ಹೂಳೆತ್ತುವ ನೆಪದಲ್ಲಿ ಕೋಟ್ಯಂತರ ಮೌಲ್ಯದ ಮರಳು ಲೂಟಿ: ಕಾಂಗ್ರೆಸ್ ಆರೋಪ
ಉಡುಪಿ, ಮೇ 27: ಉಡುಪಿಯ ಸ್ವರ್ಣ ನದಿಯಿಂದ ಹೂಳೆತ್ತುವ ನೆಪದಲ್ಲಿ ಕೋಟ್ಯಂತರ ಮೌಲ್ಯದ ಮರಳು ದೋಚಲಾಗಿದೆ. ಎಡಿಸಿ ಸೇರಿದಂತೆ 14 ಜನರ ಸಮಿತಿ ಅಕ್ರಮ ಮಾಡಿದೆ ಎಂದು ಉಡುಪಿಯ ಬ್ಲಾಕ್ ಕಾಂಗ್ರೆಸ್ ಸಮಿತಿ ಗಂಭೀರ ಆರೋಪ ಮಾಡಿದೆ.
Recommended Video
ಬ್ಲ್ಯಾಕ್ ಲಿಸ್ಟ್ ನಲ್ಲಿರುವ ಯೋಜಕ್ ಕಂಪನಿಗೆ ಟೆಂಡರ್ ನೀಡಲಾಗಿದೆ. ಡ್ಯಾಂನ ಹೂಳು ತೆಗೆಯುವ ಎಲ್ಲಾ ನಿಯಮಗಳನ್ನು ಗಾಳಿಗೆ ತೂರಲಾಗಿದೆ ಎಂದು ಆರೋಪಿಸಲಾಗಿದೆ.
ಸ್ವರ್ಣಾ ನದಿ ಉಡುಪಿಯ ಜೀವನದಿ. ಇಲ್ಲಿ ಹೂಳೆತ್ತುವ ನೆಪದಲ್ಲಿ ಕೋಟ್ಯಂತರ ಮೌಲ್ಯದ ಮರಳನ್ನು ತೆಗೆಯಲಾಗಿದೆ. ಈ ಮರಳನ್ನು ಹಿರಿಯಡ್ಕ ವ್ಯಾಪ್ತಿಯ ಕಾಡುಗಳಲ್ಲಿ ಅಕ್ರಮ ದಾಸ್ತಾನು ಮಾಡಲಾಗಿದೆ. ಬಹುಕೋಟಿ ಅಕ್ರಮದ ಬಗ್ಗೆ ಉಡುಪಿ ಜಿಲ್ಲಾಧಿಕಾರಿ ಯಾವುದೇ ಕ್ರಮ ಕೈಗೊಂಡಿಲ್ಲ. ಶಾಸಕ ರಘುಪತಿ ಭಟ್, ಲಾಲಾಜಿ ಮೆಂಡನ್ ಕೂಡಲೇ ಈ ಕುರಿತು ಉತ್ತರಿಸಬೇಕು. ಅಕ್ರಮದಲ್ಲಿ ಶಾಮೀಲಾದವರ ವಿರುದ್ಧ ಶೀಘ್ರ ಕ್ರಮ ಕೈಗೊಳ್ಳಬೇಕು.

ಈ ಸಂಬಂಧ ಎಸಿಬಿ, ಲೋಕಾಯುಕ್ತಕ್ಕೂ ದೂರು ನೀಡಿದ್ದೇವೆ. ತಕ್ಷಣ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿ ಆಗ್ರಹಿಸಿದೆ.
-
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video












Click it and Unblock the Notifications