ಹಿಂಸೆ ಮಾಡದೆ ಗೋವುಗಳನ್ನು ಕೊಲ್ಲಿ ಅಂದಿದ್ರು ಕಾರಂತರು : ಪ್ರಕಾಶ್ ರೈ
ಮಂಗಳೂರು, ಅಕ್ಟೋಬರ್ 10: ಭಾರೀ ವಿರೋಧದ ನಡುವೆ 'ಡಾ. ಶಿವರಾಮ ಕಾರಂತ ಹುಟ್ಟೂರ ಪ್ರಶಸ್ತಿ'ಯನ್ನು ಖ್ಯಾತ ನಟ ಪ್ರಕಾಶ್ ರೈ ಅವರಿಗೆ ಪ್ರದಾನ ಮಾಡಲಾಯಿತು.
ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಕೋಟಾದಲ್ಲಿರುವ ಕಾರಂತ ಥೀಂ ಪಾರ್ಕ್ ನಲ್ಲಿ ಆಯೋಜಿಸಲಾಗಿದ್ದ ಭವ್ಯ ಸಮಾರಂಭದಲ್ಲಿ 13ನೇ ಕಾರಂತ ಹುಟ್ಟೂರ ಪ್ರಶಸ್ತಿಯನ್ನು ಖ್ಯಾತ ನಟ ಪ್ರಕಾಶ್ ರೈ ಅವರಿಗೆ ನೀಡಿ ಗೌರವಿಸಲಾಯಿತು.
ಪ್ರಶಸ್ತಿ ಸ್ವೀಕರಿಸಿ ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಕಾಶ್ ರೈ, "ಗೋಮಾಂಸ ತಿನ್ನುವವರು ತಿನ್ನುತ್ತಾರೆ ಅಡ್ಡಿ ಮಾಡಬೇಡಿ. ಹಿಂಸೆ ಮಾಡದೆ ಕೊಲ್ಲಿ ಅಂದಿದ್ರು ಕಾರಂತರು," ಎಂದು ಹೇಳಿದರು.
"ಡಾ. ಶಿವರಾಮ ಕಾರಂತ ಹುಟ್ಟೂರ ಪ್ರಶಸ್ತಿ ಸ್ವೀಕರಿಸುವುದು ಸಂತೋಷದ ವಿಷಯ. ಇಲ್ಲಿ ಯಾರು ಗೆದ್ದರು , ಯಾರು ಸೋತರು ಎಂಬುದಕ್ಕಿಂತ ಪ್ರಶಸ್ತಿ ಪ್ರದಾನ ಆಗಬೇಕಿತ್ತು. ಅದು ಆಗಿದೆ. ಪ್ರಶಸ್ತಿಗೆ ನಾನು ಅರ್ಹನಾಗಿದ್ದೆ," ಎಂದು ಹೇಳಿದರು. ಇದು ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಹತ್ತಿಕ್ಕುವ ಪ್ರಯತ್ನ ಸೋತ ಕ್ಷಣ ಎಂದು ಅವರು ಅಭಿಪ್ರಾಯಪಟ್ಟರು.

'ನಾನು ಒಂಟಿಯಲ್ಲ'
'ಕರ್ನಾಟಕದಲ್ಲಿ ನನ್ನ ಹಾಗೆ ಮಾತನಾಡೋರು ಒಂಟಿಯಲ್ಲ. ಅವರಿಗೆ ಮಾತನಾಡುವ ಸ್ವಾತಂತ್ರ್ಯವಿದೆ. ವೈಯಕ್ತಿಕ ವಿಚಾರ ಹೇಳಿ ಹಣಿಯುವ ಕೃತ್ಯ ಇನ್ನು ಕನ್ನಡ ನಾಡಿನಲ್ಲಿ ನಡೆಯುವುದಿಲ್ಲ," ಎಂದು ಅವರು ಹೇಳಿದರು.

ಅಭಿಪ್ರಾಯ ಸ್ವಾತಂತ್ರ್ಯ ಬೇಕು
ಪ್ರಶಸ್ತಿ ಪ್ರದಾನ ಸಮಾರಂಭವನ್ನು ಬಿಜೆಪಿ ಬಹಿಷ್ಕರಿಸಿರುವುದರ ಬಗ್ಗೆ ಮಾತನಾಡುವುದಿಲ್ಲ ಎಂದು ಹೇಳಿದ ಅವರು, ಅಭಿಪ್ರಾಯ ಸ್ವಾತಂತ್ರ್ಯ ಬೇಕು ಅನ್ನೋದಷ್ಟೇ ನನ್ನ ನಿಲುವು ಎಂದು ಸ್ಪಷ್ಟಪಡಿಸಿದರು.

