ನಾನು ಢೋಂಗಿ ಆಸ್ತಿಕನಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

ಉಡುಪಿ, ಏಪ್ರಿಲ್ 22 : ''ನಾನು ಢೋಂಗಿತನವುಳ್ಳ ಆಸ್ತಿಕನಲ್ಲ. ದೇವರನ್ನು ಒಲಿಸಿಕೊಳ್ಳಲು ಸಂಸ್ಕೃತ ಬೇಕಿಲ್ಲ, ಮಂತ್ರ ಬೇಕಿಲ್ಲ'' ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಶ್ರೀ ವಿಶ್ವ ಸಂತೋಷ ಭಾರತಿ ಶ್ರೀಪಾದರ ನೇತೃತ್ವದಲ್ಲಿ ನಡೆಯುತ್ತಿರುವ ಶ್ರೀ ನಾಗದೇವರ ಮತ್ತು ಮೂಲ ದೈವಗಳ ಪುನಃ ಪ್ರತಿಷ್ಠಾಪನೆ ಮತ್ತು ನಾಗಮಂಡಲೋತ್ಸವ ಪ್ರಯುಕ್ತ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಮಾತನಾಡಿದರು.

ಇರುವುದು ಒಂದೇ ದೇವರು ಭಕ್ತಿ ಶುದ್ಧವಾಗಿದ್ದರೆ ಸಾಕು. ಮನುಷ್ಯರ ಪರವಾಗಿ ಇದ್ದರೆ ಸಾಕು. ಕೆಲವರು ಹೇಳ್ತಾರೆ ನಾಸ್ತಿಕ ಅಂತ. ನಾನು ನಮ್ಮೂರಿನ ದೇಸ್ಥಾನಕ್ಕೆ ಹೋಗುತ್ತೇನೆ ಹೊರತು ದೇವರನ್ನು ಹುಡುಕಿಕೊಂಡು ಹೋಗುವುದಿಲ್ಲ,ಸಿದ್ದರಾಮ ದೇವಾಲಯಕ್ಕೆ, ಚಾಮುಂಡೇಶ್ವರಿ ದೇವಾಲಯಕ್ಕೆ , ತಿರುಪತಿಗೆ ಹೋಗಿದ್ದೇನೆ ಎಂದರು.

I believe in humanity, not religious activities: CM Siddaramaiah at Udupi

''ದೇವನೊಬ್ಬ ನಾಮ ಹಲವು. ಎಲ್ಲಾ ದೇವಸ್ಥಾನಗಳಿಗೆ ಹೋಗಬೇಕೆಂದು ದೇವರು ಹೇಳಿಲ್ಲ.ಕಷ್ಟ ಬಂದಾಗ ನಮ್ಮೂರ ದೇವರು ಸಾಕು. ಆತ್ಮಶುದ್ಧಿ , ಮಾನವೀಯತೆ ಇಲ್ಲದಿದ್ದರೆ ಯಾವ ದೇವರು ಕೂಡ ನಿಮ್ಮ ಕಷ್ಟ ಪರಿಹರಿಸುವುದಿಲ್ಲ'' ಎಂದರು.

''ನಾನು ಯಾವುದೇ ದೇವಸ್ಥಾನಕ್ಕೆ ,ಧಾರ್ಮಿಕ ಕೇಂದ್ರಕ್ಕೆ ಯಾರಿಗೂ ವಿರುದ್ಧ ಇಲ್ಲ. ಮನುಷ್ಯತ್ವದಲ್ಲಿ ನಂಬಿಕೆ ಇಟ್ಟುಕೊಂಡವ. ಬಸವಣ್ಣ ಹೇಳಿದಂತೆ ಇವ ನಮ್ಮವ ,ನಮ್ಮವ ,ನಮ್ಮವ ಎನ್ನುವವ. ಕೆಲವರು ಇದನ್ನು ಹೇಳ್ತಾರೆ. ಆ ಬಳಿಕ ಬದಿಗೆ ಕರೆದು ಇವ ಯಾವ ಜಾತಿ ಎಂದು ಕೇಳ್ತಾರೆ'' ಎಂದರು.

''ಆತ್ಮದೊಳಗೆ ಒಂದು ಇಟ್ಟುಕೊಂಡು ಇನ್ನೊಂದು ಮನಸ್ಸಿನಲ್ಲಿ ಮಂತ್ರ ಹೇಳಿದ್ರೆ ಪ್ರಯೋಜನವಿಲ್ಲ. ದೇವರ ಅನುಗ್ರಹ ಪಡೆಯಲು ಮಂತ್ರ ಕಲೀಬೇಕಾ? ಸಂಸ್ಕೃತ ಬೇಕಾ ? ಯಾವುದೂ ಬೇಡ'' ಎಂದರು.

I believe in humanity, not religious activities: CM Siddaramaiah at Udupi

ಇವತ್ತು ನಾವು ಸಂಸತ್‌, ವಿಧಾನಸಭೆ ,ವಿಧಾನ ಪರಿಷತ್‌ ಎಂದು ಕರೆಯುತ್ತೇವೆಯೋ ಅದಕ್ಕೆಲ್ಲಾ ಮೂಲ ಬಸವಣ್ಣನ ಅನುಭವ ಮಂಟಪ ಎಂದರು.

''ಎಲ್ಲಾ ಪದ್ದತಿಗಳನ್ನು ನಾವು ನಿರ್ಮಾಣ ಮಾಡಿಕೊಂಡಿರುವುದು. ದೇವರಿಗೂ ನಮಗೂ ನಡುವೆ ಒಂದು ಕಂದಕ ನಿರ್ಮಾಣ ಮಾಡಿರುವುದು. ಅದಕ್ಕೂ ಮಧ್ಯವರ್ತಿಗಳು. ಕೆಲವು ದೇವಸ್ಥಾನಗಳಿಗೆ ಕೆಲ ಜಾತಿಗಳಿಗೆ ಪ್ರವೇಶವಿಲ್ಲ. ಇನ್ನು ಕೆಲ ದೇವಸ್ಥಾನಗಳಿಗೆ ಮಹಿಳೆಯರಿಗೆ ಪ್ರವೇಶವಿಲ್ಲ ,ಅದು ಏಕೆ ?'' ಎಂದು ಸಿಎಂ ಪ್ರಶ್ನಿಸಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+