ಮಂಗಳೂರು ಸ್ಪೋಟಕ ಪ್ರಕರಣ ನಿಷ್ಪಕ್ಷಪಾತ ತನಿಖೆ ಎಂದ ಬೊಮ್ಮಾಯಿ
ಮಂಗಳೂರು, ಜನವರಿ 26: ಆದಿತ್ಯರಾವ್ ಮಂಗಳೂರು ವಿಮಾನ ನಿಲ್ದಾಣಕ್ಕೆ ಸ್ಪೋಟಕ ಇರಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಇಲಾಖೆಯನ್ನು ಟೀಕೆ ಮಾಡಲು ಯಾವುದೇ ಕಾರಣಗಳೂ ಇಲ್ಲ. ಯಾರೇ ತಪ್ಪಿತಸ್ಥರಾದರೂ ನ್ಯಾಯ ಸಮ್ಮತ, ನಿಷ್ಪಕ್ಷಪಾತ ತನಿಖೆ ಮಾಡುತ್ತೇವೆ ಎಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಹೇಳಿದರು.
ಉಡುಪಿಯಲ್ಲಿ ಗಣರಾಜ್ಯೋತ್ಸವ ಕಾರ್ಯಕ್ರಮದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಈ ಪ್ರಕರಣದ ಕುರಿತು ನಾನು ಮೊದಲ ದಿನವೇ ಹೇಳಿದ್ದೇನೆ, ಯಾವುದೇ ಸಂಘಟನೆ ಅಥವಾ ವ್ಯಕ್ತಿಯ ಮೇಲೂ ನಾನು ದೋಷಾರೋಪ ಮಾಡಿರಲಿಲ್ಲ. ಪೊಲೀಸರ ತನಿಖೆಗೆ ಹೆದರಿಯೇ ಆದಿತ್ಯರಾವ್ ಶರಣಾಗಿದ್ದಾನೆ ಎಂದು ತಿಳಿಸಿದರು.
ಬಾಂಬ್ ಪ್ರಕರಣದಲ್ಲಿ ನಿಷ್ಪಕ್ಷಪಾತ ಮತ್ತು ದಕ್ಷತೆಯಿಂದ ತನಿಖೆಯಾಗಿದ್ದರಿಂದಲೇ ಆರೋಪಿ ಪತ್ತೆಯಾಗಿದ್ದಾನೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದರು. ಅಪರಾಧ ಅಪರಾಧವೇ, ಅಪರಾಧಿ ಅಪರಾಧಿಯೇ ಅನ್ನೋದು ನಮ್ಮ ನಂಬಿಕೆ. ಈ ವಿಷಯದಲ್ಲಿ ಮೊಸರಲ್ಲಿ ಕಲ್ಲು ಹುಡುಕುವ ಕೆಲಸವನ್ನು ಯಾರೂ ಮಾಡಬಾರದು ಎಂದು ಮನವಿ ಮಾಡಿದರು.

ಸಚಿವ ಸಂಪುಟ ಗೊಂದಲ ಕುರಿತು ಪ್ರತಿಕ್ರಿಯೆ ನೀಡಿದ ಸಚಿವರು, ಎಲ್ಲಾ ವಿಚಾರ ಮುಖ್ಯಮಂತ್ರಿಗಳ ಗಮನದಲ್ಲಿದೆ. ಸಿಎಂ ಯಡಿಯೂರಪ್ಪನವರು ಸೂಕ್ತ ತೀರ್ಮಾನ ತೆಗೆದುಕೊಳ್ಳುತ್ತಾರೆ ಎಂದರು. ಸಚಿವ ಸಂಪುಟ ವಿಸ್ತರಣೆಯ ಸಂಪೂರ್ಣ ಅಧಿಕಾರ ಸಿಎಂ ಅವರಿಗಿದೆ. ವರಿಷ್ಠರ ಜೊತೆಗೆ ಚರ್ಚೆ ಮಾಡಿದ ನಂತರ ಅಂತಿಮ ನಿರ್ಧಾರಕ್ಕೆ ಬರುತ್ತಾರೆ.
ಪೇಜಾವರ ಮಠದ ವಿಶ್ವೇಶತೀರ್ಥ ಸ್ವಾಮೀಜಿಗೆ ಮರಣೋತ್ತರವಾಗಿ ಪದ್ಮವಿಭೂಷಣ ಪ್ರಶಸ್ತಿ ಸಿಕ್ಕಿದ್ದಕ್ಕೆ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರೂ ಆದ ಬಸವರಾಜ ಬೊಮ್ಮಾಯಿ ಅಭಿನಂದನೆ ಸಲ್ಲಿಸಿದರು. ಅಸ್ಪೃಶ್ಯತೆ ದೂರ ಮಾಡಿದವರಲ್ಲಿ ಪೇಜಾವರ ಸ್ವಾಮೀಜಿ ಪ್ರಮುಖರು. ಅವರೊಬ್ಬ ಶಾಂತಿಧೂತ. ಅವರ ವಿಚಾರಗಳಿಗೆ ಗೌರವ ಕೊಟ್ಟು, ಶ್ರೀಗಳ ಮಾರ್ಗದಲ್ಲಿ ನಡೆಯೋಣ ಎಂದರು.
ಬಿಜೆಪಿ ದೇಶಾದ್ಯಂತ ಸಿಎಎ ಬಗ್ಗೆ ಜಾಗೃತಿ ಮೂಡಿಸುವ ಕೆಲಸ ಮಾಡುತ್ತಿದೆ ಎಂದ ಸಚಿವರು, ನಾಳೆ ರಾಜನಾಥ್ ಸಿಂಗ್ ಮಂಗಳೂರಿಗೆ ಬರ್ತಿದ್ದಾರೆ. ಮಂಗಳೂರು ಹೊರವಲಯದಲ್ಲಿ ಜಾಗೃತಿ ಸಮಾವೇಶ ನಡೆಯುವುದರಿಂದ, ಶಾಂತಿ, ಕಾನೂನು ಸುವ್ಯವಸ್ಥೆಗೆ ನಮ್ಮ ಇಲಾಖೆ ಎಲ್ಲಾ ಕ್ರಮ ಕೈಗೊಂಡಿದೆ ಎಂದು ಹೇಳಿದರು.
-
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಇರಾನ್ ಪರಮಾಣು ವಿಜ್ಞಾನಿ ಕಥೆ ಮುಗಿಸಿದ ಇಸ್ರೇಲ್, ಮತ್ತಷ್ಟು ತಿಕ್ಕಾಟ ಶುರು | Operation Roaring Lion -
ಹೊಸೂರು ವಿಮಾನ ನಿಲ್ದಾಣ: ಬೆಂಗಳೂರು ಸಮೀಪ 2,979 ಎಕರೆ ಭೂಮಿ ಸ್ವಾಧೀನ; ಕನ್ನಡದಲ್ಲೇ ಮಾತನಾಡಿದ ತಮಿಳುನಾಡು ಶಾಸಕ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
Rashmika Mandanna: ಆ ಆಡಿಯೋ, ವಿಷಯವನ್ನ 24 ಗಂಟೆಯೊಳಗೆ ಡಿಲೀಟ್ ಮಾಡದಿದ್ದರೆ ಕಾನೂನು ಕ್ರಮ ಎಂದ ರಶ್ಮಿಕಾ ಮಂದಣ್ಣ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
ವಿಶ್ವಗುರು ಬಸವಣ್ಣ ಮತ್ತು ಅಕ್ಕಮಹಾದೇವಿ ಬಗ್ಗೆ ಅವಹೇಳನಕಾರಿ ಪೋಸ್ಟ್: ಆರೋಪಿ ಬಂಧನಕ್ಕೆ ಆಗ್ರಹ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ












Click it and Unblock the Notifications