ಉಡುಪಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಪ್ರಧಾನಿ ಮೋದಿಯ 'ಪರೀಕ್ಷಾ ಪೇ ಚರ್ಚಾ' ಸಂವಾದಕ್ಕೆ ಉಡುಪಿಯ ಗ್ರಾಮೀಣ ಪ್ರದೇಶದ ಅನುಷಾ ಆಯ್ಕೆ

By ಉಡುಪಿ ಪ್ರತಿನಿಧಿ
|
Google Oneindia Kannada News

ಉಡುಪಿ, ಮಾರ್ಚ್ 19: ಪ್ರಧಾನಿ ನರೇಂದ್ರ ಮೋದಿ ಅವರ ಜೊತೆ ನಡೆಯುವ ಪರೀಕ್ಷಾ ಪೇ ಚರ್ಚಾ ಸಂವಾದಕ್ಕೆ ಕರಾವಳಿ ಜಿಲ್ಲೆ ಉಡುಪಿಯ ಗ್ರಾಮೀಣ ಪ್ರದೇಶದ ವಿದ್ಯಾರ್ಥಿನಿ ಅನುಷಾ ಆಯ್ಕೆಯಾಗಿದ್ದಾಳೆ.

ವಿದ್ಯಾರ್ಥಿನಿ ಅನುಷಾ ಉಡುಪಿ ಜಿಲ್ಲೆಯ ಆಲ್ಬಾಡಿ-ಆರ್ಡಿಯ ಚಾರಮಕ್ಕಿ ನಾರಾಯಣ ಶೆಟ್ಟಿ ಸ್ಮಾರಕ ಸರ್ಕಾರಿ ಪ್ರೌಢಶಾಲೆ 10ನೇ ತರಗತಿ ವಿದ್ಯಾರ್ಥಿನಿ.

ಮಡಾಮಕ್ಕಿ ಸಮೀಪದ ಕೃಷ್ಣ ಕುಲಾಲ ಮತ್ತು ಜಯಲಕ್ಷ್ಮೀ ಕೆ.ಕುಲಾಲ ಮಗಳಾದ ಅನುಷಾ ಪ್ರತಿಭಾವಂತ ವಿದ್ಯಾರ್ಥಿನಿಯಾಗಿ ಗುರುತಿಸಿಕೊಂಡಿದ್ದಾಳೆ. ಗ್ರಾಮೀಣ ಪ್ರದೇಶದಲ್ಲಿರುವ ಕೃಷ್ಣ ಕುಲಾಲ ಕೂಲಿ ಕೆಲಸಗಾರರಾಗಿದ್ದು, ತಾಯಿ ಜಯಲಕ್ಷ್ಮಿ ಗೇರು ಬೀಜ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದಾರೆ.

Hebri Girl Anusha Class 10 Student Selected For PM Modis Pariksha Pe Charcha

ಈಗಾಗಲೇ ಪರೀಕ್ಷಾ ಪೇ ಚರ್ಚಾ ಸಂವಾದದಲ್ಲಿ ಪಾಲ್ಗೊಳ್ಳಲು ಹತ್ತು ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು ಅರ್ಜಿ ಹಾಕಿದ್ದು, ಅದರಲ್ಲಿ 30 ವಿದ್ಯಾರ್ಥಿಗಳು ಪ್ರಧಾನಿ ಜೊತೆ ನೇರ ಸಂವಾದ ನಡೆಸಲು ಆಯ್ಕೆಯಾಗಿದ್ದಾರೆ. ರಾಜ್ಯದಿಂದ ಇಬ್ಬರು ಆಯ್ಕೆ ಆಗಿದ್ದು, ಓರ್ವ ವಿದ್ಯಾರ್ಥಿ ಬೆಂಗಳೂರಿನವರಾಗಿದ್ದರೆ, ಮತ್ತೋರ್ವ ವಿದ್ಯಾರ್ಥಿನಿ ಉಡುಪಿ ಜಿಲ್ಲೆಯ ಅನುಷಾ.

Hebri Girl Anusha Class 10 Student Selected For PM Modis Pariksha Pe Charcha

Recommended Video

ಮಹಾರಾಷ್ಟ್ರದಿಂದ ಜಿಲ್ಲೆ ಸಂಪರ್ಕಿಸುವ ಎಲ್ಲಾ ಮಾರ್ಗದಲ್ಲಿ ಚೆಕ್‌ ಪೋಸ್ಟ್‌ ನಿರ್ಮಾಣ- ಜಿಲ್ಲಾಧಿಕಾರಿ ಪಿ ಸುನೀಲ್‌ ಕುಮಾರ್ ಮಾಹಿತಿ | Oneindia Kannada

ಪರೀಕ್ಷಾ ಪೇ ಚರ್ಚಾ ಸಂವಾದಕ್ಕೆ ಆಯ್ಕೆಯಾಗಿರುವ ವಿದ್ಯಾರ್ಥಿನಿ ಅನುಷಾಗೆ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಅವರು ಕರೆ ಮಾಡಿ ಅಭಿನಂದನೆ ಸಲ್ಲಿಸಿದ್ದಾರೆ.

English summary
Anusha, a rural student from Udupi district, has been selected for a Pariksha Pe Charcha with Prime Minister Narendra Modi.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X