ಉಡುಪಿಯ ಐದು ತಾಲೂಕುಗಳಲ್ಲಿ ಬೆಳಗ್ಗೆಯಿಂದ ಸುರಿಯುತಲಿದೆ ಬಿರುಸಿನ ಮಳೆ
Recommended Video

ಉಡುಪಿ, ಜೂನ್ 07: ಹವಾಮಾನ ಇಲಾಖೆ ತಿಳಿಸಿದಂತೆ ಜಿಲ್ಲೆಗೆ ಮುಂಗಾರು ಪ್ರವೇಶ ಮಾಡಿದೆ. ಹವಾಮಾನ ಇಲಾಖೆ ಪ್ರಕಾರ ಕರಾವಳಿಯಲ್ಲಿ ಇನ್ನು 6 ದಿನಗಳ ಕಾಲ ಭಾರಿ ಮಳೆ ಸುರಿಯಲಿದ್ದು, ಮಿಂಚು ಸಿಡಿಲಿನ ಅಬ್ಬರ ಕೂಡ ಇರಲಿದೆ.
ಬೆಳಗ್ಗೆ ಆರಂಭಿಸಿದ ಧಾರಾಕಾರ ಮಳೆ ಇನ್ನೂ ಮುಂದುವರೆಯುತ್ತಿದೆ. ಉಡುಪಿ ಜಿಲ್ಲೆಯ 5 ತಾಲೂಕುಗಳಲ್ಲೂ ಬಿರುಸಿನ ಮಳೆ ಬಂದಿದ್ದು, ಮುಂಗಾರು ದಿನಪೂರ್ತಿ ಮುಂದುವರೆಯುವ ಸಾಧ್ಯತೆ ಕಾಣುತ್ತಿದೆ. ಈಗಾಗಲೇ ಸಂಪ್ರದಾಯದಂತೆ ನಾಡದೋಣಿಗಳು ಮೀನುಗಾರಿಕೆಗೆ ಹೊರಟಿದ್ದು, ಭದ್ರತಾ ದೃಷ್ಟಿಯಿಂದ ಜಿಲ್ಲಾಡಳಿತ ಮುನ್ನೆಚ್ಚರಿಕಾ ಸಂದೇಶ ರವಾನಿಸಿದೆ.
ಇತ್ತೀಚೆಗೆ ಚಂಡಮಾರುತದಿಂದ ಸುರಿದ ಮಳೆಗೆ ಕರಾವಳಿ ಅಲ್ಲೋಲ ಕಲ್ಲೋಲವಾಗಿತ್ತು. ಮಂಗಳೂರು ಅರ್ಧದಷ್ಟು ಭಾಗ ನೀರಿನಲ್ಲಿ ಮುಳುಗಿತ್ತು. ಅನೇಕ ಕಡೆ ನೆರೆ ಬಂದು ಸಾವು ನೋವು ಸಂಭವಿಸಿತ್ತು. ಇನ್ನು ಪಡುಬಿದ್ರೆಯ ಬಾಲಕಿ ನೆರೆಯಲ್ಲಿ ಕೊಚ್ಚಿ ಹೋದ ಘಟನೆ ಇನ್ನೂ ಜನರ ಮನಸ್ಸಿನಿಂದ ಮರೆಮಾಚಿಲ್ಲ.

ಅದರ ಬೆನ್ನಲ್ಲೆ ಇದೀಗ ಮುಂಗಾರು ಪ್ರವೇಶ ಮಾಡಿದ್ದು, ಜನರಲ್ಲಿ ಮತ್ತೆ ಆತಂಕ ಮೂಡಿದೆ. ಈ ಬಗ್ಗೆ ಜಿಲ್ಲಾಡಳಿತ ಕೂಡ ಎಚ್ಚರಿಕೆ ವಹಿಸಿದೆ.
-
Gold: ದುಬೈಯಿಂದ ಭಾರತಕ್ಕೆ ಚಿನ್ನದ ಪೂರೈಕೆ ಪುನರಾರಂಭ; ಗ್ರಾಹಕರ ನಿರ್ಧಾರದಿಂದ ಬೆದರಿದ ವ್ಯಾಪಾರಿಗಳು -
BCCI: ಕರ್ನಾಟಕದ ಕ್ರಿಕೆಟ್ ದಿಗ್ಗಜರಾದ ರಾಹುಲ್ ದ್ರಾವಿಡ್, ರೋಜರ್ ಬಿನ್ನಿಗೆ ಬಿಸಿಸಿಐ ಅತ್ಯುನ್ನತ ಪ್ರಶಸ್ತಿ -
PUC ವಿದ್ಯಾರ್ಥಿಗಳ ಗಮನಕ್ಕೆ: ದ್ವಿತೀಯ ಪಿಯುಸಿ ಫಲಿತಾಂಶ ಸುಧಾರಣೆಗೆ ಇನ್ಮುಂದೆ 2 ವರ್ಷ ಮಾತ್ರ ಅವಕಾಶ -
Weekly Horoscope March 16-22: ಈ ಯುಗಾದಿಗೆ ಯಾವ ರಾಶಿಯವರಿಗೆ ಅದೃಷ್ಟದ ಬಾಗಿಲು ತೆರೆಯಲಿದೆ? ಇಲ್ಲಿದೆ ಈ ವಾರದ ನಿಮ್ಮ ರಾಶಿ ಫಲ -
Ragi Mudde: ಕರ್ನಾಟಕದ ರಾಗಿ ಮುದ್ದೆ ಸವಿಯಬೇಕು: ಮಂಡ್ಯದಲ್ಲಿ ಬಯಕೆ ಬಿಚ್ಚಿಟ್ಟ ಕೇಂದ್ರ ಸಚಿವ ಮನ್ಸುಖ್ ಮಾಂಡವೀಯ -
ರೈತರ ಹಿತಾಸಕ್ತಿಗೆ ಧಕ್ಕೆಯಿಲ್ಲ: 1 ರೂಪಾಯಿಗೆ ಲೀಟರ್ ಹಾಲು ವಿವಾದಕ್ಕೆ ಸ್ಪಷ್ಟನೆ ಕೊಟ್ಟ FlipKart -
Yash: ಯಶ್ ಡಿಪ್ರೆಶನ್ನಲ್ಲಿದ್ದಾರೆ, ಕೆಜಿಎಫ್ ರೀತಿಯ ಸಿನಿಮಾ ನೀಡಲು ಆಗ್ತಿಲ್ಲ: ಜ್ಯೋತಿಷಿ ವೇಣುಸ್ವಾಮಿ -
Gold Rate: ಬೆಂಗಳೂರಿನಲ್ಲಿ ಇಳಿಕೆಯಾಯ್ತು ಚಿನ್ನ-ಬೆಳ್ಳಿ ಬೆಲೆ; ಇಲ್ಲಿದೆ ದರ ಪಟ್ಟಿ -
ವೈಭವ್ ಸೂರ್ಯವಂಶಿ ಅದೃಷ್ಟದ ಮೇಲೆ ಸವಾರಿ ಮಾಡುತ್ತಿದ್ದಾರೆ: ಕೊಡಗಿನ ರಾಬಿನ್ ಉತ್ತಪ್ಪ ಎಚ್ಚರಿಕೆಯ ಸಲಹೆ -
Double-Decker Flyover: ಸಿಲ್ಕ್ ಬೋರ್ಡ್ ಟ್ರಾಫಿಕ್ಗೆ ಮುಕ್ತಿ: ಇದೇ ತಿಂಗಳಲ್ಲಿ ಡಬಲ್ ಡೆಕ್ಕರ್ ಫ್ಲೈಓವರ್ ಸಂಚಾರಕ್ಕೆ ಮುಕ್ತ -
ಮಾರ್ಚ್ 15 ದಿನ ಭವಿಷ್ಯ: ಈ ರಾಶಿಯವರಿಗೆ ಒಲಿಯಲಿದೆ ಅದೃಷ್ಟ; ನಿಮ್ಮ ಜಾತಕ ಹೇಗಿದೆ ತಿಳಿಯಿರಿ -
Gold Rate: ಆಭರಣ ಪ್ರಿಯರ ಗಮನಕ್ಕೆ; ಮಾರುಕಟ್ಟೆಯಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ ಗೊತ್ತಾ? ಇಲ್ಲಿದೆ ಮಾಹಿತಿ












Click it and Unblock the Notifications