ಉಡುಪಿ ಸೌಂದರ್ಯವನ್ನು ಹೆಲಿಕಾಪ್ಟರ್ನಲ್ಲಿ ಸವಿಯಿರಿ
ಉಡುಪಿ, ಡಿಸೆಂಬರ್ 24 : 'ಉಡುಪಿ ಪರ್ಬ'ದ ಅಂಗವಾಗಿ ಹೆಲಿ ಟೂರಿಸಂಗೆ ಚಾಲನೆ ನೀಡಲಾಗಿದೆ. ಡಿಸೆಂಬರ್ 29 ರಿಂದ 31ರ ತನಕ ಮಲ್ಪೆ ಕಡಲ ಕಿನಾರೆಯಲ್ಲಿ ಉಡುಪಿ ಪರ್ಬ ನಡೆಯಲಿದೆ.
ಕ್ರೀಡೆ ಮತ್ತು ಯುವ ಸಬಲೀಕರಣ ಖಾತೆ, ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಮೋದ್ ಮಧ್ವರಾಜ್ ಹೆಲಿಟೂರಿಸಂಗೆ ಚಾಲನೆ ನೀಡಿದ್ದಾರೆ. ಡಿಸೆಂಬರ್ 27ರ ತನಕ ಉಡುಪಿಯಲ್ಲಿ ಹೆಲಿ ಟೂರಿಸಂ ಅನುಭವ ಪಡೆಯಬಹುದಾಗಿದೆ.
ಉಡುಪಿ ಹೆಲಿಪ್ಯಾಡ್ನಿಂದ ಹೆಲಿ ಟೂರಿಸಂ ಸೇವೆ ಆರಂಭವಾಗಲಿದ್ದು, 8 ನಿಮಿಷಗಳ ಕಾಲ ಉಡುಪಿಯ ಸೌಂದರ್ಯವನ್ನು ಸವಿಯಬಹುದಾಗಿದೆ. ಡಿಸೆಂಬರ್ 28ರಿಂದ ಕುಂದಾಪುರದಲ್ಲಿ ಈ ಸೇವೆ ಆರಂಭವಾಗಲಿದೆ.
'ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡಲು ಹೆಲಿ ಟೂರಿಸಂ ಆರಂಭಿಸಲಾಗಿದೆ. ಶಾಶ್ವತ ಹೆಲಿ ಟೂರಿಸಂ ಮಾಡುವ ಕುರಿತು ಚಿಂತನೆ ನಡೆಸಲಾಗುತ್ತದೆ' ಎಂದು ಪ್ರವಾಸೋದ್ಯಮ ಇಲಾಖೆ ಸಹಾಯಕ ನಿರ್ದೇಶಕಿ ಅನಿತಾ ಹೇಳಿದ್ದಾರೆ.

ಪ್ರವಾಸೋದ್ಯಮಕ್ಕೆ ಒತ್ತು
ಹೆಲಿ ಟೂರಿಸಂಗೆ ಚಾಲನೆ ನೀಡಿ ಮಾತನಾಡಿದ ಪ್ರಮೋದ್ ಮಧ್ವರಾಜ್ ಅವರು, 'ಉಡುಪಿಯಲ್ಲಿ ಕಾಡು, ಹಿನ್ನೀರು, ಸಮುದ್ರ ಮತ್ತು ಪ್ರಸಿದ್ಧ ದೇವಾಲಯಗಳಿವೆ. ಪ್ರವಾಸೋದ್ಯಮಕ್ಕೆ ಜಿಲ್ಲೆಯಲ್ಲಿ ಉತ್ತಮ ಅವಕಾಶವಿದೆ' ಎಂದರು.

