ಒಂದು ದಿನದ ಮಟ್ಟಿಗೆ ಜೈಲಿನಿಂದ ಹೊರಬರುತ್ತಿರುವ ಬನ್ನಂಜೆ ರಾಜ
ಉಡುಪಿ, ಜುಲೈ.05: ಒಂದು ಕಾಲದ ಭೂಗತ ದೊರೆ, ಕರಾವಳಿಯ ಉದ್ಯಮಿಗಳ ನಿದ್ದೆಗೆಡಿಸಿದ್ದ ಬನ್ನಂಜೆ ರಾಜ ಸದ್ಯ ಜೈಲು ಹಕ್ಕಿ. ಆದರೆ ಆತನ ತಾಯಿಯ ಅನಾರೋಗ್ಯ ಹಿನ್ನೆಲೆಯಲ್ಲಿ ಜೈಲಿನಿಂದ ಒಂದು ದಿನದ ಮಟ್ಟಿಗೆ ಹೊರಬರಲು ನ್ಯಾಯಾಧೀಶರು ಅನುಮತಿ ನೀಡಿದ್ದಾರೆ.
ಸದ್ಯ ಬೆಳಗಾವಿಯ ಹಿಂಡಲಗಾ ಜೈಲಿನಲ್ಲಿರುವ ಬನ್ನಂಜೆ ರಾಜನ ಮೇಲೆ 16 ಕೇಸುಗಳಿದ್ದು, ಉಡುಪಿ ನ್ಯಾಯಾಲಯದಲ್ಲೂ ಶೂಟೌಟ್, ಬೆದರಿಸಿದ ಹಾಗೂ ದರೋಡೆ ಪ್ರಕರಣಗಳಿದ್ದು ವಿಚಾರಣೆ ನಡೆಯುತ್ತಲೇ ಇದೆ.
ಮೂಲತಃ ಉಡುಪಿಯವನಾದ ಬನ್ನಂಜೆ ರಾಜನ ತಾಯಿಯು ಕಲ್ಮಾಡಿಯಲ್ಲಿರುವ ಮನೆಯಲ್ಲಿ ವಾಸಿಸುತ್ತಿದ್ದು, ಅನಾರೋಗ್ಯದಿಂದ ಬಳಲುತ್ತಿದ್ದಾರೆ. ಆದ್ದರಿಂದ ನ್ಯಾಯಾಲಯಕ್ಕೆ ತಾಯಿಯನ್ನು ಕಾಣಲು ಮನವಿ ಮಾಡಿದ್ದ ರಾಜನಿಗೆ, ನ್ಯಾಯಾಧೀಶರು ಆತನ ಮನವಿ ಪುರಸ್ಕರಿಸಿದ್ದಾರೆ.

ಜುಲೈ 8 ರಂದು ಆತ ಕಲ್ಮಾಡಿಯ ತನ್ನ ಮನೆಗೆ ಬಂದು ತಾಯಿಯನ್ನು ನೋಡಲು ಆಗಮಿಸಲಿದ್ದಾರೆ ಎಂದು ಪೊಲೀಸ್ ಮೂಲಗಳು ಖಚಿತ ಪಡಿಸಿವೆ. ಇನ್ನೊಂದಡೆ ಮಾಜಿ ಡಾನ್ ನನ್ನು ಸ್ವಾಗತಿಸಲು ಆತನ ಬಂಟರು ಸಿದ್ದರಾಗಿದ್ದಾರೆ ಅನ್ನೋ ಮಾಹಿತಿಯೂ ಲಭಿಸಿದೆ.
2015 ರಲ್ಲಿ ಮೊರಕ್ಕೋ ದೇಶದಲ್ಲಿ ಬಂಧನಕ್ಕೀಡಾಗಿದ್ದ ಬನ್ನಂಜೆ ರಾಜನನ್ನು ಬಳಿಕ ಸಿಬಿಐ ಒದಗಿಸಿದ ದಾಖಲೆ ಅನ್ವಯ ಭಾರತಕ್ಕೆ ಹಸ್ತಾಂತರಿಸಲಾಗಿತ್ತು.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications