ಉಡುಪಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮುತಾಲಿಕ್ ಹೇಳಿಕೆಗಳಿಗೆ ಪ್ರತಿಕ್ರಿಯೆ ನೀಡೋದಿಲ್ಲ ಎಂದ ಪೇಜಾವರ ಶ್ರೀ

|
Google Oneindia Kannada News

ಉಡುಪಿ, ಜೂನ್ 29: ಹಿಂದೂಗಳಲ್ಲೂ ಕೆಲವರು ಗೋಮಾಂಸ ಭಕ್ಷಣೆ ಮಾಡ್ತಾರೆ. ಈ ಬಗ್ಗೆ ಅರಿವಿದ್ದೇ ಹೇಳಿದ್ದೇನೆ. ಯಾರು ಮಾಡ್ತಾರೆ ಅಂತ ಹೇಳಲಾರೆ. ಮುತಾಲಿಕ್ ಹೇಳಿಕೆಗಳಿಗೆ ಪ್ರತಿಕ್ರಿಯೆ ನೀಡೋದಿಲ್ಲ ಎಂದು ಪೇಜಾವರ ಶ್ರೀಗಳಾದ ವಿಶ್ವೇಶ ತೀರ್ಥರು ಹೇಳಿಕೆ ನೀಡಿದ್ದಾರೆ.

ಉಡುಪಿ ಮಠದಲ್ಲಿ ಇಫ್ತಾರ್: ಹೀಗೆ ಮಾಡಿದ್ದರೆ ಎಲ್ಲವೂ ಸರಿಹೋಗುತ್ತಿತ್ತು!ಉಡುಪಿ ಮಠದಲ್ಲಿ ಇಫ್ತಾರ್: ಹೀಗೆ ಮಾಡಿದ್ದರೆ ಎಲ್ಲವೂ ಸರಿಹೋಗುತ್ತಿತ್ತು!

ಆಯೋಧ್ಯೆ ರಾಮ ಮಂದಿರ ವಿಚಾರದಲ್ಲಿ ಸಂಧಾನದ ನನ್ನ ಪ್ರಯತ್ನಗಳು ವಿಫಲವಾಗಿವೆ. ವಿಶ್ವ ಹಿಂದೂ ಪರಿಷತ್ ಮತ್ತು ನನ್ನ ಸಂಬಂಧಕ್ಕೆ ಭಂಗವಿಲ್ಲ. ಸಂಘ ಪರಿವಾರದವರು ಸಹ ಸಂಪರ್ಕ ಮಾಡಿದ್ದಾರೆ. ಈ ವಿಚಾರದಲ್ಲಿ ಅವರಿಗೆ ಸಮಾಧಾನವೂ ಇಲ್ಲ ವಿರೋಧವೂ ಇಲ್ಲ ಎಂದು ಸ್ವಾಮೀಜಿ ತಿಳಿಸಿದ್ದಾರೆ.

I will not comment on Pramod Muthalik statements: Pejawara Seer

ದಶಕಗಳ ಹಿಂದೆ ರಾಮಮಂದಿರ ವಿಚಾರದಲ್ಲಿ ಸಂಧಾನ‌ ನಡೆದಿತ್ತು. ರಾಮಮಂದಿರ ನಿರ್ಮಾಣಕ್ಕೆ ಮುಸ್ಲಿಮರು ಒಪ್ಪಿದ್ದರು. ವಾರದಲ್ಲಿ ಒಂದು ದಿನ ರಾಮ ಮಂದಿರದಲ್ಲಿ ನಮಾಜಿಗೆ ಒಮ್ಮತ ಮೂಡಿತ್ತು. ಅದು ತಪ್ಪಲ್ಲ ಎಂದಾದರೆ ನಮಗೆ ಯಾಕೆ ವಿರೋಧ ಮಾಡುತ್ತಿದ್ದಾರೆ ಎಂದು ಸ್ವಾಮೀಜಿ ಪ್ರಶ್ನೆ ಮಾಡಿದರು.

ನಾವು ಕೃಷ್ಣಮಠದ ಹೊರ ಆವರಣದಲ್ಲಿ ಕಾರ್ಯಕ್ರಮ ಆಯೋಜಿಸಿದ್ದೆವು. ಮುಸ್ಲಿಮರು ಪ್ರಾರ್ಥನೆ ಮಾಡಿದರೆ ಅಂದು ಹಿಂದೂ ನಿಂಧನೆಯಾಗುತ್ತದೆಯೇ ಎಂದು ಪೇಜಾವರ ಶ್ರೀಗಳು ಕೇಳಿದ್ದಾರೆ.

English summary
I will not comment on Pramod Muthalik statements, Pejawara seer reacted to opposition by Muthalik to Iftar in Krishna mutt.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X