ಬೆಳ್ತಂಗಡಿಯಲ್ಲಿ ಐಷಾರಾಮಿ ಕಾರಿನಲ್ಲಿ ದನಗಳ ಸಾಗಾಟ
ಮಂಗಳೂರು, ಜೂನ್ 7: ಐಷಾರಾಮಿ ಕಾರಿನಲ್ಲಿ ದನಗಳನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಪ್ರಕರಣವೊಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಬೆಳ್ತಂಗಡಿ ತಾಲೂಕಿನ ಮುಂಡಾಜೆ ಗ್ರಾಮದ ಪರಶುರಾಮ ದೇವಸ್ಥಾನದ ಚಾರ್ಮಾಡಿ ರಸ್ತೆ ತಿರುವಿನಲ್ಲಿ ಇಂದು ಮುಂಜಾನೆ ಐಷಾರಾಮಿ ಕಾರೊಂದು ಅಪಘಾತಕ್ಕೀಡಾಗಿದೆ. ಅಪಘಾತಕ್ಕೀಡಾಗಿದ್ದ ಈ ಐಷಾರಾಮಿ ಕಾರಿನಲ್ಲಿ ಅಕ್ರಮವಾಗಿ ಹಸುಗಳನ್ನು ಸಾಗಾಟ ಮಾಡಲಾಗುತ್ತಿದ್ದದ್ದು ತಿಳಿದುಬಂದಿದೆ.
ಖಾಸಗಿ ಬಸ್ ನಲ್ಲಿ ಅಕ್ರಮ ದನದ ಮಾಂಸ ಸಾಗಾಟ ಪತ್ತೆ
ಅಕ್ರಮವಾಗಿ ಕಸಾಯಿಖಾನೆಗೆ ಸಾಗಾಟ ಮಾಡಲು ಸುಮಾರು ಆರು ದನಗಳನ್ನು ಈ ಐಷಾರಾಮಿ ಕಾರಿನಲ್ಲಿ ತುಂಬಿಸಲಾಗಿತ್ತು. ಆದರೆ ಪರಶುರಾಮ ದೇವಸ್ಥಾನದ ಚಾರ್ಮಾಡಿ ರಸ್ತೆ ತಿರುವಿನಲ್ಲಿ ಕಾರು ಅಪಘಾತಕ್ಕೀಡಾಗಿದೆ. ಕಾರಿನಲ್ಲಿದ್ದ 5 ಹಸುಗಳು ಸಾವನ್ನಪ್ಪಿದ್ದು, ಒಂದು ಹಸುವಿನ ಸ್ಥಿತಿ ಗಂಭೀರವಾಗಿದೆ.
ದನಗಳನ್ನು ಬೆಂಗಳೂರಿಗೆ ಸಾಗಿಸಲಾಗುತ್ತಿದ್ದುದಾಗಿ ತಿಳಿದುಬಂದಿದ್ದು. ಕಾರು ಅಪಘಾತಕ್ಕೀಡಾಗುತ್ತಿದ್ದಂತೆ ಕಾರಿನಲ್ಲಿದ್ದವರು ಸ್ಥಳದಿಂದ ಪರಾರಿಯಾಗಿದ್ದಾರೆ. ಸ್ಥಳಕ್ಕೆ ಪೊಲೀಸರು ತೆರಳಿ ಪರಿಶೀಲನೆ ನಡೆಸಿದ್ದು, ತನಿಖೆ ಆರಂಭಿಸಿದ್ದಾರೆ.