ಉಡುಪಿಯ ಸ್ವರ್ಣಾ ಅಕ್ರಮ ಮರಳು ದಾಸ್ತಾನು ಕಳ್ಳತನ: ದೂರು ದಾಖಲು
ಉಡುಪಿ, ಜೂನ್ 26: ಉಡುಪಿಯ ಸ್ವರ್ಣಾ ನದಿಯ ಮರಳು ಲೂಟಿ ಪ್ರಕರಣ ಇದೀಗ ಲೋಕಾಯುಕ್ತದ ಮೆಟ್ಟಿಲು ಹತ್ತಿರುವುದರ ನಡುವೆಯೇ ಇನ್ನೊಂದು ತಿರುವು ಪಡೆದುಕೊಂಡಿದೆ.
ಸ್ವರ್ಣಾ ನದಿಗೆ ಕಟ್ಟಲಾದ ಬಜೆ ಡ್ಯಾಂ ವ್ಯಾಪ್ತಿಯಲ್ಲಿ ಗುತ್ತಿಗೆದಾರರು ಅಕ್ರಮವಾಗಿ ಮರಳುಗಾರಿಕೆ ನಡೆಸಿ, ಬಳಿಕ ಗಣಿ ಇಲಾಖೆ ವಶದಲ್ಲಿದ್ದ 20 ಮೆಟ್ರಿಕ್ ಟನ್ ಮರಳನ್ನು ಕಳ್ಳತನ ಮಾಡಲಾಗಿದೆ. ಈ ಸಂಬಂಧ ಗಣಿ ಇಲಾಖೆ ಅಧಿಕಾರಿ ಗೌತಮ್ ಶಾಸ್ತ್ರೀ ಪೊಲೀಸರಿಗೆ ದೂರು ನೀಡಿದ್ದಾರೆ.
ಕಳೆದ ಮೇ ತಿಂಗಳು ಲೋಕಾಯುಕ್ತ ಹಾಗೂ ಗಣಿ ಇಲಾಖೆ ದಾಳಿ ನಡೆಸಿ ಅನಧಿಕೃತವಾಗಿ ಹೂಳೆತ್ತಿದ್ದ ಮರಳನ್ನು ವಶಕ್ಕೆ ತೆಗೆದುಕೊಂಡಿತ್ತು. ಈ 70 ಮೆಟ್ರಿಕ್ ಟನ್ ಹೂಳು ಮಿಶ್ರಿತ ಮರಳನ್ನು ಹಿರಿಯಡ್ಕದಲ್ಲಿ ದಾಸ್ತಾನು ಮಾಡಲಾಗಿತ್ತು. ಯೋಜಕ ಕಂಪನಿಗೆ ಹೂಳೆತ್ತುವ ಟೆಂಡರ್ ನೀಡಲಾಗಿತ್ತು.

ಇದೀಗ ಯೋಜಕ ಇಂಡಿಯಾ ಸಂಸ್ಥೆಯ ಪ್ರತಿನಿಧಿಗಳಾದ ದಯಾನಂದ ಮಲ್ಯ, ಅಶೋಕ ಜೋಗಿ ಮೇಲೆ ಗಣಿ ಇಲಾಖೆ ಅಧಿಕಾರಿ ಗೌತಮ್ ಶಾಸ್ತ್ರೀ ಕೇಸು ದಾಖಲಿಸಿದ್ದು, ನ್ಯಾಯಾಲಯದಲ್ಲಿ ಪ್ರಕರಣ ನಡೆಯುತ್ತಿದೆ.
ಸ್ವರ್ಣಾ ನದಿಯ ಮರಳು ಲೂಟಿಗೆ ಸಂಬಂಧಿಸಿ ಉಡುಪಿಯ ಯುವ ಕಾಂಗ್ರೆಸ್, ಕರ್ತವ್ಯ ಲೋಪ ಮಾಡಿದ್ದಾರೆ ಎಂದು ಆರೋಪಿಸಿ ಉಡುಪಿ ಜಿಲ್ಲಾಧಿಕಾರಿ ವಿರುದ್ಧವೇ ದೂರನ್ನು ದಾಖಲಿಸಿದೆ. ಗುರುವಾರ ಕೂಡ ಯುವ ಕಾಂಗ್ರೆಸ್ ಪತ್ರಿಕಾಗೋಷ್ಠಿ ನಡೆಸಿ ಲೋಕಾಯುಕ್ತ ಶೀಘ್ರ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿತ್ತು. ಇದೇ ಹೊತ್ತಿಗೆ ಅಕ್ರಮ ಮರಳು ದಾಸ್ತಾನು ಕಳ್ಳತನವಾಗಿದ್ದು, ಮರಳು ಲೂಟಿ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದಂತಾಗಿದೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications