ಮಠಕ್ಕೆ ಮುತ್ತಿಗೆ ಹಾಕಿದರೆ ಉಪವಾಸ ಮಾಡ್ತೀನಿ: ಪೇಜಾವರ ಶ್ರೀ
ಉಡುಪಿ, ಅಕ್ಟೋಬರ್ 14: ಉಡುಪಿಯ ಕೃಷ್ಣ ಮಠಕ್ಕೆ ಮುತ್ತಿಗೆ ಹಾಕಿದರೆ ಅನಿರ್ದಿಷ್ಟಾವಧಿ ಉಪವಾಸ ಮಾಡುತ್ತೇವೆ ಎಂದು ಪೇಜಾವರ ಶ್ರೀ ವಿಶ್ವೇಶ ತೀರ್ಥ ಸ್ವಾಮೀಜಿ ಹೇಳಿದ್ದಾರೆ. ಮಾಧ್ಯಮದವರ ಜತೆ ಗುರುವಾರ ಮಾತನಾಡಿದ ಅವರು, 'ಉಡುಪಿ ಚಲೋ' ಸಮಾವೇಶದಲ್ಲಿ ಮಠಕ್ಕೆ ಮುತ್ತಿಗೆ ಹಾಕುವುದಾಗಿ ಹೇಳಿದ್ದಾರೆ. ಮಠಕ್ಕೆ ರಕ್ಷಣೆ ನೀಡುವುದು ಸರಕಾರದ ಕರ್ತವ್ಯ ಎಂದು ಹೇಳಿದ್ದಾರೆ.
ಗೋ ರಕ್ಷಕರಿಂದ ಆಗುತ್ತಿರುವ ಹಿಂಸಾಚಾರ ವಿರೋಧಿಸಿ ಈ ಸಮಾವೇಶ ಹಮ್ಮಿಕೊಳ್ಳಲಾಗಿತ್ತು. ಅಲ್ಲಿ ಅನಗತ್ಯವಾಗಿ ಮಠದ ವಿಷಯ ತಂದಿದ್ದಾರೆ. ಅಂತಹ ಹಿಂಸಾಚಾರಕ್ಕೆ ನಮ್ಮ ವಿರೋಧವಿದೆ ಎಂದು ಈಗಾಗಲೇ ತಿಳಿಸಿದ್ದೇವೆ ಎಂದಿದ್ದಾರೆ.['ತುಳುನಾಡ್ ತಿರ್ಗಾಟದ ತೇರ್'ಗೆ ಪೇಜಾವರ ಶ್ರೀ ಸ್ವಾಗತ]

ಪೇಜಾವರ ಸ್ವಾಮೀಜಿ ಮೆದುಳನ್ನು ಸ್ವಚ್ಛಗೊಳಿಸಬೇಕು ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ದಿನೇಶ್ ಅಮಿನ್ ಮಟ್ಟು ಹೇಳಿದ್ದಾರೆ. ಲಿಂಗ ದೀಕ್ಷೆ ಪಡೆಯದವರ ಜತೆ ಭೋಜನ ಮಾಡುವುದು ಏಳು ಜನ್ಮಗಳ ನರಕಕ್ಕೆ ಕಾರಣವಾಗುತ್ತದೆ ಎಂದು ಬಸವಣ್ಣ ಹೇಳಿದ್ದರು. ಅದಕ್ಕೆ ಸಂಬಂಧಿಸಿದ ವಚನವನ್ನು ಉದಾಹರಣೆ ನೀಡಬಲ್ಲೆ. ಹಾಗಿದ್ದರೆ ಬಸವಣ್ಣನವರ ಮೆದುಳನ್ನೂ ಅಮಿನ್ ಮಟ್ಟು ಸ್ವಚ್ಛಗೊಳಿಸುವರೆ ಎಂದು ಪೇಜಾವರ ಶ್ರೀಗಳು ಪ್ರಶ್ನಿಸಿದರು.
