ಲಿಂಗಾಯತರ ಮೇಲೆ ಪ್ರೀತಿಯಿದೆ, ನಾನೇನೂ ಚುನಾವಣೆ ನಿಲ್ಲಬೇಕಿಲ್ಲ : ಪೇಜಾವರ ಶ್ರೀ
Recommended Video

ಉಡುಪಿ, ಅಕ್ಟೋಬರ್ 21 : ಲಿಂಗಾಯತರು ಹಿಂದೂ ಧರ್ಮ ತೊರೆಯದಿರಿ ಎಂದು ಹೇಳಿದ್ದೇನೆ. ನಾನು ಭಯದಿಂದ ನೀಡಿದ ಹೇಳಿಕೆ ಇದಲ್ಲ. ಲಿಂಗಾಯತರ ಬಗ್ಗೆ ಯಾವ ವಿರೋಧವೂ ಇಲ್ಲ. ಲಿಂಗಾಯತರು ನಮ್ಮವರು ಎಂಬುದಷ್ಟೇ ನನ್ನ ಕಾಳಜಿ. ಇದು ಸಲಹೆ- ಒತ್ತಡ ಅಲ್ಲ. ಕೇವಲ ನಿವೇದನೆಯಷ್ಟೇ ಎಂದು ಪೇಜಾವರ ಮಠಾಧೀಶರಾದ ವಿಶ್ವೇಶ ತೀರ್ಥರು ಹೇಳಿದ್ದಾರೆ.
ನಾವು ಇಷ್ಟರವರೆಗೆ ಹಿಂದೂಗಳಾಗಿಯೇ ಇರಲಿಲ್ಲ ಅಂತ ಜಾಮ್ ದಾರ್ ಹೇಳುತ್ತಾರೆ. ಅವರ ಹೇಳಿಕೆ ಸರಿಯಲ್ಲ. ಎಲ್ಲ ಹಿಂದೂ ಸಮಾವೇಶದಲ್ಲಿ, ವಿಶ್ವ ಹಿಂದೂ ಪರಿಷತ್ ಕಾರ್ಯಕ್ರಮದಲ್ಲಿ ಲಿಂಗಾಯತರು, ವಿರಕ್ತಿ ಮಠಾಧೀಶರು ಪಾಲ್ಗೊಂಡಿದ್ದಾರೆ ಉಡುಪಿಯಲ್ಲಿ 1968 ರಲ್ಲಿ ವಿಶ್ವ ಹಿಂದೂ ಪರಿಷತ್ ಪ್ರಾಂತೀಯ ಸಮಾವೇಶ ನಡೆದಿತ್ತು. ಆ ಸಮಾವೇಶದಲ್ಲಿ ಸಿದ್ದಗಂಗಾ ಶ್ರೀ, ಆಗಿನ ಸುತ್ತೂರು ಶ್ರೀ ಭಾಗವಹಿಸಿದ್ದರು ಎಂದಿದ್ದಾರೆ.

ಜಾಮ್ ದಾರ್ ಹೇಳಿಕೆಯಲ್ಲಿ ಸತ್ಯ ಇಲ್ಲ. ಹಿಂದೂ ಹೋರಾಟದಲ್ಲಿ ನಿಮ್ಮದು ಪ್ರಥಮ ಧ್ವನಿ ಅಂತ ಈವರೆಗೆ ಎಲ್ಲಾ ಮಠಾಧೀಶರು ಹೇಳಿದ್ದಾರೆ. ಈಗ ಮಾತ್ರ ಹೊಸದಾಗಿ ವಿವಾದ ಪ್ರಾರಂಭವಾಗಿದೆ. ಬೌದ್ಧ- ಜೈನ ಧರ್ಮ ಪ್ರತ್ಯೇಕವಾದ ಕಾಲದಲ್ಲಿ ನಾನು ಇರಲಿಲ್ಲ. ಬಸವಣ್ಣ ಕೂಡ ಶಿವನೇ ಸರ್ವೋತ್ತಮ ಅಂತ ಹೇಳಿದ್ದಾರೆ.
ಹಿಂದೂ ಧರ್ಮದಲ್ಲಿ ಹಲವು ಪಂಥಗಳಿಗೆ ತತ್ವ, ಆಚರಣೆ ವಿಭಿನ್ನವಾದರೂ ಹಿಂದೂ ಧರ್ಮದೊಳಗೆ ಎಲ್ಲರೂ ಇದ್ದಾರೆ. ಬಸವಣ್ಣ ಪುನರ್ಜನ್ಮವನ್ನು ಒಪ್ಪಿದ್ದಾರೆ. ಅಪರಾಧ ಮಾಡಿದರೆ ನಾಯಿ- ಹಂದಿಯಾಗಿ ಹುಟ್ಟುತ್ತಾರೆಂದು ಶರಣರ ವಚನದಲ್ಲಿದೆ. ಶಿವ ಸರ್ವೋತ್ತಮ ಎನ್ನಲು ಬಸವಣ್ಣ ಆಗಮವನ್ನು ಉಲ್ಲೇಖಿಸಿದ್ದಾರೆ- ಉದಾಹರಿಸಿದ್ದಾರೆ. ನಮ್ಮ ಶಿವ ಅವೈದಿಕ ಅನ್ನಲು ಆಧಾರವೇನು ಎಂದು ಪೇಜಾವರ ಶ್ರೀಗಳು ಪ್ರಶ್ನೆ ಮಾಡಿದ್ದಾರೆ.
ಜಾಮ್ ದಾರ್ ಹೇಳಿದ್ದೆಲ್ಲ ಸತ್ಯಕ್ಕೆ ವಿರುದ್ಧ. ಲಿಂಗಾಯತರ ಮೇಲೆ ಪ್ರೀತಿಯಿಂದ ಇಷ್ಟೆಲ್ಲಾ ಹೇಳುತ್ತಿದ್ದೇನೆ. ಹಿಂದೂ ಧರ್ಮ ದುರ್ಬಲವಾಗಬಾರದು. ಕರ್ನಾಟಕದಲ್ಲಿ ಹಿಂದೂ ಧರ್ಮ ಉತ್ತಮ ರೀತಿಯಲ್ಲಿ ಬೆಂಬಲಿಸಿಕೊಂಡು ಬಂದಿದ್ದಾರೆ. ಇದರಲ್ಲಿ ವೈಯಕ್ತಿಕ ಸ್ವಾರ್ಥ ಇಲ್ಲ. ನಾನೇನು ಚುನಾವಣೆಗೆ ನಿಲ್ಲುವುದಿಲ್ಲ ಎಂದಿದ್ದಾರೆ.
ಈ ಬಗ್ಗೆ ಉಡುಪಿಯಲ್ಲಿ ಚರ್ಚೆಯಾಗಲಿ. ಜನವರಿ 18 ರ ನಂತರ ಬೆಂಗಳೂರಿನಲ್ಲಿ ಚರ್ಚೆಯಾಗಲಿ. ನಾನು ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ಗೆ ಬರಲು ಸಿದ್ಧ ಎಂದು ವಿಶ್ವೇಶ ತೀರ್ಥರು ಹೇಳಿಕೆಯಲ್ಲಿ ತಿಳಿಸಿದ್ದಾರೆ.
-
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ












Click it and Unblock the Notifications