ಉಡುಪಿಯ ಸೇಕ್ರೆಡ್ ಹಾರ್ಟ್ ಚರ್ಚ್ ನಲ್ಲಿ ವಿಶಿಷ್ಟ ರೀತಿಯಲ್ಲಿ ಗುಡ್ ಫ್ರೈಡೇ ಆಚರಣೆ
ಉಡುಪಿ, ಏಪ್ರಿಲ್ 19:ಯೇಸು ಕ್ರಿಸ್ತರು ಶಿಲುಬೆಗೇರಿ ಸಾವನಪ್ಪಿದ ದಿನವಾದ ಗುಡ್ ಫ್ರೈ ಡೇಯನ್ನು ಉಡುಪಿಯೆಲ್ಲೆಡೆ ಶ್ರದ್ಧಾ ಭಕ್ತಿಯಿಂದ ಆಚರಿಸಲಾಯಿತು.ಉಡುಪಿ ಸಮೀಪದ ಕೊಳಲಗಿರಿಯ ಸೇಕ್ರೆಡ್ ಹಾರ್ಟ್ ಚರ್ಚಿನಲ್ಲಿ ವಿಶಿಷ್ಟ ರೀತಿಯಲ್ಲಿ ಆಚರಿಸಿದ್ದು ಎಲ್ಲರ ಗಮನ ಸೆಳೆಯಿತು.
ಲೋಕಸಭಾ ಚುನಾವಣೆ 2019 : ವಿಶೇಷ ಪುಟ | ಗ್ಯಾಲರಿ
ಚರ್ಚಿನ ಧರ್ಮಗುರು ಅನಿಲ್ ಪ್ರಕಾಶ್ ಡಿಸಿಲ್ವಾ ನೇತೃತ್ವದಲ್ಲಿ ಐಸಿವೈಎಮ್ ಸಂಘಟನೆಯ ಸಹಭಾಗಿತ್ವದೊಂದಿಗೆ ಒಟ್ಟು 50 ಮಂದಿ ಕಲಾವಿದರು ಏಸುಕ್ರಿಸ್ತರ ಮರಣದಂಡನೆಯ ಸನ್ನಿವೇಶವನ್ನು ಮನೋಜ್ಞ ನಟನೆ ಮೂಲಕ ಪ್ರಚುರಪಡಿಸಿದರು.
ಯೇಸು ಕ್ರಿಸ್ತರು ಮರಣದಂಡನೆಗೆ ಗುರಿಯಾಗುವಲ್ಲಿಂದ ಆರಂಭಿಸಿ ಶಿಲುಬೆ ಹೊತ್ತು ಕಲ್ವಾರಿ ಬೆಟ್ಟಕ್ಕೆ ಸಾಗಿ ಅಲ್ಲಿ ಶಿಲುಬೆಗೆ ಏರಿ ಮರಣವನ್ನಪ್ಪುವ ಘಟನೆಗಳನ್ನು ಅವಲೋಕಿಸಿ ಪ್ರಾರ್ಥಿಸುತ್ತಾ ಸಾಗುವ ಶಿಲುಬೆಯ ಹಾದಿಯ ಪ್ರಕ್ರಿಯೆಯನ್ನು ನಟನೆಯ ಮೂಲಕ ಮೈದಾನದಲ್ಲಿ ನಡೆಸಿಕೊಟ್ಟರು.

ಈ ಮೂಲಕ ಕ್ರೈಸ್ತ ಭಕ್ತಾದಿಗಳಿಗೆ ಯೇಸು ಶಿಲುಬೆಯ ಹಾದಿಯಲ್ಲಿ ಅನುಭವಿಸಿದ ಕಷ್ಟ ನೋವು, ಯಾತನೆ ಮರಣವನ್ನು ತೋರಿಸಿಕೊಡುವ ವಿಶಿಷ್ಟ ಪ್ರಯತ್ನ ಮಾಡಲಾಯಿತು. ಜಿಲ್ಲೆಯ ಎಲ್ಲಾ ಚರ್ಚುಗಳಲ್ಲಿ ಬಲಿ ಪೂಜೆಯ ಬದಲು ಯೇಸುವಿನ ಶಿಲುಬೆಯ ಹಾದಿಯನ್ನು ಸಂಪೂರ್ಣವಾಗಿ ಪರಿಚಯಿಸುವ ಹೊಸ ಒಡಂಬಡಿಕೆಯ ಪವಿತ್ರ ಬೈಬಲಿನ ಪಠಣಗಳು ಕೂಡ ನಡೆದವು.
