ಕಂಬಳ ಉಳಿಸಲು ಬದ್ಧ-ಪ್ರಮೋದ್ ಮಧ್ವರಾಜ್
ಕಂಬಳದ ಉಳಿವಿಗಾಗಿ ಸರ್ವಪ್ರಯತ್ನ ಮಾಡಲಾಗುವುದು ಎಂದು ಮೀನುಗಾರಿಕೆ, ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ಪ್ರಮೋದ್ ಮಧ್ವರಾಜ್ ಉಡುಪಿಯಲ್ಲಿ ಒನ್ ಇಂಡಿಯಾಗೆ ತಿಳಿಸಿದ್ದಾರೆ.
ಉಡುಪಿ, ಜನವರಿ26: ಕಂಬಳದ ಉಳಿವಿಗಾಗಿ ಸರ್ವಪ್ರಯತ್ನ ಮಾಡಲಾಗುವುದು ಎಂದು ಮೀನುಗಾರಿಕೆ, ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ಪ್ರಮೋದ್ ಮಧ್ವರಾಜ್ ತಿಳಿಸಿದ್ದಾರೆ.
"ಕೃಷಿಯೊಂದಿಗೆ ನಂಟನ್ನು ಹೊಂದಿರುವ ಕರಾವಳಿಯ ಜಾನಪದ ಕ್ರೀಡೆ ಕಂಬಳವು ತಲೆ ತಲಾಂತರದಿಂದ ನಡೆದು ಬಂದ ಸಾಂಪ್ರದಾಯಿಕ ಕ್ರೀಡೆಯಾಗಿದೆ. ಕಂಬಳ ಉಳಿಸಲು ಸರ್ವ ಪ್ರಯತ್ನ ನಡೆಸಲಾಗುವುದು," ಎಂದು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರೂ ಆದ ಮಧ್ವರಾಜ್ ಹೇಳಿದರು.[ಕಂಬಳ ಉಳಿಸಲು ಮಂಗಳೂರಿನಲ್ಲಿ 'ಪೋಸ್ಟ್ ಕಾರ್ಡ್'ಚಳವಳಿ]

ಈಗಾಗಲೇ ಬೆಂಗಳೂರಲ್ಲಿ ಕಾನೂನು ಮಂತ್ರಿ ಟಿ.ಬಿ ಜಯಚಂದ್ರ, ಅರಣ್ಯ ಮಂತ್ರಿ ರಮಾನಾಥ ರೈ, ಪಶುಸಂಗೋಪನಾ ಮಂತ್ರಿ ಎ.ಮಂಜು, ನಾನು ಹಾಗೂ ಮಾಜಿ ಸಚಿವರಾದ ಅಭಯಚಂದ್ರ ಜೈನ್ ರವರ ಉಪಸ್ಥಿಯಲ್ಲಿ ಸಭೆ ನಡೆಸಲಾಗಿದೆ. ಸಭೆಯಲ್ಲಿ ಎಲ್ಲಾ ಇಲಾಖಾ ಅಧಿಕಾರಿಗಳೊಂದಿಗೆ ಚರ್ಚಿಸಿದ್ದೇವೆ. ಕಂಬಳ ಹೋರಾಟ ಸಮಿತಿಯ ವಿನಂತಿಯಂತೆ ನ್ಯಾಯಾಲಯದಲ್ಲಿ ಕಂಬಳದ ಪರವಾಗಿ ತೀರ್ಪು ಬರುವಂತೆ ಮಾಡಲು ಅಗತ್ಯವಿರುವ ಸರಕಾರಿ ಆದೇಶ ಹೊರಡಿಸಲಾಗಿದೆ ಎಂದರು.[ಕಂಬಳಕ್ಕೆ ಪ್ರತ್ಯೇಕ ಕಾನೂನಿಗೆ ರಾಜ್ಯ ಸರ್ಕಾರ ಚಿಂತನೆ -ಜಯಚಂದ್ರ]
ಈಗಾಗಲೆ ಮುಖ್ಯಮಂತ್ರಿ ಸಿದ್ಧರಾಮಯ್ಯನವರು ನ್ಯಾಯಾಲದಲ್ಲಿ ಕಂಬಳದ ಪರವಾಗಿ ತೀರ್ಪು ಬರಲು ಬೇಕಾದ ಅಗತ್ಯ ಕ್ರಮವನ್ನು ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ ಎಂದು ಸಚಿವ ಪ್ರಮೋದ್ ಮಧ್ವರಾಜ್ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications