ಉಡುಪಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಹೂಳೆತ್ತುವ ನೆಪದಲ್ಲಿ ಕೋಟ್ಯಂತರ ಮೌಲ್ಯದ ಮರಳು ಲೂಟಿ: ಕಾಂಗ್ರೆಸ್ ಆರೋಪ

By ಉಡುಪಿ ಪ್ರತಿನಿಧಿ
|
Google Oneindia Kannada News

ಉಡುಪಿ, ಮೇ 27: ಉಡುಪಿಯ ಸ್ವರ್ಣ ನದಿಯಿಂದ ಹೂಳೆತ್ತುವ ನೆಪದಲ್ಲಿ ಕೋಟ್ಯಂತರ ಮೌಲ್ಯದ ಮರಳು ದೋಚಲಾಗಿದೆ. ಎಡಿಸಿ ಸೇರಿದಂತೆ 14 ಜನರ ಸಮಿತಿ ಅಕ್ರಮ ಮಾಡಿದೆ ಎಂದು ಉಡುಪಿಯ ಬ್ಲಾಕ್ ಕಾಂಗ್ರೆಸ್ ಸಮಿತಿ ಗಂಭೀರ ಆರೋಪ ಮಾಡಿದೆ.

Recommended Video

ಅಮೆರಿಕಾದಲ್ಲಿರುವ ನಮ್ಮ ಉಡುಪಿ ವೈದ್ಯರಿಗೆ ಸಿಕ್ಕ ಗೌರವ ಹೇಗಿದೆ ನೋಡಿ | USA | Udupi Doctors

ಬ್ಲ್ಯಾಕ್ ಲಿಸ್ಟ್ ನಲ್ಲಿರುವ ಯೋಜಕ್ ಕಂಪನಿಗೆ ಟೆಂಡರ್ ನೀಡಲಾಗಿದೆ. ಡ್ಯಾಂನ ಹೂಳು ತೆಗೆಯುವ ಎಲ್ಲಾ ನಿಯಮಗಳನ್ನು ಗಾಳಿಗೆ ತೂರಲಾಗಿದೆ ಎಂದು ಆರೋಪಿಸಲಾಗಿದೆ.

ಮರಳು ಮಾರಾಟಕ್ಕೆ, ಕೊಳ್ಳುವುದಕ್ಕೆ ಬರುತ್ತಿದೆ ಮೊಬೈಲ್ ಆ್ಯಪ್ಮರಳು ಮಾರಾಟಕ್ಕೆ, ಕೊಳ್ಳುವುದಕ್ಕೆ ಬರುತ್ತಿದೆ ಮೊಬೈಲ್ ಆ್ಯಪ್

ಸ್ವರ್ಣಾ ನದಿ ಉಡುಪಿಯ ಜೀವನದಿ. ಇಲ್ಲಿ ಹೂಳೆತ್ತುವ ನೆಪದಲ್ಲಿ ಕೋಟ್ಯಂತರ ಮೌಲ್ಯದ ಮರಳನ್ನು ತೆಗೆಯಲಾಗಿದೆ. ಈ ಮರಳನ್ನು ಹಿರಿಯಡ್ಕ ವ್ಯಾಪ್ತಿಯ ಕಾಡುಗಳಲ್ಲಿ ಅಕ್ರಮ ದಾಸ್ತಾನು ಮಾಡಲಾಗಿದೆ. ಬಹುಕೋಟಿ ಅಕ್ರಮದ ಬಗ್ಗೆ ಉಡುಪಿ ಜಿಲ್ಲಾಧಿಕಾರಿ ಯಾವುದೇ ಕ್ರಮ ಕೈಗೊಂಡಿಲ್ಲ. ಶಾಸಕ ರಘುಪತಿ ಭಟ್, ಲಾಲಾಜಿ ಮೆಂಡನ್ ಕೂಡಲೇ ಈ ಕುರಿತು ಉತ್ತರಿಸಬೇಕು. ಅಕ್ರಮದಲ್ಲಿ ಶಾಮೀಲಾದವರ ವಿರುದ್ಧ ಶೀಘ್ರ ಕ್ರಮ ಕೈಗೊಳ್ಳಬೇಕು.

Udupi Block Congress Allegation On Swarna River Commitee

ಈ ಸಂಬಂಧ ಎಸಿಬಿ, ಲೋಕಾಯುಕ್ತಕ್ಕೂ ದೂರು ನೀಡಿದ್ದೇವೆ. ತಕ್ಷಣ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿ ಆಗ್ರಹಿಸಿದೆ.

English summary
Udupi block congress has made serious allegation of illegal sand mining on commitee which is looking after swarna river dredging
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X