ಪ್ರಶಸ್ತಿ ಸ್ವೀಕರಿಸುವುದೇ ಸಂತಸ
"ಈವರೆಗೆ ಬಹಳಷ್ಟು ಪ್ರಶಸ್ತಿಗಳು ಬಂದಿವೆ. ಆದರೆ ಕಾರಂತರ ಪ್ರಶಸ್ತಿ ಸ್ವೀಕರಿಸುವುದು ಸಂತೋಷ ತಂದಿದೆ. ಕಾರಂತರ ಬಗ್ಗೆ ಮಾತನಾಡುವುದೇ ಒಂದು ರೋಮಾಂಚನ. ಅವರು ಬರೆದ ಹಾಗೆ ಬದುಕಿದರು. ಬದುಕಿದ್ದನ್ನು ಬರೆದರು," ಎಂದು ಪ್ರಕಾಶ ರೈ ಅಭಿಪ್ರಾಯಪಟ್ಟರು.

'ಗೋಮಾಂಸ ತಿನ್ನಲು ಅಡ್ಡಿ ಮಾಡಬೇಡಿ'
"ಗೋಮಾಂಸ ತಿನ್ನುವವರು ತಿನ್ನುತ್ತಾರೆ ಅಡ್ಡಿ ಮಾಡಬೇಡಿ. ಹಿಂಸೆ ಮಾಡದೆ ಕೊಲ್ಲಿ ಅಂದಿದ್ರು ಕಾರಂತರು. ನೆಮ್ಮದಿಯ ಸಮಾಜ ನಿರ್ಮಾಣವಾಗಬೇಕು. ಭಯ ಇಲ್ಲದ ಸಮಾಜ ನಿರ್ಮಾಣ ಆಗಬೇಕು. ಮುಂದಿನ ತಲೆಮಾರಿಗೆ ವಾಕ್ ಸ್ವಾತಂತ್ರ್ಯ ಬೇಕು," ಎಂದು ಹೇಳಿದ ಅವರು 'ನಟನಾಗಿ ನನಗೆ ಮಾತನಾಡಲು ಯಾವುದೇ ಅಡ್ಡಿ ಇರಬಾರದು' ಎಂದು ಹೇಳಿದರು.

ಮನಃಸಾಕ್ಷಿ ತಡೆಯಲು ನೀವ್ಯಾರು?
ಮನಃಸಾಕ್ಷಿಯ ಹೇಳಿಕೆಯನ್ನು ತಡೆಯುವವರು ನೀವು ಯಾರು? ಎಂದು ಅವರು ಪರೋಕ್ಷವಾಗಿ ಬಿಜೆಪಿ ಹಾಗು ಸಂಘ ಪರಿವಾರದ ವಿರುದ್ಧ ಕಿಡಿಕಾರಿದರು. 'ತುಂಬಾ ವ್ಯವಸ್ಥಿತವಾಗಿ ಭಯ ಹುಟ್ಟಿಸುವ ಕೆಲಸ ಆಗುತ್ತಿದೆ,' ಎಂದು ಪ್ರಕಾಶ್ ರೈ ಇದೇ ವೇಳೆ ಅಸಮಧಾನ ವ್ಯಕ್ತಪಡಿದರು.
-
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ -
By-Election: ದಾವಣಗೆರೆ ದಕ್ಷಿಣದಲ್ಲಿ ಮೊದಲ ಬಾರಿ ಬಿಜೆಪಿ ಗೆಲುವು ನಿಶ್ಚಿತ; ಬಸವರಾಜ ಬೊಮ್ಮಾಯಿ ವಿಶ್ವಾಸ -
ಆರ್ಸಿಬಿ ವಿರುದ್ಧದ ಪಂದ್ಯಕ್ಕೂ ಮುನ್ನ ಕೇವಲ 42 ಎಸೆತಗಳಲ್ಲಿ 94 ರನ್ ಸಿಡಿಸಿದ ಅಭಿಷೇಕ್ ಶರ್ಮಾ: ಭಾರೀ ವೈರಲ್












Click it and Unblock the Notifications