5 ದಿನ ಕಾಪುವಿನಲ್ಲಿ ಕುಮಾರಸ್ವಾಮಿಗೆ ಆಯುರ್ವೇದ ಚಿಕಿತ್ಸೆ
Recommended Video
ಉಡುಪಿ, ಏಪ್ರಿಲ್ 29 : ಕರ್ನಾಟಕದ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಕಾಪುವಿಗೆ ಆಗಮಿಸಿದ್ದಾರೆ. 5 ದಿನಗಳ ಕಾಲ ಅವರು ಆಯುರ್ವೇದ ಚಿಕಿತ್ಸೆ ಪಡೆಯಲು ಅವರು ಭಾನುವಾರ ರಾತ್ರಿ ಆಗಮಿಸಿದರು.
ಬೆಂಗಳೂರಿನಲ್ಲಿ ಭಾನುವಾರ ಹಲವು ಸಭೆಗಳಲ್ಲಿ ಪಾಲ್ಗೊಂಡಿದ್ದ ಎಚ್.ಡಿ.ಕುಮಾರಸ್ವಾಮಿ ಅವರು ರಾತ್ರಿ ಉಡುಪಿಯ ಕಾಪುವಿಗೆ ಆಗಮಿಸಿದರು. ಕಾಪು ಸಮೀಪದ ಆಯುರ್ವೇದ ಚಿಕಿತ್ಸಾಲಯದಲ್ಲಿ ಅವರು ಚಿಕಿತ್ಸೆಯನ್ನು ಪಡೆಯಲಿದ್ದಾರೆ.
ಶ್ರೀಲಂಕಾದಲ್ಲಿ ಜೆಡಿಎಸ್ ಮುಖಂಡರ ನಾಪತ್ತೆ, ಸಾವು: ಕುಮಾರಸ್ವಾಮಿ ಆಘಾತ
ಬೆಂಗಳೂರಿನಿಂದ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಮತ್ತು ಎಚ್.ಡಿ.ಕುಮಾರಸ್ವಾಮಿ ಅವರು ಕಾಪುವಿಗೆ ಆಗಮಿಸಿದ್ದಾರೆ. ಇಬ್ಬರು ಸಹ ಆಯುರ್ವೇದ ಚಿಕಿತ್ಸಾಲಯದಲ್ಲಿ 5 ದಿನಗಳ ಕಾಲ ಚಿಕಿತ್ಸೆಯನ್ನು ಪಡೆಯಲಿದ್ದಾರೆ. ಚಿಕಿತ್ಸಾಲಯದ ಸುತ್ತಮುತ್ತ ಮಾಧ್ಯಮಗಳಿಗೆ ಪ್ರವೇಶ ನಿರಾಕರಿಸಲಾಗಿದೆ.
ಮಳೆಗಾಲದ ಮುನ್ನೆಚ್ಚರಿಕೆಗೆ ಎಚ್ ಡಿ ಕುಮಾರಸ್ವಾಮಿ ಸೂಚನೆ
ಏಪ್ರಿಲ್ 23ರಂದು ಕರ್ನಾಟಕದಲ್ಲಿ 2ನೇ ಹಂತದ ಲೋಕಸಭಾ ಚುನಾವಣೆ ಮುಗಿದ ಬಳಿಕ ಎಚ್.ಡಿ.ಕುಮಾರಸ್ವಾಮಿ ಅವರು ಕಾಪುವಿನ ಆಯುರ್ವೇದ ಚಿಕಿತ್ಸಾಲಯಕ್ಕೆ ದಾಖಲಾಗಿದ್ದರು.
ನರೇಂದ್ರ ಮೋದಿಗೆ ಟ್ವೀಟ್ ಮೂಲಕ ತಿರುಗೇಟು ಕೊಟ್ಟ ಎಚ್ಡಿಕೆ
ಆದರೆ, ಶ್ರೀಲಂಕಾದಲ್ಲಿ ನಡೆದ ಬಾಂಬ್ ಸ್ಫೋಟದಲ್ಲಿ ಜೆಡಿಎಸ್ ನಾಯಕರು ಮೃತಪಟ್ಟ ಹಿನ್ನಲೆಯಲ್ಲಿ ಚಿಕಿತ್ಸೆಯನ್ನು ಅರ್ಧಕ್ಕೆ ಮೊಟಕುಗೊಳಿಸಿ ಬೆಂಗಳೂರಿಗೆ ವಾಪಸ್ ಆಗಿದ್ದರು. ಈಗ ಪುನಃ ಚಿಕಿತ್ಸೆ ಮುಂದುವರೆಸಲು ಕಾಪುವಿಗೆ ಆಗಮಿಸಿದ್ದಾರೆ.