ಉಡುಪಿಯ ಮಠದಲ್ಲಿ ದಲಿತರು, ಹಿಂದುಳಿದವರು, ಬ್ರಾಹ್ಮಣರು ಒಂದೇ ಪಂಕ್ತಿಯಲ್ಲಿ ಊಟ ಮಾಡುತ್ತಿದ್ದಾರೆ. ಕೆಲವು ಸಂಪ್ರದಾಯವಾದಿ ಬ್ರಾಹ್ಮಣರ ಅಪೇಕ್ಷೆಯ ಅನುಸಾರ ಪ್ರತ್ಯೇಕ ಭೋಜನ ವ್ಯವಸ್ಥೆ ಮಾಡಲಾಗುತ್ತಿದೆ ಎಂದಿದ್ದಾರೆ.[ಪೇಜಾವರ ಶ್ರೀ ಕನಕರ ಚಿನ್ನದ ಪ್ರತಿಮೆ ಮಾಡಿಸಿ ಕೃಷ್ಣ ದೇಗುಲದಲ್ಲಿಡಲಿ]
ಶೃಂಗೇರಿ, ಕುಕ್ಕೆ ಸುಬ್ರಹ್ಮಣ್ಯ, ಧರ್ಮಸ್ಥಳದಲ್ಲಿ ಈ ರೀತಿ ವ್ಯವಸ್ಥೆಯಿದೆ. ಆದರೆ ಉಡುಪಿ ಮಠದ ಬಗ್ಗೆ ಆಕ್ಷೇಪ ಏಕೆ? ಕೋಮು ಸೌಹಾರ್ದದ ಹೆಸರಿನಲ್ಲಿ ದಲಿತರು, ಮುಸ್ಲಿಮರನ್ನು ಬುದ್ಧಿಜೀವಿಗಳು ಎತ್ತಿಕಟ್ಟುತ್ತಿದ್ದಾರೆ ಎಂದು ಆರೋಪಿಸಿದರು.
ಅಸ್ಪೃಶ್ಯತೆ ನಿವಾರಣೆಗಾಗಿ ದಶಕಗಳಿಂದ ಯತ್ನಿಸುತ್ತಿದ್ದೇವೆ. ದಲಿತರ ಕೇರಿಗಳಿಗೆ ಭೇಟಿ ನೀಡುತ್ತಿದ್ದೇನೆ. ಅಲ್ಲಿ ಭಕ್ತರು ಪ್ರೀತಿಯಿಂದ ಪಾದ ತೊಳೆದರೆ ತಪ್ಪೇನಿದೆ ಎಂದು ಪ್ರಶ್ನಿಸಿದರು.
-
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
ರಾಮಚಂದ್ರ ರಾವ್ ಪ್ರಕರಣ: 'ಎಐ' ಅಲ್ಲ ಅಸಲಿ ವಿಡಿಯೋ; ಎಫ್ಎಸ್ಎಲ್ ವರದಿಯಲ್ಲಿ ಬಯಲಾಯ್ತು ಸತ್ಯ -
New Railway Lines: ಬಿರೂರು-ಶಿವಮೊಗ್ಗ ರೈಲು ಹಳಿ ಡಬ್ಲಿಂಗ್, ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ಸಂಪರ್ಕಕ್ಕೆ ಒತ್ತಾಯ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Anil Kumble: ವಿರಾಟ್ ಕೊಹ್ಲಿ-ಬೆಂಗಳೂರು ನಡುವಿನ ಅವಿನಾಭಾವ ಸಂಬಂಧದ ಬಗ್ಗೆ ಕನ್ನಡಿಗ ಅನಿಲ್ ಕುಂಬ್ಳೆ ಮನದಾಳದ ಮಾತು -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣದ ಸ್ಥಳ: ಸಚಿವ ಎಂ.ಬಿ.ಪಾಟೀಲ್ ಮಹತ್ವದ ಮಾಹಿತಿ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
March 19 Horoscope: ಈ ರಾಶಿಯವರಿಗೆ ಶುಭಸುದ್ದಿ, ಇತರರಿಗೆ ಎಚ್ಚರಿಕೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
SCR Railway Recruitment 2026: ಲಿಖಿತ ಪರೀಕ್ಷೆ ಇಲ್ಲದೇ ನೇಮಕಾತಿ, 2801 ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ












Click it and Unblock the Notifications