ಭಾಸ್ಕರ ಶೆಟ್ಟಿ ಕುಟುಂಬಸ್ಥರ ವಿರುದ್ಧ ಪ್ರತಿಬಂಧಕಾಜ್ಞೆ
ಉದ್ಯಮಿ ಭಾಸ್ಕರ ಶೆಟ್ಟಿ ಕೊಲೆ ಪ್ರಕರಣ ಹೊಸ ತಿರುವು ಪಡೆದುಕೊಂಡಿದ್ದು, ಭಾಸ್ಕರ ಶೆಟ್ಟಿ ಕುಟುಂಬಸ್ಥರ ವಿರುದ್ಧ ನ್ಯಾಯಾಲಯ ಪ್ರತಿಬಂಧಕಾಜ್ಞೆ ಹೊರಡಿಸಿದೆ.
ಉಡುಪಿ, ನವೆಂಬರ್, 23: ಭಾಸ್ಕರ್ ಶೆಟ್ಟಿ ಕೊಲೆ ಪ್ರಕರಣ ದಿನೇ ದಿನೇ ಹೊಸ ತಿರುವು ಪಡೆಯುತ್ತಿದೆ. ಉಡುಪಿ ದುರ್ಗಾ ಇಂಟರ್ನ್ಯಾಷನಲ್ ಹೊಟೇಲ್ ವ್ಯವಹಾರಕ್ಕೆ ಸಂಬಂಧಿಸಿ ಈಗಾಗಲೇ ಎರಡು ಕುಟುಂಬಗಳ ನಡುವೆ ಕಲಹ ಸೃಷ್ಟಿಯಾಗಿತ್ತು.
ಭಾಸ್ಕರ್ ಶೆಟ್ಟಿಯವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಅವರ ತಾಯಿ ಹಾಗೂ ಇತರರನ್ನು ಪ್ರತಿಬಂಧಿಸಿ ಉಡುಪಿಯ ಪ್ರಧಾನ ಸಿವಿಲ್ ನ್ಯಾಯಾಧೀಶರು ಮತ್ತು ಜೆಎಂಎಫ್ ಸಿ ನ್ಯಾಯಾಲಯ ತಾತ್ಕಾಲಿಕ ಪ್ರತಿಬಂಧಕಾಜ್ಞೆ ಹೊರಡಿಸಿದೆ ಎಂದು ನ್ಯಾಯವಾದಿ ಎಂ. ಚಿದಾನಂದ ಕೆದಿಲಾಯ ಬುಧವಾರ ಸುದ್ದಿಗೋಷ್ಟಿಯಲ್ಲಿ ತಿಳಿಸಿದ್ದಾರೆ.[ಭಾಸ್ಕರ ಶೆಟ್ಟಿ ಶವ ಸುಡಲು 20 ಲೀಟರ್ ಪೆಟ್ರೋಲ್ ಬಳಕೆ!]
ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಉದ್ಯಮಿ ಭಾಸ್ಕರ್ ಶೆಟ್ಟಿಯವರು ದುರ್ಗಾ ಇಂಟರ್ನ್ಯಾಷನಲ್ ಹೋಟೆಲ್ ನಿರ್ಮಿಸಿದ್ದರು ಇದಕ್ಕಾಗಿ ಕರ್ನಾಟಕ ಬ್ಯಾಂಕ್ ಆದಿ ಉಡುಪಿ ಶಾಖೆಯಿಂದ ಸಾಲ ಪಡೆದು ತನ್ನ ಪತ್ನಿ ರಾಜೇಶ್ವರಿ ಅವರ ಹೆಸರಿನಲ್ಲಿದ್ದ ಜಾಗದಲ್ಲಿ ಹೋಟೆಲ್ ನಿರ್ಮಿಸಿದ್ದರು .

ಭಾಸ್ಕರ ಶೆಟ್ಟಿ ಅವರ ನಂತರ ಹೊಟೇಲ್ ವ್ಯವಹಾರ ರಾಜೇಶ್ವರಿ ಶೆಟ್ಟಿ ಅವರ ಸುಪರ್ದಿಗೆ ಕಾನೂನು ಪ್ರಕಾರ ಸೇರಿದೆ ಎಂದರು. ಭಾಸ್ಕರ್ ಶೆಟ್ಟಿ ಕೊಲೆ ಪ್ರಕರಣದಲ್ಲಿ ಬಂಧಿತರಾಗಿರುವ ಪ್ರಮುಖ ಆರೋಪಿ ರಾಜೇಶ್ವರಿ ಶೆಟ್ಟಿಯವರು ಅವರ ತಾಯಿ ಸುಮತಿ ರಘುರಾಮ ಶೆಟ್ಟಿಗೆ ಅಕಾರ ಪತ್ರವನ್ನು ನೀಡಿ ಹೊಟೇಲ್ ವ್ಯವಹಾರ ನೋಡಿಕೊಳ್ಳುವಂತೆ ಮತ್ತು ಬ್ಯಾಂಕ್ಗೆ ಸಂಬಂಧಿಸಿದ ಸಾಲದ ವ್ಯವಹಾರವನ್ನು ನೋಡಿಕೊಳ್ಳುವಂತೆ ಸೂಚಿಸಿದ್ದರು.
ಆದರೆ ಭಾಸ್ಕರ ಶೆಟ್ಟಿ ಅವರ ಸಂಬಂಧಿಕರಾದ ಗುರುಪ್ರಸಾದ್ ಶೆಟ್ಟಿ, ಜೋಗು ಶೆಟ್ಟಿ, ಜಯಂತಿ ಶೆಟ್ಟಿ, ಚಂದ್ರಶೇಖರ ಶೆಟ್ಟಿ ಹಾಗೂ ನಿರ್ಮಲಾ ಶೆಟ್ಟಿ ಅವರು ಹೊಟೇಲಿನ ದೈನಂದಿನ ನಿರ್ವಹಣೆಯಲ್ಲಿ ಮಧ್ಯ ಪ್ರವೇಶಿಸಿ ಅಡಚಣೆ ಉಂಟು ಮಾಡಿದ್ದಾರೆ.[ಭಾಸ್ಕರ ಶೆಟ್ಟಿ ಕೊಲೆ ಪ್ರಕರಣ: ಪೊಲೀಸರ ಹೊಸ ಅವಾಂತರ?]
ಮಾತ್ರವಲ್ಲದೆ ಹೋಟೆಲಿನ ವ್ಯವಹಾರವನ್ನು ಬಲವಂತವಾಗಿ ವಶ ಪಡಿಸಿಕೊಂಡಿದ್ದರು. ಈ ಹಿನ್ನೆಲೆಯಲ್ಲಿ ಸುಮತಿ ರಘುರಾಮ ಶೆಟ್ಟಿ, ಭಾಸ್ಕರ ಶೆಟ್ಟಿಯವರ ಸಂಬಂಧಿಕರ ವಿರುದ್ಧ ಪ್ರತಿಬಂಧಕಾಜ್ಞೆ ಜಾರಿಗೊಳಿಸಲು ದಾವೆ ಹೂಡಿದ್ದರು. ಆದ್ದರಿಂದ ತಾತ್ಕಾಲಿಕ ಪ್ರತಿಬಂಧಕಾಜ್ಞೆ ಜಾರಿಗೊಳಿಸುವ ಆದೇಶ ಹೊರಡಿಸಿದೆ ಎಂದು ಚಿದಾನಂದ ಕೆದಿಲಾಯ ಹೇಳಿದರು.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications