ಪಿಸ್ತೂಲು ತೋರಿಸಿ ರೈಲಿನಲ್ಲಿ ನಾಲ್ಕು ಕೆ.ಜಿ. ಚಿನ್ನ ದೋಚಿ ಪರಾರಿ
ಉಡುಪಿ, ಸೆಪ್ಟೆಂಬರ್ 18 : ರೈಲಿನಲ್ಲಿ ಚಿನ್ನದ ವ್ಯಾಪಾರಿಯೊಬ್ಬರಿಗೆ ದುಷ್ಕರ್ಮಿಗಳ ತಂಡ ಪಿಸ್ತೂಲು ತೋರಿಸಿ, ಅಪಾರ ಪ್ರಮಾಣದ ಚಿನ್ನವನ್ನು ಕಸಿದು ಪರಾರಿಯಾದ ಘಟನೆ ಉಡುಪಿ ಹೊರವಲಯದ ಕಾಪು ಎಂಬಲ್ಲಿ ನಡೆದಿದೆ. ಈ ಘಟನೆ ಬೆಳಗ್ಗೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.
ಮುಂಬಯಿ- ತಿರುವನಂತಪುರ ನಡುವೆ ಸಂಚರಿಸುವ ನೇತ್ರಾವತಿ ಎಕ್ಸ್ ಪ್ರೆಸ್ ರೈಲಿನಲ್ಲಿ ಈ ಘಟನೆ ನಡೆದಿದೆ. ಮುಂಬಯಿಯ ಆಭರಣ ಕಂಪೆನಿಯೊಂದರಲ್ಲಿ ಉದ್ಯೋಗಿಯಾಗಿರುವ ರಾಜೇಂದ್ರ ಸಿಂಗ್ ರೈಲಿನ ಎಸ್ 7 ಬೋಗಿಯಲ್ಲಿ ಪ್ರಯಾಣಿಸುತ್ತಿದ್ದರು. ರೈಲು ಕಾಪು ತಲುಪುತ್ತಿದ್ದಂತೆ ದುಷ್ಕರ್ಮಿಗಳ ತಂಡ ರಾಜೇಂದ್ರ ಸಿಂಗ್ ಅವರ ಮೇಲೆ ಹಲ್ಲೆ ನಡೆಸಿದೆ.
ಈ ಸಂದರ್ಭದಲ್ಲಿ ಚಾಕು ಹಾಗೂ ಪಿಸ್ತೂಲ್ ತೋರಿಸಿದ ದುಷ್ಕರ್ಮಿಗಳ ತಂಡ ರಾಜೇಂದ್ರ ಸಿಂಗ್ ಅವರನ್ನು ಕೊಲ್ಲುವುದಾಗಿ ಬೆದರಿಸಿದೆ. ಆ ನಂತರ ರಾಜೇಂದ್ರ ಸಿಂಗ್ ಅವರ ಬಳಿಯಿದ್ದ 4.11 ಕಿಲೋ ಗ್ರಾಂ ಚಿನ್ನದ ಬಳೆಗಳನ್ನು ಕಸಿದುಕೊಂಡಿದೆ.

ಕಾಪುವಿನಲ್ಲಿ ಚಿನ್ನಾಭರಣ ಲೂಟಿ ಮಾಡಿದ ದುಷ್ಕರ್ಮಿಗಳ ತಂಡವು ಮಂಗಳೂರು ಹೊರವಲಯದ ಸುರತ್ಕಲ್ ನಿಲ್ದಾಣ ತಲಪುತ್ತಿದ್ದಂತೆ ರೈಲಿನಿಂದ ಇಳಿದು ಪರಾರಿಯಾಗಿದೆ.
ಈ ಕುರಿತು ಪಡುಬಿದ್ರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಪ್ರಕರಣದ ತನಿಖೆ ಚುರುಕುಗೊಂಡಿದ್ದು, ಕಾರ್ಕಳದ ಎಎಸ್ ಪಿ ನೇತೃತ್ವದಲ್ಲಿ ತನಿಖೆಗೆ ಪೊಲೀಸ್ ಅಧಿಕಾರಿಗಳ 3 ತಂಡ ರಚಿಸಲಾಗಿದೆ.
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications