ಹಾಲಾಡಿ ಸ್ಪರ್ಧೆಯಿಂದ ಬೈಂದೂರಲ್ಲಿ ಬಿಜೆಪಿಗೆ ಪ್ಲಸ್: ಸುಕುಮಾರ ಶೆಟ್ಟಿ
ಉಡುಪಿ, ಏಪ್ರಿಲ್ 14: "ನನ್ನನ್ನು ಬಿಟ್ಟು ಬೇರೆಯವರಿಗೆ ಟಿಕೆಟ್ ನೀಡಿದರೆ ಜನ ತೀರ್ಮಾನಿಸುತ್ತಾರೆ. ಆದರೆ ಟಿಕೆಟ್ ಸಿಕ್ಕಿಲ್ಲ ಎಂದು ಪಕ್ಷೇತರನಾಗಿ ಸ್ಪರ್ಧಿಸಲಾರೆ" ಎಂದು ಬೈಂದೂರು ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿ ಬಿ.ಎಂ.ಸುಕುಮಾರ ಶೆಟ್ಟಿ ಹೇಳಿದ್ದಾರೆ.
ಮಾಜಿ ಸಚಿವ ಜಯಪ್ರಕಾಶ್ ಹೆಗ್ಡೆಗೆ ಬೈಂದೂರಿನ ಎಲ್ಲ ಕ್ಷೇತ್ರದ ಪರಿಚಯ ಇರಲ್ಲ. ನಾನು ಯಾವುದೇ ಅಸಮಾಧಾನ ವ್ಯಕ್ತ ಪಡಿಸಲ್ಲ. ಆದರೆ ಯಾರು ಸೂಕ್ತ ವ್ಯಕ್ತಿ ಎಂದು ಜನ ನಿರ್ಧರಿಸುತ್ತಾರೆ. ಜಯಪ್ರಕಾಶ್ ಹೆಗ್ಡೆ ಬೈಂದೂರು ಕ್ಷೇತ್ರಕ್ಕೆ ಬರಲೇ ಇಲ್ಲ ಎಂದಿರುವ ಸುಕುಮಾರ ಶೆಟ್ಟರು, ಕ್ಷೇತ್ರದ ಜನ ಬುದ್ಧಿವಂತರಿದ್ದು, ಕ್ಷೇತ್ರದ ಅಭಿವೃದ್ಧಿಗೆ ಯಾರು ಸಮರ್ಥರು ಎಂಬುದು ಅವರಿಗೆ ಗೊತ್ತಿದೆ ಎಂದಿದ್ದಾರೆ.
ವಿಧಾನಸಭೆ ಚುನಾವಣೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ | ಬಿಜೆಪಿ ಅಭ್ಯರ್ಥಿಗಳ ಮೊದಲ ಅಧಿಕೃತ ಪಟ್ಟಿ ಪ್ರಕಟ
ಆ ಮೂಲಕ ಬೈಂದೂರು ಕ್ಷೇತ್ರಕ್ಕೆ ಬಿಜೆಪಿ ಟಿಕೆಟ್ ದೊರೆಯುವ ಬಗ್ಗೆ ಪ್ರಬಲ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಬಿಜೆಪಿ ಎರಡನೇ ಪಟ್ಟಿಯಲ್ಲಿ ಹೆಸರು ಬಂದರೂ ತಲೆ ಬಿಸಿ ಮಾಡುವುದಿಲ್ಲ. ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿಯಲ್ಲಿ ಶಾಸಕರು, ಮಾಜಿ ಶಾಸಕರ ಹೆಸರಿವೆ. ಆದ್ದರಿಂದ ನಾನು ಜನಪರ ಕೆಲಸ ಮಾಡಿರುವುದರಿಂದ ನನಗೆ ಟಿಕೆಟ್ ಸಿಕ್ಕೇ ಸಿಗುತ್ತದೆ ಎಂಬ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಕುಂದಾಪುರ ವಿಧಾನಸಭಾ ಕ್ಷೇತ್ರದಲ್ಲಿ ಹಾಲಾಡಿ ಶ್ರೀನಿವಾಸ ಶೆಟ್ಟರನ್ನು ಸೋಲಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದಿರುವ ಸುಕುಮಾರ ಶೆಟ್ಟರು, ಅವರು ಬಿಜೆಪಿ ಸೇರಿರುವುದರಿಂದ ಬೈಂದೂರು ಬಿಜೆಪಿಗೂ ಲಾಭ ಎಂಬ ಲೆಕ್ಕಾಚಾರದಲ್ಲಿದ್ದಾರೆ.
ಕುಂದಾಪುರ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿಯ ಕೆಲ ಮುಖಂಡರ ರಾಜೀನಾಮೆಯಿಂದ ಬೈಂದೂರು ಕ್ಷೇತ್ರದ ಮೇಲೆ ಕಿಂಚಿತ್ ಪರಿಣಾಮ ಇಲ್ಲ. ಅವರು ಬೈಂದೂರು ಕ್ಷೇತ್ರದವರಲ್ಲ ಎಂದು ಸುಕುಮಾರ ಶೆಟ್ಟಿ ಹೇಳಿದರು.
-
Udupi: ಉಡುಪಿ ಜಿಲ್ಲೆಗೆ 'ಸಂಪೂರ್ಣ ಸಾಕ್ಷರತಾ' ಸ್ಥಾನಮಾನ, ಶೀಘ್ರವೇ ಘೋಷಣೆ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
ಕನ್ನಡತಿ ಶ್ರೇಯಾಂಕಾ ಪಾಟೀಲ್, ಮಂಧಾನ ಜೊತೆ ಆರ್ಸಿಬಿ ಪಂದ್ಯ ವೀಕ್ಷಣೆ: ಕ್ರೀಡಾ ಸ್ಪೂರ್ತಿ ಮೆರೆದ ಜೆಮಿಮಾ ರೊಡ್ರಿಗಸ್ -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು












Click it and Unblock the Notifications