ಉಡುಪಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಉಡುಪಿಯ ಸ್ವರ್ಣಾ ಅಕ್ರಮ ಮರಳು ದಾಸ್ತಾನು ಕಳ್ಳತನ: ದೂರು ದಾಖಲು

By ಉಡುಪಿ ಪ್ರತಿನಿಧಿ
|
Google Oneindia Kannada News

ಉಡುಪಿ, ಜೂನ್ 26: ಉಡುಪಿಯ ಸ್ವರ್ಣಾ ನದಿಯ ಮರಳು ಲೂಟಿ ಪ್ರಕರಣ ಇದೀಗ ಲೋಕಾಯುಕ್ತದ ಮೆಟ್ಟಿಲು ಹತ್ತಿರುವುದರ ನಡುವೆಯೇ ಇನ್ನೊಂದು ತಿರುವು ಪಡೆದುಕೊಂಡಿದೆ.

ಸ್ವರ್ಣಾ ನದಿಗೆ ಕಟ್ಟಲಾದ ಬಜೆ ಡ್ಯಾಂ ವ್ಯಾಪ್ತಿಯಲ್ಲಿ ಗುತ್ತಿಗೆದಾರರು ಅಕ್ರಮವಾಗಿ ಮರಳುಗಾರಿಕೆ ನಡೆಸಿ, ಬಳಿಕ ಗಣಿ ಇಲಾಖೆ ವಶದಲ್ಲಿದ್ದ 20 ಮೆಟ್ರಿಕ್ ಟನ್ ಮರಳನ್ನು ಕಳ್ಳತನ ಮಾಡಲಾಗಿದೆ. ಈ ಸಂಬಂಧ ಗಣಿ ಇಲಾಖೆ ಅಧಿಕಾರಿ ಗೌತಮ್ ಶಾಸ್ತ್ರೀ ಪೊಲೀಸರಿಗೆ ದೂರು ನೀಡಿದ್ದಾರೆ.

ಭಾಸ್ಕರ್ ಶೆಟ್ಟಿ ಕೊಲೆ ಪ್ರಕರಣ; ನಿರಂಜನ್ ಭಟ್ ಗೆ ಮಧ್ಯಂತರ ಜಾಮೀನುಭಾಸ್ಕರ್ ಶೆಟ್ಟಿ ಕೊಲೆ ಪ್ರಕರಣ; ನಿರಂಜನ್ ಭಟ್ ಗೆ ಮಧ್ಯಂತರ ಜಾಮೀನು

ಕಳೆದ ಮೇ ತಿಂಗಳು ಲೋಕಾಯುಕ್ತ ಹಾಗೂ ಗಣಿ ಇಲಾಖೆ ದಾಳಿ ನಡೆಸಿ ಅನಧಿಕೃತವಾಗಿ ಹೂಳೆತ್ತಿದ್ದ ಮರಳನ್ನು ವಶಕ್ಕೆ ತೆಗೆದುಕೊಂಡಿತ್ತು. ಈ 70 ಮೆಟ್ರಿಕ್ ಟನ್ ಹೂಳು ಮಿಶ್ರಿತ ಮರಳನ್ನು ಹಿರಿಯಡ್ಕದಲ್ಲಿ ದಾಸ್ತಾನು ಮಾಡಲಾಗಿತ್ತು. ಯೋಜಕ ಕಂಪನಿಗೆ ಹೂಳೆತ್ತುವ ಟೆಂಡರ್ ನೀಡಲಾಗಿತ್ತು.

Udupis Swarna River Illegal Sand Stock Theft: Complaint Filed

ಇದೀಗ ಯೋಜಕ ಇಂಡಿಯಾ ಸಂಸ್ಥೆಯ ಪ್ರತಿನಿಧಿಗಳಾದ ದಯಾನಂದ ಮಲ್ಯ, ಅಶೋಕ ಜೋಗಿ ಮೇಲೆ ಗಣಿ ಇಲಾಖೆ ಅಧಿಕಾರಿ ಗೌತಮ್ ಶಾಸ್ತ್ರೀ ಕೇಸು ದಾಖಲಿಸಿದ್ದು, ನ್ಯಾಯಾಲಯದಲ್ಲಿ ಪ್ರಕರಣ ನಡೆಯುತ್ತಿದೆ.

ಕೊರೊನಾ ವೈರಸ್ ಹರಡಿಸಿದ ಮಹಿಳೆ ವಿರುದ್ಧ ಕ್ರಿಮಿನಲ್ ಕೇಸ್: ಉಡುಪಿ ಡಿಸಿಕೊರೊನಾ ವೈರಸ್ ಹರಡಿಸಿದ ಮಹಿಳೆ ವಿರುದ್ಧ ಕ್ರಿಮಿನಲ್ ಕೇಸ್: ಉಡುಪಿ ಡಿಸಿ

ಸ್ವರ್ಣಾ ನದಿಯ ಮರಳು ಲೂಟಿಗೆ ಸಂಬಂಧಿಸಿ ಉಡುಪಿಯ ಯುವ ಕಾಂಗ್ರೆಸ್, ಕರ್ತವ್ಯ‌ ಲೋಪ ಮಾಡಿದ್ದಾರೆ ಎಂದು ಆರೋಪಿಸಿ ಉಡುಪಿ ಜಿಲ್ಲಾಧಿಕಾರಿ ವಿರುದ್ಧವೇ ದೂರನ್ನು ದಾಖಲಿಸಿದೆ. ಗುರುವಾರ ಕೂಡ ಯುವ ಕಾಂಗ್ರೆಸ್ ಪತ್ರಿಕಾಗೋಷ್ಠಿ ನಡೆಸಿ ಲೋಕಾಯುಕ್ತ ಶೀಘ್ರ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿತ್ತು. ಇದೇ ಹೊತ್ತಿಗೆ ಅಕ್ರಮ ಮರಳು ದಾಸ್ತಾನು ಕಳ್ಳತನವಾಗಿದ್ದು, ಮರಳು ಲೂಟಿ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದಂತಾಗಿದೆ.

English summary
About 20 metric tons of sand has been stolen In Hiriyadka. Mines officials lodged a complaint with the police.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X