ಉಡುಪಿಯಲ್ಲಿ ಸೌಂದರ್ಯ ನೋಡಿದ್ದೇನೆ
'ಮುಖ್ಯಮಂತ್ರಿಗಳ ಜೊತೆ ಹಲವು ಬಾರಿ ಹೆಲಿಪಾಕ್ಟರ್ನಲ್ಲಿ ಪ್ರಯಾಣಿಸಿದ್ದೇನೆ. ವಿದೇಶಗಳಲ್ಲಿ ಹೆಲಿಕಾಪ್ಟರ್ ಮೂಲಕ ಸುತ್ತಾಡಿದ್ದೇನೆ. ಆದರೆ, ಇದೆ ಮೊದಲ ಬಾರಿಗೆ ಉಡುಪಿ ವಿಧಾನಸಭಾ ಕ್ಷೇತ್ರವನ್ನು ಹೆಲಿಕಾಪ್ಟರ್ ಮೂಲಕ ನೋಡುವ ಅವಕಾಶ ಸಿಕ್ಕಿತ್ತು' ಎಂದು ಸಚಿವರು ಹೇಳಿದರು.

8 ನಿಮಿಷದ ಪ್ರಯಾಣಕ್ಕೆ 2,500
ಹೆಲಿಕಾಪ್ಟರ್ನಲ್ಲಿ 8ನಿಮಿಷ ಪ್ರಯಾಣಿಸಲು 2,500 ರೂ. ನಿಗದಿ ಮಾಡಲಾಗಿದೆ. ಸಾಹಸಯಾನಕ್ಕೆ 3,500 ಇದೆ. ವೈಮಾನಿಕ ಸ್ಟಂಟ್ಗಳನ್ನು ಮಾಡಲಾಗುತ್ತದೆ.

ಡಿಸೆಂಬರ್ 28ರಿಂದ ಕುಂದಾಪುರದಲ್ಲಿ
ಡಿಸೆಂಬರ್ 27ರ ತನಕ ಉಡುಪಿಯಲ್ಲಿ ಹೆಲಿ ಟೂರಿಸಂ ಸೇವೆ ಲಭ್ಯವಿದೆ. ಡಿಸೆಂಬರ್ 28ರಿಂದ ಕುಂದಾಪುರದಲ್ಲಿ ಹೆಲಿ ಟೂರಿಸಂ ಸೇವೆಯನ್ನು ಆರಂಭಿಸಲಾಗುತ್ತದೆ.
-
ಏರ್ ಕೂಲರ್ vs ಏರ್ ಕಂಡಿಷನರ್: ಬೇಸಿಗೆಯಲ್ಲಿ ನಿಮ್ಮ ಸರಿಯಾದ ಆಯ್ಕೆ ಯಾವುದು? -
ಖೇಲೋ ಇಂಡಿಯಾ ಬುಡಕಟ್ಟು ಕ್ರೀಡಾಕೂಟ: 23 ಚಿನ್ನದ ಪದಕ ಗೆದ್ದು ಸಮಗ್ರ ಚಾಂಪಿಯನ್ ಪಟ್ಟ ಅಲಂಕರಿಸಿದ ಕರ್ನಾಟಕ -
Jobs: ಹೈಕೋರ್ಟ್ನಲ್ಲಿ ಕೆಲಸ ಬೇಕೆ? 70 ಅಸಿಸ್ಟೆಂಟ್ ಕೋರ್ಟ್ ಸೆಕ್ರೆಟರಿ ಹುದ್ದೆಗಳಿಗೆ ಅರ್ಜಿ ಆಹ್ವಾನ, ಇಂದೇ ಅರ್ಜಿ ಸಲ್ಲಿಸಿ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO -
ಇಂಧನ ಪೂರೈಕೆ ಕೊರತೆ ಭೀತಿ: 2026ರಲ್ಲಿ ನೀವು ಖರೀದಿಸಬಹುದಾದ ಟಾಪ್ ಎಲೆಕ್ಟ್ರಿಕ್ ಸ್ಕೂಟರ್ ಗಳು ಇಲ್ಲಿವೆ -
Bengaluru Rent: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಬಾಡಿಗೆ ಮನೆಗಳು ಸಿಗುವ 6 ಪ್ರಮುಖ ಪ್ರದೇಶಗಳು -
ನೌಕರಿ ಬಿಟ್ಟು ಸ್ವಂತ ಉದ್ಯಮ: ಹುಣಸೆ ಸಿಹಿತಿಂಡಿಗೆ ಪೇಟೆಂಟ್ ಪಡೆದ ಬೈಲಹೊಂಗಲದ ಟೆಕ್ಕಿ; 17 ದೇಶಗಳಿಗೆ ರಫ್ತು -
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ












Click it and Unblock the Notifications