ಉಡುಪಿ: ಎಂಬಿಎ ಪದವೀಧರೆಯ ಕೈಯಲ್ಲಿ ಮತ್ತೆ ಅರಳುತ್ತಿವೆ ಕೈಮಗ್ಗದ ಸೀರೆಗಳು
ಉಡುಪಿ, ಸೆಪ್ಟೆಂಬರ್ 28: ಒಂದು ಕಾಲದಲ್ಲಿ ಬಹು ಬೇಡಿಕೆ ಇದ್ದ ಉಡುಪಿ ಸೀರೆ ಇದೀಗ ಬೇಡಿಕೆ ಕಳೆದುಕೊಂಡಿದ್ದರೂ, ಬೆರಳೆಣಿಕೆಯ ಮಂದಿಯ ಕೈಯಲ್ಲಿ ಮರು ಜೀವ ಪಡೆದುಕೊಳ್ಳುತ್ತಿದೆ.
ಉಡುಪಿ ಜಿಲ್ಲೆ ಮಣಿಪಾಲದ ಎಂಬಿಎ ಪದವೀಧರೆಯೊಬ್ಬರು ತಮ್ಮದೇ ಆಸಕ್ತಿಯಿಂದ ಕೈಮಗ್ಗವನ್ನು ಕಲಿಯುತ್ತಿದ್ದು, ಕೈಮಗ್ಗದಿಂದ ಉಡುಪಿ ಸೀರೆಗಳ ಮಾರುಕಟ್ಟೆ ಮತ್ತು ಮಾರಾಟಕ್ಕಾಗಿ ಪ್ರಯತ್ನ ಪಡುತ್ತಿದ್ದಾರೆ.
ಮಣಿಪಾಲದ ಟ್ಯಾಪ್ಮಿ ಸಂಸ್ಥೆಯಲ್ಲಿ ಎಂಬಿಎ ಪದವಿ ಪಡೆದ ಮಹಾಲಸಾ ಕಿಣಿ, ಪುಣೆಯ ಕಂಪನಿ ಒಂದರಲ್ಲಿ ಉದ್ಯೋಗ ಮಾಡುತಿದ್ದರು. ಆದರೆ ಅಲ್ಲಿಯ ಕೆಲಸಕ್ಕೆ ರಾಜೀನಾಮೆ ನೀಡಿ ಉಡುಪಿಯ ಕೈಮಗ್ಗದ ಸೀರೆಗಳ ಮೇಲಿನ ಆಸಕ್ತಿಯಿಂದ ಊರಿಗೆ ಮರಳಿದರು.

ಉಡುಪಿಯ ನೇಕಾರರೊಂದಿಗೆ ಬೆರೆತು ಈಗ ಉಡುಪಿ ಸೀರೆಗಳನ್ನು ಅಂತರಾಷ್ಟ್ರೀಯ ಮಟ್ಟದಲ್ಲಿ ಪ್ರಚಾರಪಡಿಸಲು ಯೋಜನೆಯನ್ನು ಹಾಕಿಕೊಂಡಿದ್ದಾರೆ.
ಸದ್ಯ ಉಡುಪಿಯ ನೇಕಾರರು ನೇಯ್ದ ಸೀರೆಗಳನ್ನು ಮಹಾಲಸಾ ಅವರು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿ ಆಸಕ್ತ ಖರೀದಿದಾರರಿಗೆ ಮಾರಾಟ ಮಾಡುತ್ತಿದ್ದಾರೆ.

""ಉಡುಪಿ ಸೀರೆಗೆ ಸದ್ಯ ಬೇಡಿಕೆ ಕಡಿಮೆಯಾಗುತ್ತಿದೆ. ನಾನು ನನ್ನ ಕಲ್ಪನೆಯ ಡಿಸೈನ್ ಗಳನ್ನು ನೇಕಾರರಿಗೆ ನೀಡಿದಾಗ ಅವರು ತೀವ್ರ ಉತ್ಸಾಹದಿಂದ ಈ ಡಿಸೈನ್ ಗಳನ್ನು ಮಗ್ಗದ ಸೀರೆಗಳಲ್ಲಿ ಅಳವಡಿಸುತ್ತಿದ್ದಾರೆ. ಸದ್ಯ ನಾನು ಸಾಮಾಜಿಕ ಜಾಲತಾಣಗಳ ಮೂಲಕ ಈ ಸೀರೆಗಳನ್ನು ಮಾರಾಟ ಮಾಡುತ್ತಿದ್ದೇವೆ'' ಎಂದು ಮಹಾಲಸಾ ಹೇಳಿದರು .
""ದೇಶ-ವಿದೇಶದ ಹಲವಾರು ಮಂದಿ ಆಸಕ್ತರು ಈಗಾಗಲೇ ಖರೀದಿ ಮಾಡಲು ಮುಂದೆ ಬಂದಿದ್ದಾರೆ. ಉಡುಪಿ ಸೀರೆಗಳು ಈಗಿನ ಯುವಜನರಿಗೆ ಇಷ್ಟವಾಗುವ ಡಿಸೈನ್ ಗಳಲ್ಲಿ ಲಭ್ಯವಾಗಲು ಉಡುಪಿಯ ನೇಕಾರರು ಕೂಡಾ ಶ್ರಮಪಡುತ್ತಿದ್ದಾರೆ'' ಎನ್ನುತ್ತಾರೆ ಎಂಬಿಎ ಪದವೀಧರೆ ಮಹಾಲಸಾ ಕಿಣಿ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications