ಶ್ರೀ ಕೊಲ್ಲೂರು ಮೂಕಾಂಬಿಕೆಗೆ ಚಿನ್ನದ ಖಡ್ಗ ನೀಡಿದ ತಮಿಳುನಾಡಿನ ಭಕ್ತ
ಉಡುಪಿ, ಅಕ್ಟೋಬರ್. 04: ಕೊಲ್ಲೂರು ಶ್ರೀ ಮೂಕಾಂಬಿಕೆಗೆ ತಮಿಳುನಾಡಿನ ಭಕ್ತರೊಬ್ಬರು ಚಿನ್ನಡ ಖಡ್ಗವನ್ನು ಹರಕೆ ರೂಪದಲ್ಲಿ ಅರ್ಪಿಸಿದ್ದಾರೆ. ತಮ್ಮ ಮನದ ಇಚ್ಛೆ ಪ್ರಾಪ್ತಿಯಾದ ಹಿನ್ನೆಲೆಯಲ್ಲಿ ಅವರು 1 ಕೆಜಿ ತೂಕದ ಚಿನ್ನಡ ಖಡ್ಗವನ್ನು ಮೂಕಾಂಬಿಕೆಗೆ ಸಮರ್ಪಿಸಿದ್ದಾರೆ.
ತಮಿಳುನಾಡಿನ ಕೊಯಮತ್ತೂರು ಮೂಲದ ಡಾ.ನಳಿನ್ ವಿಮಲ್ ಕುಮಾರ್ ಎಂಬುವವರು ಶ್ರೀ ಮೂಕಾಂಬಿಕೆಯಲ್ಲಿ ಕೆಲದಿನಗಳ ಹಿಂದೆ ಹರಕೆ ಹೊತ್ತುಕೊಂಡಿದ್ದರು. ಹರಕೆ ಫಲಿಸಿದ ಹಿನ್ನೆಲೆಯಲ್ಲಿ ಡಾ.ನಳೀನ್ ವಿಮಲ್ ಕುಮಾರ್ 30 ಲಕ್ಷ ರೂಪಾಯಿ ಬೆಲೆಬಾಳುವ ಚಿನ್ನದ ಖಡ್ಗವನ್ನು ತಂದು ಶ್ರೀ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಅರ್ಪಿಸಿದ್ದಾರೆ.

ದೇಗುಲದ ಕಾರ್ಯನಿರ್ವಹಣಾಧಿಕಾರಿ ಹಾಲಪ್ಪ ಅವರಿಗೆ ಚಿನ್ನದ ಖಡ್ಗವನ್ನು ಡಾ.ನಳಿನ್ ವಿಮಲ್ ಕುಮಾರ್ ಹಸ್ತಾಂತರಿಸಿದ್ದು, ಸದ್ಯ ಖಡ್ಗವನ್ನು ದೇವಾಲಯದ ಲಾಕರ್ ನಲ್ಲಿ ಇಡಲಾಗಿದೆ. ಕೊಲ್ಲೂರು ಮೂಕಾಂಬಿಕೆಗೆ ಈವರೆಗೆ 5ಕ್ಕೂ ಹೆಚ್ಚು ಚಿನ್ನದ ದೊಡ್ಡ ಖಡ್ಗ, ಹತ್ತಾರು ಚಿನ್ನದ ಸಣ್ಣ ಖಡ್ಗ, 200ಕ್ಕೂ ಹೆಚ್ಚು ಬೆಳ್ಳಿ ಖಡ್ಗಗಳು ಹರಕೆ ರೂಪದಲ್ಲಿ ಬಂದಿವೆ.

ಶ್ರೀ ಕ್ಷೇತ್ರ ಕೊಲ್ಲೂರು ಮೂಕಾಂಬಿಕೆಗೆ ಈ ಹಿಂದೆ ತಮಿಳುನಾಡಿನ ಮಾಜಿ ಸಿಎಂ ಎಂ.ಜಿ. ರಾಮಚಂದ್ರನ್ ಅವರು ನೀಡಿದ್ದ ಚಿನ್ನದ ಖಡ್ಗವನ್ನು ಶ್ರೀ ದೇವಿಯ ಅಲಂಕಾರ ಸಂದರ್ಭ ಪ್ರತಿನಿತ್ಯ ಬಳಸಲಾಗುತ್ತಿದೆ.
-
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
ವೈಭವ್ ಸೂರ್ಯವಂಶಿ ಆಕ್ರಮಣಕಾರಿ ಆಟಕ್ಕೆ ಇಂಗ್ಲೆಂಡ್ ಮೈಕೆಲ್ ವಾಘನ್ ಫಿದಾ; ಬಿಸಿಸಿಐಗೆ ವಿಶೇಷ ಮನವಿ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Summer Drinks: ಬಿಸಿಲಿನಲ್ಲಿ ದೇಹಕ್ಕೆ ಬೆಸ್ಟ್ ಡ್ರಿಂಕ್ ಯಾವುದು? ಎಳನೀರು ಅಥವಾ ಮಜ್ಜಿಗೆ












Click it and Unblock the Notifications