ಕಳೆದ 24 ಗಂಟೆಯಲ್ಲಿ 700 ಮನೆಗಳು ಮುಳುಗಡೆ, 2500 ಜನರ ರಕ್ಷಣೆ: ಉಡುಪಿ ಜಿಲ್ಲಾಧಿಕಾರಿ
ಉಡುಪಿ, ಸೆಪ್ಟೆಂಬರ್ 20: ಮಹಾಮಳೆಯಿಂದಾಗಿ ಉಡುಪಿ ಜಿಲ್ಲೆಯಲ್ಲಿ ಕಳೆದ 24 ಗಂಟೆಯಲ್ಲಿ 700 ಮನೆಗಳು ಮುಳುಗಿದ್ದು, ಸುಮಾರು 2500 ಜನರ ರಕ್ಷಣೆ ಮಾಡಲಾಗಿದೆ ಎಂದು ಉಡುಪಿ ಜಿಲ್ಲಾಧಿಕಾರಿ ಜಿ.ಜಗದೀಶ್ ಮಾಹಿತಿ ನೀಡಿದರು.
ಕುದ್ರು, ನಡುಗಡ್ಡೆಯಲ್ಲಿ ಮನೆಯಿರುವ ಜನರು ಸುರಕ್ಷಿತ ಪ್ರದೇಶಕ್ಕೆ ಸ್ಥಳಾಂತರಗೊಳ್ಳಬೇಕು. ರಾತ್ರಿ ವೇಳೆ ಅಪಾಯ ಸಂಭವಿಸಿದರೆ ರಕ್ಷಣಾ ಕಾರ್ಯ ಕಷ್ಟವಾಗುತ್ತದೆ ಎಂದು ಉಡುಪಿ ಜಿಲ್ಲಾಧಿಕಾರಿ ಜನರಲ್ಲಿ ಮನವಿ ಮಾಡಿದ್ದಾರೆ.

ಉಡುಪಿ ಜಿಲ್ಲೆಯಾದ್ಯಂತ ಪ್ರವಾಹದ ವಾತಾವರಣ ಇದ್ದು, ಮುಂದಿನ ಎರಡು ದಿನ ರೆಡ್ ಅಲರ್ಟ್ ಘೋಷಣೆ ಆಗಿದೆ. ಹೀಗಾಗಿ ನದಿ ಪಾತ್ರದ ಜನರು ಬಹಳ ಎಚ್ಚರಿಕೆಯಿಂದ ಇರಬೇಕು, ಕುದ್ರು ಪ್ರದೇಶದ ಜನ ಸುರಕ್ಷಿತ ಪ್ರದೇಶಕ್ಕೆ ಸ್ಥಳಾಂತರಗೊಳ್ಳಿ ಎಂದು ಹೇಳಿದರು.

ರಾತ್ರಿ ವೇಳೆ ಮನೆ ಮುಳುಗಡೆಯಾದರೆ ರಕ್ಷಣಾ ಕಾರ್ಯ ಕಷ್ಟವಾಗುತ್ತದೆ ಎಂದು ಹೇಳಿರುವ ಜಿ.ಜಗದೀಶ್, ಉಡುಪಿ ಜಿಲ್ಲಾಡಳಿತದ ಜೊತೆ ಜನರು ಕೈಜೋಡಿಸಬೇಕು ಎಂದು ಕೇಳಿಕೊಂಡಿದ್ದಾರೆ.

ತಗ್ಗು ಪ್ರದೇಶದಲ್ಲಿರುವ ಜನರು ಸುರಕ್ಷಿತ ತಾಣಗಳಿಗೆ ಶೀಘ್ರವೇ ಬರಬೇಕೆಂದು ಉಡುಪಿ ಜಿಲ್ಲಾಧಿಕಾರಿ ಜಿ.ಜಗದೀಶ್ ಎಚ್ಚರಿಕೆ ನೀಡಿದರು.












Click it and Unblock the Notifications