'ಗೋ ಹಂತಕರಿಗೆ ಇಫ್ತಾರ್ ಕೂಟ ಆಯೋಜಿಸಿರುವುದು ಶ್ರೀಗಳಿಗೆ ಶೋಭೆಯಲ್ಲ'
ಉಡುಪಿ, ಜೂನ್ 26 : ರಂಜಾನ್ ಹಬ್ಬದ ಪ್ರಯುಕ್ತ ಇದೇ ಮೊದಲ ಬಾರಿಗೆ ಉಡುಪಿಯ ಶ್ರೀಕೃಷ್ಣ ಮಠದಲ್ಲಿ ಇಫ್ತಾರ್ ಕೂಟ ಆಯೋಜಿಸಿದ್ದ ಪೇಜಾವರ ಶ್ರೀ ಅವರ ವಿರುದ್ಧ ಶ್ರೀ ರಾಮಸೇನೆಯ ಮುಖಂಡ ಪ್ರಮೋದ್ ಮುತಾಲಿಕ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಪ್ರಮೋದ್ ಮುತಾಲಿಕ್, 'ಶ್ರೀಕೃಷ್ಣ ಪವಿತ್ರವಾದ ಕ್ಷೇತ್ರದಲ್ಲಿ ಮುಸ್ಲಿಂ ಉಪವಾಸದ ಕೊನೆಯ ದಿನದಲ್ಲಿ ಅವರಿಗೆ ಫಲ ನೀಡಿವ ಮೂಲಕ ಹಿಂದೂ ಸಮಾಜಕ್ಕೆ ಅವಮಾನ ಮಾಡಿದ್ದಾರೆ. ಶ್ರೀ ಕೃಷ್ಣ ಗೋವುಗಳ ಗೋಪಾಲಕ, ಇಂತಹ ಪುಣ್ಯ ದೇಗುಲದ ಆವರಣದಲ್ಲಿ ಗೋ ಹಂತಕರ ಕರೆದು ಸೌಹಾರ್ದ ಕೂಟವನ್ನು ಆಯೋಜಿಸಿರುವುದು ಸ್ವಾಮೀಜಿಯವರಿಗೆ ಶೋಭೆಯಲ್ಲ' ಎಂದು ಪೇಜಾವರ ಸ್ವಾಮೀಜಿ ಮೇಲೆ ಕಿಡಿಕಾರಿದರು.

ಪೇಜಾವರ ಶ್ರೀಗಳು ಕೇವಲ ಪೇಜಾವರ ಮಠಕ್ಕೆ ಸೀಮಿತವಾದವರಲ್ಲ, ಇಡೀ ವಿಶ್ವ ಹಿಂದೂ ಪರಿಷತಗೆ ಮಾರ್ಗದರ್ಶಕರು. ನಾವು ಬೀದಿಯಲ್ಲಿ ಒಂದು ಒಂದು ಗೋವುಗಳನ್ನು ಉಳಿಸಲು ಜೀವದ ಹಂಗು ತೊರೆದು ಕಾಪಾಡುವ ಪ್ರಯತ್ನ ಮಾಡುತ್ತಿದ್ದೇವೆ.
ಆದರೆ, ಪೇಜಾವರ ಶ್ರೀಗಳು ಗೋ ಹಂತಕರನ್ನು ಮಠದ ಒಳಗಡೆ ಕರೆಸಿ ಮಾನ್ಯತೆ ಕೊಡುವ ಪ್ರಕ್ರಿಯೆ ಒಪ್ಪುವಂತಹದಲ್ಲ. ಈ ಬಗ್ಗೆ ಪೇಜಾವರ ಸ್ವಾಮೀಗಳು ಸಮರ್ಥನೆ ಮಾಡಿಕೊಳ್ಳುತ್ತಿದ್ದಾರೆ. ಇದಕ್ಕೆ ನಮ್ಮ ಒಪ್ಪಿಗೆ ಇಲ್ಲ ಮುಂದಿನ ದಿನದಲ್ಲಿ ಚರ್ಚೆ ಮಾಡಿ ನಿರ್ಣಾಯ ಮಾಡಲಾಗುವುದು' ಎಂದರು.
ಇದಕ್ಕೆ ಪ್ರತಿಕ್ರಿಯಿಸಿರುವ ಸ್ವಾಮೀಜಿಗಳು, 'ಈ ಸೌಹಾರ್ದ ಕೂಟಕ್ಕೆ ಹಿಂದೂ ಮುಸ್ಲಿಂ ಮತೀಯ ಸ್ವರೂಪ ನೀಡಿ ಅನವಶ್ಯಕವಾಗಿ ಜನರ ಮನಸ್ಸುಗಳನ್ನು ಕಡೆಸುವ ಪ್ರಯತ್ನ ಮಾಡಬೇಡಿ' ಎಂದು ಪರ್ಯಾಯ ಪೇಜಾವರ ವಿಶ್ವೇಶ ತೀರ್ಥ ಸ್ವಾಮೀಜಿ ಸಮರ್ಥನೆ ಮಾಡಿಕೊಂಡರು.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications