ಉಡುಪಿಯಲ್ಲಿ ಜಿಲ್ಲಾಧಿಕಾರಿ ಮೇಲೆ ಹಲ್ಲೆ: ಪೇಜಾವರ ಶ್ರೀ ಖಂಡನೆ
ಉಡುಪಿಯಲ್ಲಿ ಜಿಲ್ಲಾಧಿಕಾರಿಗಳ ಮೇಲಾದ ಹಲ್ಲೆ ನಿಜಕ್ಕೂ ಖಂಡನೀಯ, ಜಿಲ್ಲೆಯ ಕಾನೂನು ಸುವ್ಯವಸ್ಥೆಯ ಬಗ್ಗೆ ಹೆಚ್ಚಿನ ಗಮನ ನೀಡಬೇಕಿದೆ ಎಂದು ಪೇಜಾವರ ಮಠಾಧೀಶ ಶ್ರೀ ವಿಶ್ವೇಶ ತೀರ್ಥ ಸ್ವಾಮೀಜಿ ಹೇಳಿದ್ದಾರೆ.
ಉಡುಪಿ, ಏಪ್ರಿಲ್ 5: ಉಡುಪಿಯಲ್ಲಿ ಜಿಲ್ಲಾಧಿಕಾರಿಗಳ ಮೇಲಾದ ಹಲ್ಲೆ ನಿಜಕ್ಕೂ ಖಂಡನೀಯ, ಜಿಲ್ಲೆಯ ಕಾನೂನು ಸುವ್ಯವಸ್ಥೆಯ ಬಗ್ಗೆ ಹೆಚ್ಚಿನ ಗಮನ ನೀಡಬೇಕಿದೆ ಎಂದು ಪೇಜಾವರ ಮಠಾಧೀಶ ಶ್ರೀ ವಿಶ್ವೇಶ ತೀರ್ಥ ಸ್ವಾಮೀಜಿ ಹೇಳಿದ್ದಾರೆ.
ಉಡುಪಿಯಲ್ಲಿ ಇಂದು ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಜಿಲ್ಲೆಯ ಕಡ್ಲೂರಿನಲ್ಲಿ ನಡೆಯುತ್ತಿರುವ ಅಕ್ರಮ ಮರಳು ಮಾಫಿಯಾ ವಿರುದ್ಧ ದಾಳಿಗೆ ಮುಂದಾಗಿದ್ದ, ಪ್ರಿಯಾಂಕಾ ಮೇರಿ ಫ್ರಾನ್ಸಿಸ್, ಎಸಿ ಶಿಲ್ಪಾ ನಾಗ್ ಅವರ ಮೇಲೆ ಭಾನುವಾರ ರಾತ್ರಿ ನಡೆದ ಹಲ್ಲೆಯ ಕುರಿತು ಪ್ರತಿಕ್ರಿಯೆ ನೀಡಿದರು.['ನಾವು ಯಾರಿಗೂ ಹೆದರಲ್ಲ,' ಉಡುಪಿ ಡಿಸಿ ಪ್ರಿಯಾಂಕಾ ಖಡಕ್ ಮಾತು]

ಕಾನೂನು ಸುವ್ಯವಸ್ಥೆಯನ್ನು ಕಾಪಾಡುವತ್ತ ಜಿಲ್ಲಾಡಳಿತ ಗಮನಹರಿಸಬೇಕು, ಇಂಥ ಘಟನೆಗಳು ಜಿಲ್ಲೆಯ ಬೆಳವಣಿಗೆಯ ದೃಷ್ಟಿಯಿಂದ ಶ್ರೇಯಸ್ಕರವಲ್ಲ ಎಂದರು.[ಉಡುಪಿ ಡಿಸಿ ಕೊಲೆ ಯತ್ನ ಖಂಡಿಸಿ ನಾಳೆ ಸರಕಾರಿ ನೌಕರರ ಬಂದ್]












Click it and Unblock the Notifications