ಜೆಡಿಎಸ್ ಸೇರುವ ಕುರಿತು ಸ್ಪಷ್ಟನೆ ಕೊಟ್ಟ ಜಯಪ್ರಕಾಶ ಹೆಗ್ಡೆ
ಉಡುಪಿ, ಫೆಬ್ರವರಿ 21 : 'ಈ ಬಾರಿ ಬಿಜೆಪಿಯಿಂದ ಪ್ರಬಲ ಟಿಕೆಟ್ ಆಕಾಂಕ್ಷಿಯಾಗಿರುವುದು ಹೌದು. ಅಂತಿಮವಾಗಿ ಟಿಕೆಟ್ ನೀಡುವುದು ಹೈಕಮಾಂಡ್ಗೆ ಬಿಟ್ಟ ವಿಚಾರ. ಬಿಜೆಪಿ ಟಿಕೆಟ್ ಸಿಕ್ಕರೆ ಮಾತ್ರ ಸ್ಪರ್ಧೆ ಮಾಡುತ್ತೇನೆ' ಎಂದು ಮಾಜಿ ಸಂಸದ ಜಯಪ್ರಕಾಶ ಹೆಗ್ಡೆ ಹೇಳಿದರು.
'ಜಯಪ್ರಕಾಶ ಹೆಗ್ಡೆ ಹಿರಿಯರು, ಹಿಂದೆ ಜೆಡಿಎಸ್ ಪಕ್ಷದಲ್ಲಿ ಇದ್ದವರು. ಮರಳಿ ಪಕ್ಷಕ್ಕೆ ಬರುವುದಾದರೆ ಸ್ವಾಗತ. ರಾಜಕೀಯದಲ್ಲಿ ಏನು ಬೇಕಾದರೂ ಆಗಬಹುದು' ಎಂದು ಉಡುಪಿ ಜಿಲ್ಲಾ ಜೆಡಿಎಸ್ ಅಧ್ಯಕ್ಷ ಯೋಗೀಶ್ ಶೆಟ್ಟಿ ಹೇಳಿದ್ದರು.
ಈ ಹೇಳಿಕೆ ಬಳಿಕ ಜಿಲ್ಲಾ ರಾಜಕಾರಣದಲ್ಲಿ ಭಾರಿ ಚರ್ಚೆ ಆರಂಭವಾಗಿತ್ತು. ಜಯಪ್ರಕಾಶ ಹೆಗ್ಡೆ ಅವರು ಬಿಜೆಪಿ ತೊರೆದು ಜೆಡಿಎಸ್ ಸೇರಲಿದ್ದಾರೆ. ಉಡುಪಿ-ಚಿಕ್ಕಮಗಳೂರು ಕ್ಷೇತ್ರದಿಂದ 2019ರ ಲೋಕಸಭಾ ಚುನಾವಣೆಗೆ ಸ್ಪರ್ಧೆ ಮಾಡಲಿದ್ದಾರೆ ಎಂಬ ಚರ್ಚೆ ಆರಂಭವಾಗಿತ್ತು.
ಮಾಧ್ಯಮಗಳ ಜೊತೆ ಮಾತನಾಡಿದ ಜಯಪ್ರಕಾಶ ಹೆಗ್ಡೆ ಅವರು ಈ ಕುರಿತು ಸ್ಪಷ್ಟನೆ ನೀಡಿದ್ದಾರೆ. 'ಇವೆಲ್ಲ ಕಲ್ಪಿತ ಸುದ್ದಿಗಳಷ್ಟೇ. ಹಿಂದೆಯೂ ಇಂತಹ ಸುದ್ದಿ ಮಾಧ್ಯಮಗಳಲ್ಲಿ ತೇಲಿ ಬಿಡಲಾಗಿತ್ತು' ಎಂದು ಹೇಳಿದ್ದಾರೆ.

ಜಯಪ್ರಕಾಶ ಹೆಗ್ಡೆ ಹೇಳಿದ್ದೇನು?
'ಉಡುಪಿ-ಚಿಕ್ಕಮಗಳೂರು ಕ್ಷೇತ್ರದಿಂದ ಬಿಜೆಪಿ ಟಿಕೆಟ್ ಸಿಕ್ಕರೆ ಮಾತ್ರ ಸ್ಪರ್ಧೆ ಮಾಡುತ್ತೇನೆ. ಇಲ್ಲವಾದಲ್ಲಿ ಪಕ್ಷಕ್ಕೆ ದುಡಿಯುತ್ತೇನೆ. ಈ ಬಾರಿ ಬಿಜೆಪಿಯಿಂದ ಪ್ರಬಲ ಟಿಕೆಟ್ ಆಕಾಂಕ್ಷಿಯಾಗಿರುವುದು ಹೌದು' ಎಂದು ಮಾಜಿ ಸಂಸದ ಜಯಪ್ರಕಾಶ ಹೆಗ್ಡೆ ಹೇಳಿದ್ದಾರೆ.

