ಬೆಂಗಳೂರು ಏರ್ ಶೋನಲ್ಲಿ ಕನ್ನಡಕ್ಕೆ ಅವಮಾನ: ಕರವೇ ಪ್ರವೀಣ್ ಶೆಟ್ಟಿ ಆಕ್ರೋಶ
ಉಡುಪಿ, ಫೆಬ್ರವರಿ 6: ಬೆಂಗಳೂರಿನಲ್ಲಿ ನಡೆದ 13ನೇ ಏರ್ ಶೋನಲ್ಲಿ ಕನ್ನಡಕ್ಕೆ ಅವಮಾನ ಆಗಿದೆ. ಅದೇ ರೀತಿ ಶಿವಮೊಗ್ಗದಲ್ಲಿ ಅಮಿತ್ ಶಾ ಪಾಲ್ಗೊಂಡ ಕಾರ್ಯಕ್ರಮದಲ್ಲೂ ಕನ್ನಡ ಮಾಯವಾಗಿತ್ತು ಎಂದು ಕರವೇ ಪ್ರವೀಣ್ ಶೆಟ್ಟಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಉಡುಪಿಯಲ್ಲಿ ಮಾತನಾಡಿದ ಅವರು, ಗಡಿ ಪ್ರದೇಶದ ರಾಜಕಾರಣಿಗಳು ಕನ್ನಡವನ್ನು ಮರೆತಿದ್ದಾರೆ. ಮರಾಠಿ ಭಾಷೆಯಲ್ಲಿ ರಾಜಕಾರಣಿಗಳು ವ್ಯವಹರಿಸುತ್ತಾರೆ. ಗಣ್ಯರು ದೆಹಲಿ ಹಾಗೂ ವಿದೇಶದಿಂದ ಬರಲಿ, ರಾಜ್ಯದಲ್ಲಿ ಕನ್ನಡವನ್ನು ಕಡ್ಡಾಯ ಮಾಡಬೇಕು. ಕನ್ನಡದ ಕೀಳರಿಮೆಯನ್ನು ನಾವು ಸಹಿಸಿಕೊಳ್ಳುವುದಿಲ್ಲ. ಮುಂದಿನ ದಿನಗಳಲ್ಲಿ ತಕ್ಕ ಉತ್ತರವನ್ನು ಕೊಡುತ್ತೇವೆ ಎಂದು ಎಚ್ಚರಿಕೆ ನೀಡಿದರು.
ಇಂದು ಕನ್ನಡಕ್ಕಾಗಿ ಹೋರಾಡಿದರೆ ದೇಶದ್ರೋಹಿ ಪಟ್ಟ ಕಟ್ಟಲಾಗುತ್ತದೆ. ದೇಶದ್ರೋಹದ ಕೇಸು ಹಾಕಿ ಬಂಧಿಸಿದ ಘಟನೆ ನಡೆದಿದೆ. ಕನ್ನಡ ನಿರ್ಲಕ್ಷವಾದರೆ ಮುಖ್ಯಮಂತ್ರಿಗಳು ಕಣ್ಣುಕಟ್ಟಿ ಕುಳಿತುಕೊಳ್ಳಬಾರದು. ಸಚಿವರು, ಅಧಿಕಾರಿಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿದರು.

ಪದೇ ಪದೇ ಗಡಿ ಕ್ಯಾತೆ ತೆಗೆಯುವ ಮಹಾ ಸಿಎಂ ಉದ್ಧವ್ ಠಾಕ್ರೆಯವರೇ.. ಕರ್ನಾಟಕದ ಒಂದು ಹಿಡಿ ಮಣ್ಣು ನಿಮಗೆ ಸಿಗುವುದಿಲ್ಲ. ಗಡಿಯ ವಿಚಾರಕ್ಕೆ ಬಂದರೆ ತಕ್ಕ ಪಾಠ ಕಲಿಸುತ್ತೇವೆ. ಲಾಠಿಯೇಟು, ಜೈಲು ನಾವು ನೋಡಿಯಾಗಿದೆ. ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ವಿರುದ್ಧ ಮಹಾರಾಷ್ಟ್ರ ಚಲೋ ಹೋರಾಟದ ರೂಪುರೇಷೆಯನ್ನು ಸಿದ್ಧಪಡಿಸಿ ಘೋಷಿಸುತ್ತಿದ್ದೇವೆ ಎಂದು ಕರವೇ ಪ್ರವೀಣ್ ಶೆಟ್ಟಿ ಹೇಳಿದರು.
-
Gold Rate April 9: ಚಿನ್ನ - ಬೆಳ್ಳಿ ಬೆಲೆಯಲ್ಲಿ ಭರ್ಜರಿ ಇಳಿಕೆ: ಬಂಗಾರ ಖರೀದಿದಾರರಿಗೆ ಸಂತೋಷದ ಸುದ್ದಿ -
ರಾಜ್ಯದ ಕಳೆದ 3 ವರ್ಷಗಳ ದ್ವಿತೀಯ PUC ಫಲಿತಾಂಶದ ಹೈಲೈಟ್ಸ್; ಮೇಲುಗೈ ಸಾಧಿಸಿದ ಜಿಲ್ಲೆಗಳು ಯಾವುವು? ಇಲ್ಲಿದೆ ಮಾಹಿತಿ -
April 9 Horoscope: 12 ರಾಶಿಗಳಿಗೆ ಇಂದು ಸಂತೋಷ, ಸವಾಲು ಮತ್ತು ಅವಕಾಶಗಳ ಮಿಶ್ರ ಫಲ -
Viral: ಬೆಂಗಳೂರಿಗೆ ಕಾಲಿಟ್ಟಿತೇ ಡೇಂಜರಸ್ 'ಜಾಂಬಿ ಡ್ರಗ್'?: ಯುವಕನ ವಿಡಿಯೋ ನೋಡಿ ಬೆಚ್ಚಿಬಿದ್ದ ಸಿಲಿಕಾನ್ ಸಿಟಿ ಜನ -
PUC Results: 2026ರ ದ್ವಿತೀಯ PUC ಪರೀಕ್ಷೆ ಫಲಿತಾಂಶ ಪ್ರಕಟ, ಇವರೇ ನೋಡಿ ಟಾಪರ್ -
Dhurandhar-2 OTT: ನೆಟ್ಫ್ಲಿಕ್ಸ್ ಅಲ್ಲ, ಈ ಒಟಿಟಿಯಲ್ಲಿ 'ಧರಂಧರ-2' ಅಬ್ಬರ, ಯಾವಾಗ? -
Ragi Price Today: ಕರ್ನಾಟಕದ ಮಾರುಕಟ್ಟೆಗಳಲ್ಲಿ ಇಂದಿನ "ರಾಗಿ' ಬೆಲೆ ಎಷ್ಟಿದೆ? ಲೇಟೆಸ್ಟ್ ಅಪ್ಡೇಟ್ -
Rain in Karnataka: ಕರ್ನಾಟಕದ ಕರಾವಳಿಯಲ್ಲಿ ಭಾರೀ ಬಿಸಿಲು; ಬೆಂಗಳೂರು ಸೇರಿ ಈ ಭಾಗಗಳಲ್ಲಿ ಮಳೆ: ಐಎಂಡಿ -
Election Commission: ಚುನಾವಣೆ ಸಮಯದಲ್ಲೇ ಭಾರತೀಯ ಚುನಾವಣಾ ಆಯೋಗದ ಟ್ವೀಟ್ ಎಡವಟ್ಟು, ಬಿಜೆಪಿ ಪರ ಎಂದ ವಿರೋಧ ಪಕ್ಷಗಳು -
Dhurandhar 2: ದುರಂಧರ್ 2 ಸಿನಿಮಾ: ಬಾಕ್ಸ್ ಆಫೀಸ್ನಲ್ಲಿ 1,000 ಕೋಟಿ ದಾಖಲೆಯ ನಡುವೆ ಹೊಸ ಸಂಕಷ್ಟ -
Zombis Drug: ಬೆಂಗಳೂರಲ್ಲಿ ಜಾಂಬಿ ಡ್ರಗ್ಸ್ ಸೇವಿಸಿ ಯುವಕನ ವಿಚಿತ್ರ ವರ್ತನೆ: ನಟ ದುನಿಯಾ ವಿಜಯ್ ವಿಡಿಯೋ ವೈರಲ್ -
Assembly Elections 2026: ಕೇರಳಂ, ಅಸ್ಸಾಂ, ಪುದುಚೇರಿ ವಿಧಾನಸಭೆ ಚುನಾವಣೆ ಮತದಾನ ಪ್ರಾರಂಭ












Click it and Unblock the Notifications