ಭಾರತ ಹೊಂದಾಣಿಕೆಯಾಗದಿದ್ದರೆ ಬೇರೆ ದೇಶ ನೋಡಿಕೊಳ್ಳಿ:ಬಿಜೆಪಿ ಶಾಸಕ
ಉಡುಪಿ, ಡಿಸೆಂಬರ್ 22: ಭಾರತ ದೇಶದ ಮುಸಲ್ಮಾನರಿಗೆ ಪೌರತ್ವ ತಿದ್ದುಪಡಿ ಕಾಯ್ದೆಯಿಂದ ಯಾವುದೇ ತೊಂದರೆಯಾಗುವುದಿಲ್ಲ, ಈಗಿರುವ ಅವರ ಪೌರತ್ವವನ್ನು ಕಸಿದುಕೊಳ್ಳುವುದೂ ಇಲ್ಲ ಎಂದು ಬಿಜೆಪಿ ಶಾಸಕ, ಆಡಳಿತ ಪಕ್ಷದ ಮುಖ್ಯ ಸಚೇತಕ ವಿ.ಸುನೀಲ್ ಕುಮಾರ್ ಹೇಳಿದರು.
ಮಾಜಿ ಸಚಿವ ಯು.ಟಿ.ಖಾದರ್ ಅವರು ಬೆಂಕಿ ಹಚ್ಚುವ ಮಾತನಾಡುತ್ತಾರೆ, ಅವರ ಸಹಿತ ಯಾರಿಗೆಲ್ಲ ಭಾರತದಲ್ಲಿ ನೆಲೆಸಲು ಹೊಂದಾಣಿಕೆಯಾಗುತ್ತಿಲ್ಲವೋ, ದೇಶದಲ್ಲಿ ಅಸಹಹಿಷ್ಣುತೆ ಇದೆ ಎಂಬ ಭಾವನೆ ಬಂದಿದ್ದರೆ ಅವರೆಲ್ಲ ಬೇರೆ ದೇಶ ನೋಡಿ ಅಲ್ಲಿಯ ಪೌರತ್ವಕ್ಕೆ ಅರ್ಜಿ ಸಲ್ಲಿಸಿ ಎಂದರು.
ಕಾರ್ಕಳದಲ್ಲಿ ಮಾತನಾಡಿದ ಸುನೀಲ್ ಕುಮಾರ್, ದೇಶದ ಭದ್ರತೆಗೋಸ್ಕರ ಪೌರತ್ವ ಕಾಯ್ದೆ ಜಾರಿಗೊಳಿಸಲಾಗುತ್ತದೆ. ಪೌರತ್ವ ಕಾಯ್ದೆ ಬಗ್ಗೆ ಪ್ರತಿಭಡನಾಕಾರರಿಗೆ ಕಾಂಗ್ರೆಸ್ ಪಕ್ಷ ಸರಿಯಾದ ಮಾಹಿತಿ ನೀಡದೆ ಅನಗತ್ಯ ವಿವಾದಗಳನ್ನು ಮೂಡಿಸುತ್ತಿದೆ ಎಂದು ಕಾಂಗ್ರೆಸ್ ನ್ನು ಟೀಕಿಸಿದರು.

ಪಾಕಿಸ್ತಾನ, ಬಾಂಗ್ಲಾದೇಶ ಮತ್ತು ಅಫ್ಘಾನಿಸ್ತಾನದಿಂದ ಬರುವ ಮುಸಲ್ಮಾನರಿಗೆ ಭಾರತೀಯ ಪೌರತ್ವ ಕೊಡುವ ಪ್ರಶ್ನೆಯೇ ಇಲ್ಲ. ಈ ಪೌರತ್ವ ಜಾರಿಯಿಂದ ಭಾರತದಲ್ಲಿ ನೆಲೆಸಿರುವ ಮುಸಲ್ಮಾನರಿಗೆ ಯಾವುದೇ ತೊಂದರೆ ಇಲ್ಲ ಅಂತ ಗೊತ್ತಿದ್ದರೂ ಪ್ರತಿಭಟನೆ ಮಾಡಿ ಶಾಂತಿ ಕದಡುವ ಪ್ರಯತ್ನ ಮಾಡಬಾರದು ಎಂದರು.
ಪ್ರತಿಭಟಿಸುವವರು ಯಾವ ದೇಶದ ಪರವಾಗಿ ನಿಷ್ಠೆ ತೋರುತ್ತಿದ್ದಾರೆಂಬುದು ಯಕ್ಷ ಪ್ರಶ್ನೆಯಾಗಿದೆ. ಕಾಂಗ್ರೆಸ್ ಪಕ್ಷ ಯಾವ ದೇಶದ ನಿಷ್ಠೆಗಾಗಿ ಇಂದು ಧ್ವನಿ ಎತ್ತುತ್ತಿದ್ದಾರೆ ಎಂದು ಮೊದಲು ಸ್ಪಷ್ಟಪಡಿಸಬೇಕೆಂದರು.
ಗಲಭೆಗೆ ಖಾದರ್ ಮೂಲ ಕಾರಣ:
ಶಾಂತವಾಗಿದ್ದ ಮಂಗಳೂರಲ್ಲಿ ಗಲಭೆಯಾಗಲು ಮಾಜಿ ಸಚಿವ ಯು.ಟಿ.ಖಾದರ್ ಮೂಲ ಕಾರಣ. ಅವರ ಬೆಂಕಿ ಹಚ್ಚುವ ಹೇಳಿಕೆಯಿಂದಲೇ ಪ್ರತಿಭಟನೆ ವಿಕೋಪಕ್ಕೆ ತಿರುಗಿತು ಎಂದರು. ಅಧಿಕಾರದಲ್ಲಿದ್ದಾಗ ಪರೋಕ್ಷವಾಗಿ ಗಲಭೆ ಮಾಡಲು ಪ್ರೋತ್ಸಾಹ ನೀಡುತ್ತಿದ್ದರು, ಈಗ ಅಧಿಕಾರ ಇಲ್ಲದಾಗಲೂ ನೇರವಾಗಿ ಬೆಂಬಲ ನೀಡುತ್ತಿದ್ದಾರೆ ಎಂದು ಸುನೀಲ್ ಕುಮಾರ್ ವಾಗ್ದಾಳಿ ನಡೆಸಿದರು.
