'ಕನಕನಿಗೆ ಅಪಚಾರ ಎಸಗುವರ ವಿರುದ್ಧದ ಹೋರಾಟದಲ್ಲಿ ನಾನೂ ಭಾಗಿಯಾಗ್ತೇನೆ'
ಉಡುಪಿ, ನವೆಂಬರ್ 13: ಕನಕದಾಸರ ಭಕ್ತಿ ನೋಡಿ ಪೂರ್ವಾಭಿಮುಖವಾಗಿದ್ದ ಉಡುಪಿಯ ಕೃಷ್ಣ ಪಶ್ಚಿಮಕ್ಕೆ ತಿರುಗಿದ್ದು ಸತ್ಯ. ಆದರೆ ಆ ಬಗ್ಗೆ ಕೆಲವರು ಅಪಚಾರ ಎಸಗಿದ್ದಾರೆ. ಅಂಥವರ ವಿರುದ್ಧ ಹೋರಾಟ ನಡೆಸುವುದಾದರೆ ಜತೆಗೆ ಭಾಗವಹಿಸುವುದಕ್ಕೆ ನಾನು ಸಿದ್ಧ ಎಂದು ಪೇಜಾವರ ಮಠದ ವಿಶ್ವೇಶ ತೀರ್ಥ ಸ್ವಾಮೀಜಿ ಹೇಳಿದ್ದಾರೆ.
ಕೃಷ್ಣ ಮಠದಲ್ಲಿ ಭಾನುವಾರ ನಡೆದ ಕನಕ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಸ್ವಾಮೀಜಿ, ಮಠದ ಹೊರಗೆ ಇರುವ ಕಿಂಡಿಯ ಮೂಲಕವಾಗಿ ಕೃಷ್ಣನನ್ನು ಕನಕ ನೋಡಿದರೆ, ಒಳಗಿರುವುದು ಕೃಷ್ಣನು ಕನಕನನ್ನು ದರ್ಶನ ಮಾಡಿದ ಕಿಂಡಿ. ಕೃಷ್ಣನು ಪಶ್ಚಿಮಕ್ಕೆ ತಿರುಗಿದ ಎನ್ನುವುದಕ್ಕೆ ವಾದಿರಾಜರು ಹಾಗೂ ವ್ಯಾಸರಾಜರು ಸಾಕ್ಷಿ. ಅವರ ಸ್ತೋತ್ರದಲ್ಲಿಯೇ ಆ ಬಗ್ಗೆ ಉಲ್ಲೇಖವಿದೆ ಎಂದಿದ್ದಾರೆ.

ಕೆಲವು ಬುದ್ಧಿಜೀವಿಗಳು ಕೇವಲ ಪ್ರಚಾರಕ್ಕಾಗಿ ಕನಕನ ಭಕ್ತಿಯಿಂದ ಕೃಷ್ಣ ತಿರುಗಿ ನಿಂತಿಲ್ಲ ಎನ್ನುತ್ತಾರೆ. ಆದರೆ ಕನಕನ ಕಿಂಡಿ ಹಾಗೂ ಪವಾಡ ನಡೆದಿರುವುದು ಇವೆಲ್ಲವೂ ಸತ್ಯ. ಈ ಸತ್ಯವನ್ನು ಬದಲಿಸುವುದಕ್ಕೆ ಸಾಧ್ಯವಿಲ್ಲ ಎಂದು ಸ್ವಾಮೀಜಿ ಹೇಳಿದ್ದಾರೆ.
ಬಸವಣ್ಣನಂತೆಯೇ ಕನಕ ದಾಸರು ಕೂಡ ಕ್ರಾಂತಿಕಾರಿಯಾಗಿದ್ದರು. ಶ್ರೀಕೃಷ್ಣನನ್ನು ತಿರುಗಿಸುವ ಮೂಲಕ ಸಮಾಜದ ಕಣ್ಣು ತೆರೆಸಿದ್ದಾರೆ. ಯುವಜನತೆ ಪಾಶ್ಚಾತ್ಯದಿಂದ ನಮ್ಮ ಸಂಸ್ಕೃತಿಯ ಕಡೆಗೆ ತಿರುಗಬೇಕು ಎಂದು ಸಲಹೆ ಮಾಡಿದ್ದಾರೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications