ಬಾಲಕಿಯ ಕಿಡ್ನಿ ಚಿಕಿತ್ಸೆಗೆ ವೇಷ ತೊಟ್ಟ ಯುವಕರ ತಂಡ
ಉಡುಪಿ, ಅಕ್ಟೋಬರ್ 8: ಹೊಟ್ಟೆಪಾಡಿಗಾಗಿ ಜನರು ನಾನಾ ವೇಷ ಹಾಕುವುದು ಸಾಮಾನ್ಯ. ಆದರೆ ಉಡುಪಿಯ ಈ ಯುವಕರ ತಂಡ ಬಾಲಕಿಯೊಬ್ಬಳ ಕಿಡ್ನಿಯ ಚಿಕಿತ್ಸೆಗಾಗಿ ವೇಷ ಹಾಕಿ ಧನ ಸಹಾಯ ಯಾಚಿಸುತ್ತಿದೆ. ವೇಷ ಹಾಕುವುದು ಒಬ್ಬ ಯುವಕನಾದರೂ ಅನೇಕ ಯುವಕರು ಇದರ ಹಿಂದೆ ನಿಂತು ಕೆಲಸ ಮಾಡುತ್ತಿದ್ದಾರೆ.
ಉಡುಪಿಯ ಸಾಯಿಬ್ರಕಟ್ಟೆಯ ಸಿಂಚನಾಗೆ ಈಗಿನ್ನೂ ಹದಿನೈದರ ಹರೆಯ. ಆದರೆ ಆಕೆಯ ಕಿಡ್ನಿಯಲ್ಲಿ ತೊಂದರೆ ಉಂಟಾಗಿದ್ದು, ಬೇರೆ ಕಿಡ್ನಿ ಕಸಿಯ ಅವಶ್ಯಕತೆ ಇದೆ. ಬಡವರ ಮನೆಯ ಈ ಬಾಲಕಿಗೆ ಲಕ್ಷಾಂತರ ರೂ ಖರ್ಚು ಮಾಡಿ ಚಿಕಿತ್ಸೆ ನೀಡುವುದು ಕಷ್ಟದ ಮಾತೇ ಸರಿ. ಇದನ್ನು ಅರಿತ ಉಡುಪಿಯ ಯುವ ಟೈಗರ್ಸ್ ತಂಡ ಯುವಕನೊಬ್ಬನಿಗೆ ವಿಶಿಷ್ಟ ವೇಷವೊಂದನ್ನು ಹಾಕಿಸಿ ಬಾಲಕಿಗಾಗಿ ಧನ ಸಹಾಯ ಯಾಚಿಸುತ್ತಿದೆ.

ಕರಾವಳಿಯಲ್ಲಿ ಶಾರದಾ ಉತ್ಸವದ ಸಡಗರವೂ ಇರುವುದರಿಂದ ಜನ ಸಂದಣಿ ಇರುವ ಕಡೆಗಳಲ್ಲಿ ಮತ್ತು ವಾಹನ ಸವಾರರಲ್ಲಿ ಈ ತಂಡ ಧನ ಸಹಾಯ ಕೇಳುತ್ತಿದೆ. ಸಹೃದಯರು ಯುವಕರ ಮನವಿಗೆ ಸ್ಪಂದಿಸಿ ಕೈಲಾದ ಧನ ಸಹಾಯ ಮಾಡುತ್ತಿದ್ದಾರೆ. ಈ ತಂಡ ಉಡುಪಿಯಿಂದ ಮಂಗಳೂರು ತನಕವೂ ಸಂಚರಿಸಿ ಹಣ ಸಂಗ್ರಹ ಮಾಡಿ ಸಿಂಚನಾ ಚಿಕಿತ್ಸೆಗೆ ನೀಡಲಿದೆ.
-
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Rain: ಕರ್ನಾಟಕದ ಕಾಶ್ಮೀರವಾದ ಮಾಚಾಪುರ: ಜೆಸಿಬಿ ಮೂಲಕ ಆಲಿಕಲ್ಲು ತೆರವು, ಕಂಗಾಲಾದ ಅನ್ನದಾತ -
Tamarind Price: ಹುಣಸೆ ಬೆಲೆಯಲ್ಲಿ ಭರ್ಜರಿ ಹೆಚ್ಚಳ: ಇಂದಿನ ಬೆಲೆ ಎಷ್ಟಿದೆ, ಹುಣಸೆ ಹಣ್ಣು ಬೆಲೆ ಏರಿಕೆಗೆ ಕಾರಣವೇನು -
ಲಕ್ಷಾಂತರ ರೂಪಾಯಿ ಸಂಬಳದ ಕೆಲಸಕ್ಕೆ ಗುಡ್ಬೈ: ಸಿಂಗಾಪುರದಿಂದ ಮುಂಬೈಗೆ ಬಂದು ಕವಿಯಾದ ಭಾರತೀಯ ಮೂಲದ ಯುವತಿ -
Bengaluru School: ರಾಜಾಜಿನಗರದಲ್ಲಿ ಶಾಲೆ ವಿರುದ್ಧ ನಿವಾಸಿಗಳ ಬೇಸರ: ಹೈಕೋರ್ಟ್ ನೋಟಿಸ್ ಜಾರಿ -
Vande Bharat Express: ತಂಬಾಕು ಉಗಿಯಲು ಹೋಗಿ ಹೈಸ್ಪೀಡ್ ರೈಲಿಗೆ ಡಿಕ್ಕಿ, ವ್ಯಕ್ತಿ ಸಾವು Video -
ಮತಾಂತರವಾದರೆ SC ಸ್ಥಾನಮಾನ ರದ್ದು ಬಗ್ಗೆ ಸುಪ್ರೀಂ ಕೋರ್ಟ್ ತೀರ್ಪು; ಕೇಂದ್ರದ ವಿರುದ್ಧ ಕಾಂಗ್ರೆಸ್ ಕೆಂಡ












Click it and Unblock the Notifications