ಸಾರ್ವಜನಿಕ ಆಸ್ತಿ ಪಾಸ್ತಿ ರಕ್ಷಣೆ ಮಾಡಲು, ಗಲಭೆ ನಿಯಂತ್ರಿಸಲು, ಪೊಲೀಸರ ಮೇಲಾಗುವ ದೈಹಿಕ ಹಲ್ಲೆ ತಡೆಯಲು ಅವರು ತೆಗೆದುಕೊಂಡ ಕ್ರಮವನ್ನು ನಾವು ಸಮರ್ಥಿಸಿಕೊಳ್ಳಲು ಸಿದ್ದವಿರುವುದಾಗಿ ಹೇಳಿದರು.
ಮಂಗಳೂರಲ್ಲಿ ಅಶಾಂತಿ ಮೂಡಿಸಲು ಕಾರಣವಾದವರನ್ನು ಗಡಿಪಾರು ಮಾಡಬೇಕು ಎಂದು ಆದ್ರಹಿಸಿದರು. ಆರ್ಟಿಕಲ್ 370, ತ್ರಿವಳಿ ತಲಾಖ್, ರಾಮಮಂದಿರದ ತೀರ್ಪು ಬಂದಾಗ ಗಲಾಟೆಗಳು ನಡೆದಿಲ್ಲ. ಆದರೆ ಪೌರತ್ವದ ವಿಷಯದಲ್ಲಿ ಗಲಭೆ ಏಕೆ, ಪ್ರತಿಭಟನೆ ನಡೆಸುವವರಿಗೆ ದೇಶ ನಿಷ್ಠೆ ಇದೆಯೇ ಎಂದು ಪ್ರಶ್ನಿಸಿದರು.
-
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
ಡಿವೋರ್ಸ್ವರೆಗೆ ಪತಿಯ ನಿವಾಸದಲ್ಲೇ ವಾಸ್ತವ್ಯಕ್ಕೆ ಅವಕಾಶ ಕಲ್ಪಿಸಿ: ನಟ ವಿಜಯ್ ಪತ್ನಿ ಕೋರ್ಟ್ಗೆ ಮನವಿ -
Yash: ಪತ್ನಿ ರಾಧಿಕಾ ಪಂಡಿತ್ ಹುಟ್ಟುಹಬ್ಬಕ್ಕೆ ಹೊಸ ಲುಕ್ನಲ್ಲಿ ಯಶ್ ಪ್ರತ್ಯಕ್ಷ -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
ಟಿ20 ವಿಶ್ವಕಪ್ 2026 ಫೈನಲ್ ನಂತರ ಎಲ್ಲಾ ಮಾದರಿಯ ಕ್ರಿಕೆಟ್ಗೆ ಸೂರ್ಯಕುಮಾರ್ ಯಾದವ್ ನಿವೃತ್ತಿ ಘೋಷಣೆ ವದಂತಿ -
Vijay Divorce: ಡಿವೋರ್ಸ್ ವದಂತಿ ನಡುವೆಯೇ ನಟಿ ತ್ರಿಶಾ ಜೊತೆ ಕಾಣಿಸಿಕೊಂಡ ದಳಪತಿ ವಿಜಯ್; ವಿಡಿಯೋ ವೈರಲ್ -
UPSC Results: ಯಾದಗಿರಿ ಜಿಲ್ಲೆ ಒಂದರಲ್ಲೇ 4 ಮಂದಿ ಯುಪಿಎಸ್ಸಿ ಪಾಸ್, ಯಾರವರು? ಹಿನ್ನೆಲೆ ಏನು -
Karnataka Weather: ಕಲಬುರಗಿಯಲ್ಲಿ 39 ಡಿಗ್ರಿ ಸೆಲ್ಸಿಯಸ್ ಗರಿಷ್ಠ ತಾಪಮಾನ ದಾಖಲು, ರಾಜ್ಯದ ಹಲವು ಜಿಲ್ಲೆಗಳಲ್ಲಿ ಬಿಸಿಲ ಬೇಗೆ -
ದುಬೈ ವಿಮಾನ ನಿಲ್ದಾಣಕ್ಕೆ ನುಗ್ಗಿದ ಡ್ರೋನ್, ಎಲ್ಲಾ ವಿಮಾನ ಹಾರಾಟ ದಿಢೀರ್ ಸ್ಥಗಿತ | Operation Roaring Lion -
LPG Price Hike: ಗೃಹಬಳಕೆ ಎಲ್ಪಿಜಿ ಸಿಲಿಂಡರ್ ಬೆಲೆ 60 ರೂಪಾಯಿ ಏರಿಕೆ, ವಾಣಿಜ್ಯ ಸಿಲಿಂಡರ್ ದರ 115 ರೂಪಾಯಿ ಹೆಚ್ಚಳ -
SWR: ಬೆಂಗಳೂರಿನಿಂದ ಇಲ್ಲಿಗೆ ಮಾ.10ರಿಂದ ವಿಶೇಷ ರೈಲುಗಳ ಸಂಚಾರ, ವೇಳಾಪಟ್ಟಿ ಹೀಗಿದೆ












Click it and Unblock the Notifications