುದರಿಂದ ಈ ಭೇಟಿ ಮಹತ್ವಪೂರ್ಣವೆನಿಸಿದೆ.
ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಲು ಬಿಜೆಪಿಯಿಂದ ಅನೇಕ ಪ್ರಬಲ ಆಕಾಂಕ್ಷಿಗಳಿದ್ದಾರೆ. ಸಂಸದೆ ಶೋಭಾ ಕರಂದ್ಲಾಜೆ ಅವರಿಗೆ ಈ ಬಾರಿ ಟಿಕೆಟ್ ನೀಡಬಾರದೆಂಬ ಕೂಗು ಬಲಗೊಳ್ಳುತ್ತಿದೆ. ಈ ನಡುವೆ ಶೋಭಾ ಕರಂದ್ಲಾಜೆ ತನ್ನ ವಿರೋಧಿಗಳಿಗೆ ಸೆಡ್ಡು ಹೊಡೆದು ಚುನಾವಣಾ ಅಖಾಡಕ್ಕೆ ಇಳಿಯಲು ಸಿದ್ದತೆ ನಡೆಸುತ್ತಿದ್ದಾರೆ.
ಈ ನಡುವೆ ಜಯಪ್ರಕಾಶ ಹೆಗ್ಡೆ ಮತ್ತು ಆಸ್ಕರ್ ಫೆರ್ನಾಂಡೀಸ್ ಪರಸ್ಪರ ಭೇಟಿ ಹಲವಾರು ಅನುಮಾನಕ್ಕೆ ಕಾರಣವಾಗಿದೆ. ಈ ಬೆಳವಣಿಗೆಗಳ ನಡುವೆ ಜೆಡಿಎಸ್ ಕಡೆಯಿಂದ ಉಡುಪಿ-ಚಿಕ್ಕಮಗಳೂರು ಕ್ಷೇತ್ರಕ್ಕೆ ಕಾಂಗ್ರೆಸ್-ಜೆಡಿಎಸ್ ಸಮಿಶ್ರ ಸರ್ಕಾರದ ಅಭ್ಯರ್ಥಿಯಾಗಿ ಜಯಪ್ರಕಾಶ್ ಹೆಗ್ಡೆ ಅವರು ಸ್ಪರ್ಧಿಸಲಿರುವರೆಂದೂ ದೇವೇಗೌಡರೊಂದಿಗೆ ಮಾತುಕತೆ ಆಗಿದೆಯೆಂದು ವದಂತಿ ಕೂಡ ಹಬ್ಬಿದೆ.
-
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ -
By-Election: ದಾವಣಗೆರೆ ದಕ್ಷಿಣದಲ್ಲಿ ಮೊದಲ ಬಾರಿ ಬಿಜೆಪಿ ಗೆಲುವು ನಿಶ್ಚಿತ; ಬಸವರಾಜ ಬೊಮ್ಮಾಯಿ ವಿಶ್ವಾಸ -
ಆರ್ಸಿಬಿ ವಿರುದ್ಧದ ಪಂದ್ಯಕ್ಕೂ ಮುನ್ನ ಕೇವಲ 42 ಎಸೆತಗಳಲ್ಲಿ 94 ರನ್ ಸಿಡಿಸಿದ ಅಭಿಷೇಕ್ ಶರ್ಮಾ: ಭಾರೀ ವೈರಲ್












Click it and Unblock the Notifications