ಶಿಲುಬೆಯ ಹಾದಿಯಲ್ಲಿ ಯೇಸುವಿಗೆ ಮರಣ ದಂಡನೆಯನ್ನು ಹೇರಿದ ಬಳಿಕ ಯೇಸುಕ್ರಿಸ್ತರು ಭಾರವಾದ ಶಿಲುಬೆಯನ್ನು ಹೊತ್ತು ಮೂರು ಬಾರಿ ಬೀಳುವುದು, ಶಿಲುಬೆಯನ್ನು ಹೊತ್ತು ಸಾಗಲು ಕಷ್ಟವಾದಾಗ ಯೇಸುವಿನ ಸಹಾಯಕ್ಕೆ ಬಂದ ಸಿರೇನ್ ನಗರದ ಸಿಮಾಂವ್ ದೃಶ್ಯ, ಯೇಸು ಶಿಲುಬೆ ಹೊತ್ತು ಸಾಗುತ್ತಿದ್ದಾಗ ಅವರ ಆಯಾಸಭರಿತ ಮುಖವನ್ನು ಕರವಸ್ತ್ರದಲ್ಲಿ ಒರೆಸಲು ಬಂದ ವೆರೊನಿಕಾ, ಯೇಸುವನ್ನು ಶಿಲುಬೆಗೇರಿಸಿ ಮೊಳೆಯನ್ನು ಜಡಿಯುವ ದೃಶ್ಯಗಳು ನೈಜ ನಟನೆಯ ಮೂಲಕ ತೋರಿಸುವಾಗ ನೆರೆದಿದ್ದ ಭಕ್ತರ ಕಣ್ಣಾಲಿಗಳನ್ನು ಒದ್ದೆಯಾಗಿಸಿದವು.
ಸುಮಾರು 350ಕ್ಕೂ ಅಧಿಕ ಭಕ್ತಾದಿಗಳು ಉರಿಬಿಸಿಲಿನಲ್ಲಿ ದಣಿವಿನ ಅರಿವಿಲ್ಲದೆ ಭಕ್ತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡರು.
-
April 9 Horoscope: 12 ರಾಶಿಗಳಿಗೆ ಇಂದು ಸಂತೋಷ, ಸವಾಲು ಮತ್ತು ಅವಕಾಶಗಳ ಮಿಶ್ರ ಫಲ -
Viral: ಬೆಂಗಳೂರಿಗೆ ಕಾಲಿಟ್ಟಿತೇ ಡೇಂಜರಸ್ 'ಜಾಂಬಿ ಡ್ರಗ್'?: ಯುವಕನ ವಿಡಿಯೋ ನೋಡಿ ಬೆಚ್ಚಿಬಿದ್ದ ಸಿಲಿಕಾನ್ ಸಿಟಿ ಜನ -
PUC Results: 2026ರ ದ್ವಿತೀಯ PUC ಪರೀಕ್ಷೆ ಫಲಿತಾಂಶ ಪ್ರಕಟ, ಇವರೇ ನೋಡಿ ಟಾಪರ್ -
Dhurandhar-2 OTT: ನೆಟ್ಫ್ಲಿಕ್ಸ್ ಅಲ್ಲ, ಈ ಒಟಿಟಿಯಲ್ಲಿ 'ಧರಂಧರ-2' ಅಬ್ಬರ, ಯಾವಾಗ? -
Ragi Price Today: ಕರ್ನಾಟಕದ ಮಾರುಕಟ್ಟೆಗಳಲ್ಲಿ ಇಂದಿನ "ರಾಗಿ' ಬೆಲೆ ಎಷ್ಟಿದೆ? ಲೇಟೆಸ್ಟ್ ಅಪ್ಡೇಟ್ -
Rain in Karnataka: ಕರ್ನಾಟಕದ ಕರಾವಳಿಯಲ್ಲಿ ಭಾರೀ ಬಿಸಿಲು; ಬೆಂಗಳೂರು ಸೇರಿ ಈ ಭಾಗಗಳಲ್ಲಿ ಮಳೆ: ಐಎಂಡಿ -
Election Commission: ಚುನಾವಣೆ ಸಮಯದಲ್ಲೇ ಭಾರತೀಯ ಚುನಾವಣಾ ಆಯೋಗದ ಟ್ವೀಟ್ ಎಡವಟ್ಟು, ಬಿಜೆಪಿ ಪರ ಎಂದ ವಿರೋಧ ಪಕ್ಷಗಳು -
Dhurandhar 2: ದುರಂಧರ್ 2 ಸಿನಿಮಾ: ಬಾಕ್ಸ್ ಆಫೀಸ್ನಲ್ಲಿ 1,000 ಕೋಟಿ ದಾಖಲೆಯ ನಡುವೆ ಹೊಸ ಸಂಕಷ್ಟ -
Zombis Drug: ಬೆಂಗಳೂರಲ್ಲಿ ಜಾಂಬಿ ಡ್ರಗ್ಸ್ ಸೇವಿಸಿ ಯುವಕನ ವಿಚಿತ್ರ ವರ್ತನೆ: ನಟ ದುನಿಯಾ ವಿಜಯ್ ವಿಡಿಯೋ ವೈರಲ್ -
Assembly Elections 2026: ಕೇರಳಂ, ಅಸ್ಸಾಂ, ಪುದುಚೇರಿ ವಿಧಾನಸಭೆ ಚುನಾವಣೆ ಮತದಾನ ಪ್ರಾರಂಭ -
Karnataka 2nd Puc Results 2026: ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ; ರಾಜ್ಯದಲ್ಲಿ ಯಾವ ಜಿಲ್ಲೆ ಎಷ್ಟನೇ ಸ್ಥಾನ? -
Chandrika Dixit: ಒಂದು ರಾತ್ರಿ ನನ್ನ ಜೊತೆ ಮಲಗಿದ್ರೆ 50 ಲಕ್ಷ ಕೊಡ್ತೇನೆ; ಚಂದ್ರಿಕಾಗೆ ಖ್ಯಾತ ಉದ್ಯಮಿ ಆಫರ್












Click it and Unblock the Notifications