Get Updates
Get notified of breaking news, exclusive insights, and must-see stories!

ಹೂಳೆತ್ತುವ ನೆಪದಲ್ಲಿ ಕೋಟ್ಯಂತರ ಮೌಲ್ಯದ ಮರಳು ಲೂಟಿ: ಕಾಂಗ್ರೆಸ್ ಆರೋಪ

ಉಡುಪಿ, ಮೇ 27: ಉಡುಪಿಯ ಸ್ವರ್ಣ ನದಿಯಿಂದ ಹೂಳೆತ್ತುವ ನೆಪದಲ್ಲಿ ಕೋಟ್ಯಂತರ ಮೌಲ್ಯದ ಮರಳು ದೋಚಲಾಗಿದೆ. ಎಡಿಸಿ ಸೇರಿದಂತೆ 14 ಜನರ ಸಮಿತಿ ಅಕ್ರಮ ಮಾಡಿದೆ ಎಂದು ಉಡುಪಿಯ ಬ್ಲಾಕ್ ಕಾಂಗ್ರೆಸ್ ಸಮಿತಿ ಗಂಭೀರ ಆರೋಪ ಮಾಡಿದೆ.

Recommended Video

      ಅಮೆರಿಕಾದಲ್ಲಿರುವ ನಮ್ಮ ಉಡುಪಿ ವೈದ್ಯರಿಗೆ ಸಿಕ್ಕ ಗೌರವ ಹೇಗಿದೆ ನೋಡಿ | USA | Udupi Doctors

      ಬ್ಲ್ಯಾಕ್ ಲಿಸ್ಟ್ ನಲ್ಲಿರುವ ಯೋಜಕ್ ಕಂಪನಿಗೆ ಟೆಂಡರ್ ನೀಡಲಾಗಿದೆ. ಡ್ಯಾಂನ ಹೂಳು ತೆಗೆಯುವ ಎಲ್ಲಾ ನಿಯಮಗಳನ್ನು ಗಾಳಿಗೆ ತೂರಲಾಗಿದೆ ಎಂದು ಆರೋಪಿಸಲಾಗಿದೆ.

      ಸ್ವರ್ಣಾ ನದಿ ಉಡುಪಿಯ ಜೀವನದಿ. ಇಲ್ಲಿ ಹೂಳೆತ್ತುವ ನೆಪದಲ್ಲಿ ಕೋಟ್ಯಂತರ ಮೌಲ್ಯದ ಮರಳನ್ನು ತೆಗೆಯಲಾಗಿದೆ. ಈ ಮರಳನ್ನು ಹಿರಿಯಡ್ಕ ವ್ಯಾಪ್ತಿಯ ಕಾಡುಗಳಲ್ಲಿ ಅಕ್ರಮ ದಾಸ್ತಾನು ಮಾಡಲಾಗಿದೆ. ಬಹುಕೋಟಿ ಅಕ್ರಮದ ಬಗ್ಗೆ ಉಡುಪಿ ಜಿಲ್ಲಾಧಿಕಾರಿ ಯಾವುದೇ ಕ್ರಮ ಕೈಗೊಂಡಿಲ್ಲ. ಶಾಸಕ ರಘುಪತಿ ಭಟ್, ಲಾಲಾಜಿ ಮೆಂಡನ್ ಕೂಡಲೇ ಈ ಕುರಿತು ಉತ್ತರಿಸಬೇಕು. ಅಕ್ರಮದಲ್ಲಿ ಶಾಮೀಲಾದವರ ವಿರುದ್ಧ ಶೀಘ್ರ ಕ್ರಮ ಕೈಗೊಳ್ಳಬೇಕು.

      Udupi Block Congress Allegation On Swarna River Commitee

      ಈ ಸಂಬಂಧ ಎಸಿಬಿ, ಲೋಕಾಯುಕ್ತಕ್ಕೂ ದೂರು ನೀಡಿದ್ದೇವೆ. ತಕ್ಷಣ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿ ಆಗ್ರಹಿಸಿದೆ.

      More From
      Prev
      Next
      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+