ಉಡುಪಿಯಲ್ಲಿ ಮರಳುಗಾರಿಕೆ ದೋಣಿಗಳಿಗೆ ಜಿಪಿಎಸ್ ಕಡ್ಡಾಯ
ಉಡುಪಿ, ಸೆಪ್ಟೆಂಬರ್ 12: ಉಡುಪಿ ಜಿಲ್ಲೆಯ ಸಿಆರ್ ಝೆಡ್ ವ್ಯಾಪ್ತಿಯಲ್ಲಿ ಮರಳುಗಾರಿಕೆಯನ್ನು ಸಂಪೂರ್ಣ ನಿಷೇಧಿಸಲಾಗಿದ್ದು, ಸಮುದ್ರದಲ್ಲಿ ದೋಣಿಗಳು ಸಂಚರಿಸಲು ಅಡ್ಡಿಯಾಗಿರುವ ಮರುಳು ದಿಬ್ಬಗಳನ್ನು ಮಾತ್ರ ತೆಗೆಯಲು ಅವಕಾಶ ನೀಡಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಪ್ರಮೋದ್ ಮಧ್ವರಾಜ್ ತಿಳಿಸಿದ್ದಾರೆ.
ರಜತಾದ್ರಿಯ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಕಚೇರಿಗೆ ಭೇಟಿ ನೀಡಿ ಮಾತನಾಡಿ, ಎನ್ ಐಟಿಕೆ ತಜ್ಞರ ತಂಡದಿಂದ ಸಮುದ್ರದಲ್ಲಿ ದೋಣಿಗಳ ಸಂಚಾರಕ್ಕೆ ಅಡ್ಡಿಯಾಗಿರುವ ಮರಳು ದಿಬ್ಬಗಳನ್ನು ಗುರುತಿಸಲಾಗಿದ್ದು, ಆ ಪ್ರದೇಶದಲ್ಲಿ ಮಾತ್ರ ಮರಳು ತೆಗೆಯಲು ಅನುಮತಿ ನೀಡಲಾಗಿದೆ ಎಂದರು.

ಅಲ್ಲಿ ತೆಗೆಯುವ ಮರಳನ್ನು ಜಿಲ್ಲೆಯ ಉಪಯೋಗಕ್ಕೆ ಮಾತ್ರ ಬಳಸುವಂತೆ ತಿಳಿಸಿದ ಅವರು, ಯಾವುದೇ ಕಾರಣಕ್ಕೂ ಜಿಲ್ಲೆಯಿಂದ ಹೊರಗೆ ಮರಳನ್ನು ಸಾಗಿಸದಂತೆ ಸೂಚಿಸಿದರು.
ಮರಳುಗಾರಿಕೆಗೆ ತೆರಳುವ ದೋಣಿಗಳಿಗೆ ಜಿಪಿಎಸ್ ಸಾಧನಗಳನ್ನು ಕಡ್ಡಾಯವಾಗಿ ಅಳವಡಿಸುವಂತೆ ಹಾಗೂ ತಮಗೆ ಅವಕಾಶ ನೀಡಿದ ಪ್ರದೇಶ ಬಿಟ್ಟು ಬೇರೆಡೆಯಲ್ಲಿ ಮರಳು ತೆಗೆಯದಂತೆ ಸಚಿವರು ಸೂಚಿಸಿದರು. ಜಿಪಿಎಸ್ ಅಳವಡಿಕೆಯಿಂದ ಮರಳುಗಾರಿಕೆಯ ಪ್ರತಿ ಮಾಹಿತಿ ಲಭ್ಯವಾಗಲಿದ್ದು, ಯಾವುದೇ ಅಕ್ರಮಕ್ಕೆ ಅವಕಾಶವಿಲ್ಲ ಎಂದರು.
ಮರಳು ತೆಗೆಯಲು ಪರ್ಮಿಟ್ ಪಡೆದಿರುವ ಪ್ರತಿಯೊಬ್ಬರಿಗೂ ಜಿಪಿಎಸ್ ಅಳವಡಿಕೆ ಕುರಿತು ಮಾಹಿತಿ ನೀಡಿದ ಪ್ರಮೋದ್ ಮಧ್ವರಾಜ್, ರಾಷ್ಟ್ರೀಯ ಹಸಿರು ಪೀಠ ಹಾಕಿರುವ ಷರತ್ತುಗಳ ಅನ್ವಯ ಮರಳುಗಾರಿಕೆ ನಡೆಸುವಂತೆ ಎಲ್ಲ ಪರ್ಮಿಟ್ ದಾರರಿಗೆ ತಿಳಿಸಿದರು.
ನಿಯಮಗಳನ್ನು ಉಲ್ಲಂಘಿಸಿದಲ್ಲಿ ಹಸಿರು ಪೀಠದಿಂದ ಜಿಲ್ಲೆಯಲ್ಲಿ ಮರುಳುಗಾರಿಕಗೆ ತಡೆಯಾಜ್ಞೆ ಬರಲಿದೆ ಎಂದು ಹೇಳಿದ ಅವರು ಜಿಲ್ಲೆಯ ಜನತೆಯ ಹಿತಕ್ಕಾಗಿ ಮತ್ತು ಪರಿಸರ ರಕ್ಷಣೆಗಾಗಿ ಕೆಲಸ ಮಾಡುತ್ತಿದ್ದೇನೆ. ಸುಮ್ಮನೆ ಆರೋಪಗಳ್ನು ಮಾಡಬೇಡಿ ಎಂದರು.
ಜಿಲ್ಲೆಯಲ್ಲಿ ಮರಳುಗಾರಿಕೆ ವಾಹನಗಳಿಗೆ ಮತ್ತು ದೋಣಿಗಳಿಗೆ ಜಿಪಿಎಸ್ ಅಳವಡಿಸಲು ಟೆಲಿಮ್ಯಾಟಿಕ್ಸ್ ಫಾರ್ ಯು ಸರ್ವಿಸ್ ಕಂಪೆನಿ ಟೆಂಡರ್ ಪಡೆದಿದ್ದು, ಉತ್ತರ ಕನ್ನಡ ಜಿಲ್ಲೆಯಲ್ಲಿಯೂ ಯಶಸ್ವಿಯಾಗಿ ಜಿಪಿಎಸ್ ಅಳವಡಿಸಿ ಮರಳುಗಾರಿಕೆ ನಡೆಸಲಾಗುತ್ತಿದೆ ಎಂದು ಹೇಳಿದರು.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications