ಕುಂದಾಪುರ ಬಿಜೆಪಿಯ ಗುರುಶಿಷ್ಯರ ಶೀತಲ ಸಮರಕ್ಕೆ ಬಂಡಾಯದ ತುಪ್ಪ!
ಕುಂದಾಪುರದ ಮಟ್ಟಿಗೆ ಬಿಜೆಪಿ ಅಂದರೆ ಹಾಲಾಡಿ ಶ್ರೀನಿವಾಸ ಶೆಟ್ಟಿ , ಹಾಲಾಡಿ ಅಂದರೆ ಬಿಜೆಪಿ ಎಂಬಂತಿತ್ತು. ಬಿಜೆಪಿಯ ಅನೇಕ ಕಾರ್ಯಕರ್ತರು ಅವರನ್ನು 'ಕುಂದಾಪುರದ ವಾಜಪೇಯಿ' ಎಂದೂ ಕರೆಯುವುದುಂಟು.
ಅಂತಹ ನಾಯಕ ಕಳೆದ ಚುನಾವಣೆ ಹೊತ್ತಿಗೆ ಬಂಡಾಯ ಎದ್ದು ಬಿಜೆಪಿಗೆ ಗುಡ್ ಬೈ ಹೇಳಿ ಪಕ್ಷೇತರರಾಗಿ ನಿಂತು ಶಾಸಕರಾಗಿದ್ದು ಗೊತ್ತೇ ಇದೆ. ಈಗ ಹಾಲಾಡಿಯವರು ಮತ್ತೆ ಬಿಜೆಪಿಗೆ ಬಂದು ಟಿಕೆಟ್ ಗಿಟ್ಟಿಸಿಕೊಂಡಿದ್ದಾರೆ. ಆದರೆ ಕಳೆದ ಐದು ವರ್ಷಗಳ ಹಿಂದೆ ಹಾಲಾಡಿ ಶ್ರೀನಿವಾಸ ಶೆಟ್ಟರಿಗಿದ್ದ ವರ್ಚಸ್ಸು ಹಾಗೇ ಇದೆಯಾ?
ಕುಂದಾಪುರದ ಸುದ್ದಿಯ ಪ್ರಕಾರ, ಹಾಲಾಡಿ ಶ್ರೀನಿವಾಸ ಶೆಟ್ಟಿ ವಿರುದ್ಧ ಮೂಲ ಬಿಜೆಪಿಗರು ತಿರುಗಿ ಬಿದ್ದಿದ್ದಾರೆ. ಬೂದಿ ಮುಚ್ಚಿದ ಕೆಂಡದಂತೆ ಇದ್ದ ಹಾಲಾಡಿ ವಿರುದ್ಧದ ಅಸಮಾಧಾನ ಈಗ ಸ್ಪೋಟಗೊಳ್ಳತೊಡಗಿದೆ. ಇದಕ್ಕೆ ಮಂಗಳವಾರ (ಏ 10) ಸಂಜೆ ನಡೆದ ವಿದ್ಯಮಾನವೇ ಸಾಕ್ಷಿ.
ವಿಧಾನಸಭೆ ಚುನಾವಣೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ | ಬಿಜೆಪಿ ಅಭ್ಯರ್ಥಿಗಳ ಮೊದಲ ಅಧಿಕೃತ ಪಟ್ಟಿ ಪ್ರಕಟ
ಹಾಲಾಡಿಗೆ ಟಿಕೆಟ್ ನೀಡಿದ ವಿಚಾರವಾಗಿ ಕುಂದಾಪುರ ಬಿಜೆಪಿಯಲ್ಲಿ ಭಿನ್ನಮತ ಭುಗಿಲೆದ್ದಿದೆ. ಏಳು ಜನ ಪದಾಧಿಕಾರಿಗಳು ತಮ್ಮ ಹುದ್ದೆಗೆ ರಾಜಿನಾಮೆ ನೀಡಿದ್ದಾರೆ. ಬಿಜೆಪಿಯ ಮೊದಲ ಪಟ್ಟಯಲ್ಲಿ ಹಾಲಾಡಿ ಶ್ರೀನಿವಾಸ ಶೆಟ್ಟಿಗೆ ಟಿಕೆಟ್ ಘೊಷಣೆಯಾಗಿತ್ತು. ಇದು ಬಿಜೆಪಿ ಮೂಲ ಕಾರ್ಯಕರ್ತರಲ್ಲಿ ಅಸಮಾಧಾನಕ್ಕೆ ಕಾರಣವಾಗಿದೆ.
ಕಳೆದ ಬಾರಿಯ ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಸೇರಿದಂತೆ ಏಳು ಪದಾಧಿಕಾರಿಗಳು ರಾಜೀನಾಮೆಯನ್ನು ಜಿಲ್ಲಾಧ್ಯಕ್ಷ ಮಟ್ಟಾರ್ ರತ್ನಾಕರ್ ಹೆಗ್ಡೆಗೆ ಸಲ್ಲಿಸಿದ್ದಾರೆ. ರಾಜೀನಾಮೆ ನೀಡಿದ ಪದಾಧಿಕಾರಿಗಳು ಹಾಲಾಡಿ ವಿರುದ್ಧ ಕೆಲಸ ಮಾಡುವುದಾಗಿಯೂ ಘೋಷಣೆ ಮಾಡಿದ್ದಾರೆ. ಇದು ಹಾಲಾಡಿಯವರಿಗೆ ದುಬಾರಿಯಾಗಿ ಪರಿಣಮಿಸುತ್ತಾ? ಸದ್ಯ ಹೀಗೊಂದು ಚರ್ಚೆ ಪ್ರಾರಂಭವಾಗಿದೆ. ಮುಂದೆ ಓದಿ..

ಯಡಿಯೂರಪ್ಪ, ಶೋಭಾ ಕರಂದ್ಲಾಜೆ ವಿರುದ್ಧ ಕಾರ್ಯಕರ್ತರ ಕಿಡಿ
ಇದೇ ವೇಳೆ ಯಡಿಯೂರಪ್ಪ ಹಾಗೂ ಶೋಭಾ ಕರಂದ್ಲಾಜೆ ವಿರುದ್ಧವೂ ಕಾರ್ಯಕರ್ತರು ಕಿಡಿಕಾರಿದ್ದಾರೆ. ಬಿಜೆಪಿಯಲ್ಲಿ ಪಕ್ಷ ತೊರೆದು ಬಂದವರಿಗೆ ಮಾತ್ರ ಅವಕಾಶ, ಸ್ಥಾನಮಾನದ ಹುದ್ದೆ ಸಿಗುತ್ತೆ. ಪಕ್ಷದ ನಿಷ್ಠಾವಂತ ಕಾರ್ಯಕರ್ತರಿಗೆ ಬೆಲೆ ಇಲ್ಲ ಎನ್ನುವ ಆಕ್ರೋಶ ವ್ಯಕ್ತವಾಗಿದೆ. ಇದೇ ವೇಳೆ ಮಾತನಾಡಿದ ಬಿಜೆಪಿ ಜಿಲ್ಲಾಧ್ಯಕ್ಷ ಮಟ್ಟಾರು ರತ್ನಾಕರ್ ಹೆಗ್ಡೆ,ಭಿನ್ನಮತ ಶಮನಗೊಳ್ಳುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಕುಂದಾಪುರ ಬಿಜೆಪಿ ಸದ್ಯ ಬೂದಿ ಮುಚ್ಚಿದ ಕೆಂಡದಂತಿದೆ.
ಒಟ್ಟಾರೆ ,ಕುಂದಾಪುರ ಬಿಜೆಪಿ ಸದ್ಯ ಬೂದಿ ಮುಚ್ಚಿದ ಕೆಂಡದಂತಿದೆ. ಹಾಲಾಡಿ ಶ್ರೀನಿವಾಸ ಶೆಟ್ಟಿಯವರು ಮೊದಲ ಪಟ್ಟಿಯಲ್ಲೇ ಟಿಕೆಟ್ ಪಡೆಯಲು ಯಶಸ್ವಿಯೇನೋ ಆದರು, ಆದರೆ ಪಕ್ಷ ತನ್ನ ಮೂಲ ಕಾರ್ಯಕರ್ತರ ವಿರೋಧ ಕಟ್ಟಿಕೊಳ್ಳುವಂತಾಗಿದೆ. ಪಕ್ಷ ತೊರೆದು ಹೋಗಿದ್ದ ಹಾಲಾಡಿ ಮತ್ತೆ ಬಿಜೆಪಿಗೆ ವಾಪಾಸಾದಾಗಲೇ ಕೆಲ ಕಾರ್ಯರ್ತರ ವಿರೋಧವಿತ್ತು.

ಕೊಡ್ಗಿ ಅವರು ಹಾಲಾಡಿ ಅಭ್ಯರ್ಥಿ ಆಗೋದಕ್ಕೆ ನನ್ನ ಸಹಮತ ಇಲ್ಲ ಎಂದು ಹೇಳಿದ್ದರು
ಹೆಚ್ಚೇಕೆ, ಸ್ವತ: ಹಾಲಾಡಿಯ ರಾಜಕೀಯ ಗುರು ಎ.ಜಿ.ಕೊಡ್ಗಿ ಅವರು ಹಾಲಾಡಿ ಅಭ್ಯರ್ಥಿ ಆಗೋದಕ್ಕೆ ನನ್ನ ಸಹಮತ ಇಲ್ಲ ಎಂದು ಬಹಿರಂಗವಾಗಿಯೇ ಕಿಡಿಕಾರಿದ್ದರು. ಹಾಲಾಡಿಗೆ ಟಿಕೆಟ್ ಕೊಟ್ಟರೆ ತಟಸ್ಥವಾಗಿ ಉಳಿಯುತ್ತೇನೆ ಎಂದು ಘೋಷಿಸಿದ್ದರು. ಇನ್ನು ,ಕುಂದಾಪುರದ ವಾಜಪೇಯಿ ಎಂಬ ಹೆಸರಿದ್ದರೂ ಹಾಲಾಡಿಯವರನ್ನು ಕಂಡರೆ ಸಂಘಪರಿವಾರಕ್ಕೂ ಅಷ್ಟಕ್ಕಷ್ಟೇ.

