ಉಡುಪಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬೆಳ್ತಂಗಡಿಯಲ್ಲಿ ಐಷಾರಾಮಿ ಕಾರಿನಲ್ಲಿ ದನಗಳ ಸಾಗಾಟ

|
Google Oneindia Kannada News

ಮಂಗಳೂರು, ಜೂನ್ 7: ಐಷಾರಾಮಿ ಕಾರಿನಲ್ಲಿ ದನಗಳನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಪ್ರಕರಣವೊಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಬೆಳ್ತಂಗಡಿ ತಾಲೂಕಿನ ಮುಂಡಾಜೆ ಗ್ರಾಮದ ಪರಶುರಾಮ ದೇವಸ್ಥಾನದ ಚಾರ್ಮಾಡಿ ರಸ್ತೆ ತಿರುವಿನಲ್ಲಿ ಇಂದು ಮುಂಜಾನೆ ಐಷಾರಾಮಿ ಕಾರೊಂದು ಅಪಘಾತಕ್ಕೀಡಾಗಿದೆ. ಅಪಘಾತಕ್ಕೀಡಾಗಿದ್ದ ಈ ಐಷಾರಾಮಿ ಕಾರಿನಲ್ಲಿ ಅಕ್ರಮವಾಗಿ ಹಸುಗಳನ್ನು ಸಾಗಾಟ ಮಾಡಲಾಗುತ್ತಿದ್ದದ್ದು ತಿಳಿದುಬಂದಿದೆ.

ಖಾಸಗಿ ಬಸ್ ನಲ್ಲಿ ಅಕ್ರಮ ದನದ ಮಾಂಸ ಸಾಗಾಟ ಪತ್ತೆಖಾಸಗಿ ಬಸ್ ನಲ್ಲಿ ಅಕ್ರಮ ದನದ ಮಾಂಸ ಸಾಗಾಟ ಪತ್ತೆ

ಅಕ್ರಮವಾಗಿ ಕಸಾಯಿಖಾನೆಗೆ ಸಾಗಾಟ ಮಾಡಲು ಸುಮಾರು ಆರು ದನಗಳನ್ನು ಈ ಐಷಾರಾಮಿ ಕಾರಿನಲ್ಲಿ ತುಂಬಿಸಲಾಗಿತ್ತು. ಆದರೆ ಪರಶುರಾಮ ದೇವಸ್ಥಾನದ ಚಾರ್ಮಾಡಿ ರಸ್ತೆ ತಿರುವಿನಲ್ಲಿ ಕಾರು ಅಪಘಾತಕ್ಕೀಡಾಗಿದೆ. ಕಾರಿನಲ್ಲಿದ್ದ 5 ಹಸುಗಳು ಸಾವನ್ನಪ್ಪಿದ್ದು, ಒಂದು ಹಸುವಿನ ಸ್ಥಿತಿ ಗಂಭೀರವಾಗಿದೆ.

 Illegal transport of cow in luxury Car

ದನಗಳನ್ನು ಬೆಂಗಳೂರಿಗೆ ಸಾಗಿಸಲಾಗುತ್ತಿದ್ದುದಾಗಿ ತಿಳಿದುಬಂದಿದ್ದು. ಕಾರು ಅಪಘಾತಕ್ಕೀಡಾಗುತ್ತಿದ್ದಂತೆ ಕಾರಿನಲ್ಲಿದ್ದವರು ಸ್ಥಳದಿಂದ ಪರಾರಿಯಾಗಿದ್ದಾರೆ. ಸ್ಥಳಕ್ಕೆ ಪೊಲೀಸರು ತೆರಳಿ ಪರಿಶೀಲನೆ ನಡೆಸಿದ್ದು, ತನಿಖೆ ಆರಂಭಿಸಿದ್ದಾರೆ.

 Illegal transport of cow in luxury Car
English summary
Luxury car is being used for cattle transport found near Belthangadi. It is said that these cattle are transporting to Bangaluru slaughter house
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X