ಕರಾವಳಿಯಲ್ಲಿ ಐದು ದಿನ ಭಾರೀ ಮಳೆ ಮುನ್ಸೂಚನೆ
ಉಡುಪಿ, ಜೂನ್ 16: ಕರಾವಳಿ ಪ್ರದೇಶಗಳಲ್ಲಿ ಮುಂಗಾರು ಆರಂಭವಾಗಿದ್ದು, ಉಡುಪಿ ಜಿಲ್ಲೆಯಲ್ಲಿ ಮುಂದಿನ ಐದು ದಿನ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ನೀಡಲಾಗಿದೆ.
Recommended Video
Heavy
rain
predicted
in
Karnataka
for
next
few
days
|
Karnataka
Forecast
|
Yellow
Zone
|
KSNDC
ಹವಾಮಾನ ಇಲಾಖೆ, ಜೂನ್ 20 ರವರೆಗೂ ಬಿರುಸಿನ ಮಳೆಯಾಗುವ ಸೂಚನೆಯನ್ನು ನೀಡಿದೆ. ಹೀಗಾಗಿ ಜಿಲ್ಲೆಯಲ್ಲಿ ಇಂದು ಹಳದಿ ಅಲರ್ಟ್ ಘೋಷಣೆ ಮಾಡಲಾಗಿದೆ. ಈ ವಾರದವರೆಗೂ ಧಾರಾಕಾರ ಮಳೆ ಸುರಿಯಲಿದೆ ಎಂದೂ ತಿಳಿಸಲಾಗಿದೆ.
ಕರ್ನಾಟಕದಲ್ಲಿ ಮುಂಗಾರು ದುರ್ಬಲ: ಯಾವ ರಾಜ್ಯಗಳಲ್ಲಿ ಹೆಚ್ಚು ಮಳೆ
ಐದು ದಿನಗಳ ಕಾಲ ಗುಡುಗು ಮಿಶ್ರಿತ ಬಿರುಸಿನ ಮಳೆ ಆಗಲಿದ್ದು, ಅಲೆಗಳ ಅಬ್ಬರವೂ ಜೋರು ಇರಲಿದೆ, ಮೀನುಗಾರಿಕೆ ನಡೆಸುವಾಗ ಎಚ್ಚರಿಕೆ ವಹಿಸಬೇಕು ಎಂದು ಜಿಲ್ಲಾಡಳಿತ ಎಚ್ಚರಿಕೆ ನೀಡಿದೆ. ಸಮುದ್ರ ತೀರಕ್ಕೆ ಸಾರ್ವಜನಿಕರು ತೆರಳಬಾರದು ಎಂದು ನದಿ ಪಾತ್ರದ ಜನರಿಗೆ ಎಚ್ಚರಿಕೆ ನೀಡಲಾಗಿದೆ.
Comments
English summary
Heavy rains forecast for the next five days in the karavali districts