ಮೊದಲ ಪಟ್ಟಿಯಲ್ಲೇ ಟಿಕೆಟ್ ಕೊಡಿಸಲು ಬಿಎಸ್ವೈ ಯಶಸ್ವಿ
ಏನೇ ಇದ್ದರೂ ಪಕ್ಷದ ರಾಜ್ಯಾಧ್ಯಕ್ಷ ಯಡಿಯೂರಪ್ಪ ತಮ್ಮ ಬಂಟ ಹಾಲಾಡಿಗೆ ಮೊದಲ ಪಟ್ಟಿಯಲ್ಲೇ ಟಿಕೆಟ್ ಕೊಡಿಸಲು ಯಶಸ್ವಿಯಾಗಿದ್ದಾರೆ. ಕಾರ್ಯಕರ್ತರು ಪಕ್ಷದ ಮರ್ಯಾದೆಗೆ ಅಂಜಿ ಸೈಲೆಂಟಾಗಿದ್ದಾರೆ. ಜಯಪ್ರಕಾಶ ಹೆಗ್ಡೆ ಬಗ್ಗೆ ಒಲವು ತೋರಿದ್ದ ಮೂಲ ಬಿಜೆಪಿಗರು ಈಗ ವಿಧಿಯಿಲ್ಲದೆ ಹಾಲಾಡಿ ಅಭ್ಯರ್ಥಿತನವನ್ನು ಒಪ್ಪಿಕೊಳ್ಳಬೇಕಾಗಿದೆ.

ನಪ್ರಿಯತೆಯ ಮುಂದೆ ಎಲ್ಲಾ ಕೊಚ್ಚಿಹೋಗುತ್ತಾ?
ಒಂದು ಮೂಲದ ಪ್ರಕಾರ, ಹಾಲಾಡಿ ವಿರುದ್ಧ ಅಸಮಾಧಾನ ಇದ್ದರೂ, ಬಿಜೆಪಿ ಕಾರ್ಯಕರ್ತರು ಪಕ್ಷವನ್ನು ಬಲಿ ಕೊಡಲು ತಯಾರಿಲ್ಲ ಎಂದೂ ಹೇಳಲಾಗುತ್ತಿದೆ. ಕಳೆದ ಬಾರಿ 40 ಸಾವಿರ ಮತಗಳ ಅಂತರದಿಂದ ಹಾಲಾಡಿ ಶ್ರೀನಿವಾಸ ಶೆಟ್ಟಿ ಗೆಲುವಿನ ನಗೆ ಬೀರಿದ್ದರು. ಈ ಬಾರಿ ಅವರ ಗೆಲುವಿನ ಅಂತರ ಕಡಿಮೆಯಾಗಬಹುದೇ ಹೊರತು ಗೆಲುವಿಗೆ ತೊಡಕಾಗದು ಎಂಬ ಅಭಿಪ್ರಾಯಗಳೂ ಕೇಳಿ ಬರುತ್ತಿವೆ. ಒಟ್ಟಾರೆ ,ಬಿಜೆಪಿಯ ಈ ಭಿನ್ನಮತ ಫಲಿತಾಂಶದ ಮೇಲೆ ಪರಿಣಾಮ ಬೀರುತ್ತಾ? ಅಥವಾ ಹಾಲಾಡಿ ಜನಪ್ರಿಯತೆಯ ಮುಂದೆ ಎಲ್ಲಾ ಕೊಚ್ಚಿಹೋಗುತ್ತಾ? ಎಂಬುದನ್ನು ಕಾದು ನೋಡಬೇಕಿದೆ.
-
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಮಾರ್ಚ್ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Bengaluru: 50 ವಾರ್ಡ್ಗಳಲ್ಲಿ ಕಸ ವಿಲೇವಾರಿ ಸ್ಥಗಿತ; ವೇತನ ವಿಳಂಬಕ್ಕೆ ಮುನಿದು ಸಾಮೂಹಿಕ ರಜೆ ಹಾಕಿದ ಕಾರ್ಮಿಕರು -
ಮಾರ್ಚ್ 24ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Bengaluru: ಬಿಡಿಎಗೆ 50ರ ಸಂಭ್ರಮ; ಹೊಸ ಲೋಗೋ, ಟ್ಯಾಗ್ಲೈನ್ ವಿನ್ಯಾಸ ಮಾಡಿ 1 ಲಕ್ಷ ರೂ. ಬಹುಮಾನ ಗೆಲ್ಲಿ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು











Click it and Unblock the Notifications