ಉಡುಪಿ: ಜು.1ರಿಂದ ಖಾಸಗಿ ಬಸ್ ಸಂಚಾರ ಆರಂಭಕ್ಕೆ ಗ್ರೀನ್ಸಿಗ್ನಲ್
ಉಡುಪಿ, ಜೂನ್ 25: ಕೋವಿಡ್- 19 ಲಾಕ್ಡೌನ್ನಿಂದ ಖಾಸಗಿ ಬಸ್ ಸಂಚಾರ ಸ್ಥಗಿತಗೊಳಿಸಲಾಗಿದ್ದು, ಪ್ರಸ್ತುತ ಅನ್ಲಾಕ್ ಆದರೂ ಬಸ್ಗಳ ಸಂಚಾರ ಆರಂಭಿಸದ ಹಿನ್ನಲೆಯಲ್ಲಿ ಇಂದು ಉಡುಪಿಯಲ್ಲಿ ಸಭೆ ನಡೆಸಲಾಯಿತು.
ಜೂ. 21ರಿಂದ ಕೆಎಂಸಿ ಮಣಿಪಾಲ ಆಸ್ಪತ್ರೆಯಲ್ಲಿ ಎಲ್ಲ ಸೇವೆ ಲಭ್ಯ
ನಿತ್ಯದ ಕೆಲಸ ಕಾರ್ಯಗಳಿಗೆ ತೆರಳುವ ಜನ ಸಾಮಾನ್ಯರು ಕಷ್ಟಪಡುವುದನ್ನು ಗಮನಿಸಿದ ಉಡುಪಿ ಶಾಸಕ ಕೆ. ರಘುಪತಿ ಭಟ್, ಖಾಸಗಿ ಬಸ್ ಸಂಚಾರ ಪುನರಾರಂಭಿಸಲು ಇಂದು ಉಡುಪಿ ಜಿಲ್ಲಾಧಿಕಾರಿಗಳ ಕೋರ್ಟ್ ಹಾಲ್ ಕಚೇರಿಯಲ್ಲಿ ಅಧಿಕಾರಿಗಳು ಹಾಗೂ ಖಾಸಗಿ ಬಸ್ ಮಾಲೀಕರ ಸಂಘದವರೊಂದಿಗೆ ಸಭೆ ನಡೆಸಿದರು.
ಸಭೆಯಲ್ಲಿ ಕೋವಿಡ್ ನಿಯಮಾವಳಿಯಂತೆ ಬಸ್ನಲ್ಲಿ ದೈಹಿಕ ಅಂತರವನ್ನು ಕಾಯ್ದುಕೊಂಡು ಜುಲೈ 1ರಿಂದ ಉಡುಪಿ ಜಿಲ್ಲೆಯಲ್ಲಿ ಬಸ್ ಆರಂಭಿಸಲು ನಿರ್ಣಯಿಸಲಾಯಿತು.
Recommended Video
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಜಿ. ಜಗದೀಶ್, ಪ್ರಾದೇಶಿಕ ಸಾರಿಗೆ ಅಧಿಕಾರಿಗಳಾದ ಜೆ.ಪಿ ಗಂಗಾಧರ್, ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು, ಹೆಚ್ಚುವರಿ ಪೊಲೀಸ್ ಅಧೀಕ್ಷಕ ಕುಮಾರ್ ಚಂದ್ರ, ಉಡುಪಿ ಬಸ್ ಮಾಲೀಕರ ಸಂಘದ ಅಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್, ಪದಾಧಿಕಾರಿಗಳಾದ ಸದಾನಂದ ಚಾತ್ರ, ಪ್ರಸಾದ್ ಬಲ್ಲಾಳ್, ಶಿವರಾಮ ಶೆಟ್ಟಿ, ಸಂದೀಪ್ ಮುಂತಾದವರು ಉಪಸ್ಥಿತರಿದ್ದರು.