ಶೋಭಾ ಕರಂದ್ಲಾಜೆಗೆ ಟಿಕೆಟ್:ಪಕ್ಷೀಯರಿಂದಲೇ ನೋಟಾ ಅಭಿಯಾನ!
Recommended Video
ಉಡುಪಿ, ಮಾರ್ಚ್ 22: ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಹಾಲಿ ಸಂಸದೆ ಶೋಭಾ ಕರಂದ್ಲಾಜೆ ಹೆಸರು ಘೋಷಣೆಯಾದ ಬಳಿಕವೂ ಸಾಮಾಜಿಕ ಜಾಲತಾಣದಲ್ಲಿ ವಿರೋಧ ಮರೆಯಾಗಿಲ್ಲ.
ಸಮಗ್ರ ಮಾಹಿತಿಯುಳ್ಳ ಲೋಕಸಭೆ ಚುನಾವಣೆಯ ವಿಶೇಷ ಪುಟ
ಕಾರ್ಯಕರ್ತರ ಆಶೋತ್ತರಗಳಿಗೆ ಬಿಜೆಪಿ ಹೈ ಕಮಾಂಡ್ ಬೆಲೆ ನೀಡಿಲ್ಲಾ, ಉತ್ತರದಲ್ಲಿ ಕೆಲಸ ಮಾಡದ ಸಂಸದರಿಗೆ ಈ ಬಾರಿ ಟಿಕೆಟ್ ನೀಡದ ಬಿಜೆಪಿ ಹೈಕಮಾಂಡ್, ಅದು ಹೇಗೆ ಕರ್ನಾಟಕದಲ್ಲಿ ನೀಡಿತು ಎನ್ನುವ ಪ್ರಶ್ನೆಯನ್ನು ಕಾರ್ಯಕರ್ತರು ಸಾಮಾಜಿಕ ಜಾಲತಾಣದಲ್ಲಿ ಮುಂದಿಟ್ಟಿದ್ದಾರೆ.
ಶೋಭಾ ಕರಂದ್ಲಾಜೆ-ಪ್ರಮೋದ್ ಮಧ್ವರಾಜ್ ಜಿದ್ದಾಜಿದ್ದಿಗೆ ವೇದಿಕೆ ಸಿದ್ಧ
ಸದ್ಯ ಗೋ ಬ್ಯಾಕ್ ಶೋಭಾ ಮುಂದುವರಿದಿದ್ದು, ನೋಟಾ ಅಭಿಯಾನ ಪ್ರಾರಂಭಿಸುವ ಹೇಳಿಕೆಗಳು ವೈರಲ್ ಆಗುತ್ತಿವೆ.ಈ ಮುನ್ನ ಶೋಭಾ ಗೋ ಬ್ಯಾಕ್ ಅಭಿಯಾನ ಹಮ್ಮಿಕೊಂಡಿದ್ದ ಬಿಜೆಪಿ ಕಾರ್ಯಕರ್ತರು ,ಶೋಭಾಗೆ ಟಿಕೆಟ್ ನೀಡಿದ್ದಕ್ಕೆ ಅಸಮಾಧಾನಗೊಂಡಿದ್ದಾರೆ.ಇದರ ಪರಿಣಾಮವಾಗಿ ಸೋಶಿಯಲ್ ಮೀಡಿಯಾದಲ್ಲಿ ನೋಟಾ ಅಭಿಯಾನ ಜೋರಾಗಿಯೇ ನಡೀತಿದೆ.