ಪ್ರಚಾರ ಮಾಡುತ್ತಿದ್ದಾರೆ
'ಸಾಮಾಜಿಕ ಜಾಲತಾಣದಲ್ಲಿ ಈ ಬಾರಿ ನನಗೆ ಟಿಕೆಟ್ ನೀಡಬೇಕು ಎಂದು ಅಭಿಮಾನಿಗಳು ಪ್ರಚಾರ ಮಾಡುತ್ತಿದ್ದಾರೆ. ಅಂತಿಮವಾಗಿ ಟಿಕೆಟ್ ನೀಡುವುದು ಹೈಕಮಾಂಡ್ಗೆ ಬಿಟ್ಟ ವಿಚಾರ' ಎಂದು ಜಯಪ್ರಕಾಶ ಹೆಗ್ಡೆ ಹೇಳಿದರು.

ಯಾರೂ ಸಂಪರ್ಕ ಮಾಡಿಲ್ಲ
'ಜೆಡಿಎಸ್ ಅಭ್ಯರ್ಥಿಯಾಗಿ ಉಡುಪಿ-ಚಿಕ್ಕಮಗಳೂರು ಕ್ಷೇತ್ರದಿಂದ ಸ್ಪರ್ಧಿಸುವಂತೆ ಯಾರೂ ಸಂಪರ್ಕ ಮಾಡಿಲ್ಲ. ಇವೆಲ್ಲ ಕಲ್ಪಿತ ಸುದ್ದಿಗಳು ಮಾತ್ರ. ಹಿಂದಿನಿಂದಲೂ ಈ ರೀತಿಯ ಸುದ್ದಿಗಳನ್ನು ಮಾಧ್ಯಮದಲ್ಲಿ ತೇಲಿಬಿಡಲಾಗುತ್ತಿದೆ' ಎಂದು ಜಯಪ್ರಕಾಶ ಹೆಗ್ಡೆ ಅವರು ಅಸಮಾಧಾನ ವ್ಯಕ್ತಪಡಿಸಿದರು.

ಶೋಭಾ ಕರಂದ್ಲಾಜೆ ಹಾಲಿ ಸಂಸದರು
ಉಡುಪಿ-ಚಿಕ್ಕಮಗಳೂರು ಕ್ಷೇತ್ರದ ಹಾಲಿ ಸಂಸದರು ಬಿಜೆಪಿಯ ಶೋಭಾ ಕರಂದ್ಲಾಜೆ. ಆದರೆ, ಈ ಬಾರಿಯ ಚುನಾವಣೆಯಲ್ಲಿ ಅವರು ಸ್ಪರ್ಧೆ ಮಾಡುವುದಿಲ್ಲ. ಮಾಜಿ ಸಂಸದ ಜಯಪ್ರಕಾಶ ಹೆಗ್ಡೆ ಅವರಿಗೆ ಟಿಕೆಟ್ ನೀಡಲಾಗುತ್ತದೆ ಎಂಬ ಸುದ್ದಿಗಳು ಹಬ್ಬಿವೆ. ಆದರೆ, ಈ ಬಗ್ಗೆ ಅಂತಿಮವಾಗಿ ಯಾವುದೇ ತೀರ್ಮಾನ ಆಗಿಲ್ಲ.

ಉಡುಪಿ-ಚಿಕ್ಕಮಗಳೂರು ಕ್ಷೇತ್ರ
ಉಡುಪಿ-ಚಿಕ್ಕಮಗಳೂರು ಕ್ಷೇತ್ರ ಬಿಜೆಪಿಯ ವಶದಲ್ಲಿದೆ. 2012ರಲ್ಲಿ ನಡೆದ ಉಪ ಚುನಾವಣೆಯಲ್ಲಿ ಜಯಪ್ರಕಾಶ ಹೆಗ್ಡೆ ಅವರು ಕಾಂಗ್ರೆಸ್ನಿಂದ ಗೆಲುವು ಸಾಧಿಸಿದ್ದರು. 2014ರ ಚುನಾವಣೆಯಲ್ಲಿ ಪುನಃ ಕ್ಷೇತ್ರ ಬಿಜೆಪಿ ವಶವಾಗಿದೆ.
-
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ -
ಮಾರ್ಚ್ 10ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಅಕ್ಷಯ ತೃತೀಯ 2026: ಏಪ್ರಿಲ್ 19ಕ್ಕೆ ಚಿನ್ನದಂತಹ ಹಬ್ಬ; ಶುಭ ಮುಹೂರ್ತ, ಪೂಜಾ ವಿಧಿವಿಧಾನ, ವಿವರ -
ಪ್ರವಾಸೋದ್ಯಮ ಇಲಾಖೆಯಿಂದ ಎಸ್ಸಿ,ಎಸ್ಟಿ ಅಭ್ಯರ್ಥಿಗಳಿಗೆ ಆತಿಥ್ಯ ಕ್ಷೇತ್ರದಲ್ಲಿ ಉಚಿತ ಕೌಶಲ್ಯಾಭಿವೃದ್ಧಿ ತರಬೇತಿ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
ಎಲ್ಪಿಜಿ ಸಿಲಿಂಡರ್ ಪೂರೈಕೆ ಸ್ಥಗಿತ: ನಾಳೆಯಿಂದ ಬೆಂಗಳೂರಿನಾದ್ಯಂತ ಹೋಟೆಲ್ಗಳು ಬಂದ್ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ












Click it and Unblock the Notifications