ಉಡುಪಿ: ಶೀರೂರು ಶ್ರೀ ಸಾವಿನ ತನಿಖೆ ಚುರುಕು
ಉಡುಪಿ, ಜುಲೈ.20: ಗುರುವಾರ ಮೃತಪಟ್ಟ ಶೀರೂರು ಶ್ರೀ ಸಾವಿನ ಬಗ್ಗೆ ಎದ್ದಿರುವ ಅನುಮಾನಗಳ ಕುರಿತು ಇಂದು ಶುಕ್ರವಾರ ತನಿಖೆ ಪ್ರಾರಂಭವಾಗಲಿದೆ. ಸ್ವಾಮೀಜಿ ಸಾವಿನ ಬಗ್ಗೆ ಎದ್ದಿರುವ ಊಹಾಪೋಹಗಳ ತನಿಖೆಗಾಗಿ ಜಿಲ್ಲೆಯ ದಕ್ಷ ಅಧಿಕಾರಿಗಳ ತಂಡವನ್ನು ಎಸ್ಪಿ ನಿಂಬರ್ಗಿ ರಚನೆ ಮಾಡಿದ್ದಾರೆ.
ಗುರುವಾರ ಸ್ವಾಮೀಜಿ ಮೃತಪಟ್ಟ ಬಳಿಕ ಹಿರಿಯಡ್ಕ ಠಾಣೆಯಲ್ಲಿ ಶೀರೂರು ಶ್ರೀ ಸಹೋದರ ಲಾತವ್ಯ ಆಚಾರ್ಯ ಎಂಬುವರು ದೂರು ಸಲ್ಲಿಸಿದ್ದರು. ಈ ಹಿನ್ನೆಲೆಯಲ್ಲಿ ಮರಣೋತ್ತರ ಪರೀಕ್ಷೆ ಕೂಡ ನಡೆದಿತ್ತು. ಹೀಗಾಗಿ ಎಫ್ ಐಆರ್ ದಾಖಲಿಸಿರುವ ಪೊಲೀಸರು ಇವತ್ತು ತನಿಖೆ ಪ್ರಾರಂಭಿಸಿದ್ದಾರೆ.
ಸ್ವಾಮೀಜಿಯ ಮರಣೋತ್ತರ ಪರೀಕ್ಷೆಯ ವರದಿ ಇನ್ನಷ್ಟೇ ಬರಲಿದ್ದು, ಪೊಲೀಸರ ತನಿಖೆಗೆ ಇದು ಮಹತ್ವದ ದಿಕ್ಕು ತೋರಿಸಲಿದೆ. ಈಗಾಗಲೇ ಶೀರೂರು ಮೂಲಮಠದಲ್ಲಿ ಠಿಕಾಣಿ ಹೂಡಿರುವ ಪೊಲೀಸರ ತಂಡ ಅಲ್ಲಿ ಪರಿಶೀಲನೆ ನಡೆಸುತ್ತಿದೆ.

ಮೂಲಮಠವನ್ನ ಗುರುವಾರವೇ ಸುಪರ್ದಿಗೆ ತೆಗೆದುಕೊಂಡಿರುವ ಪೊಲೀಸರು ಅಲ್ಲಿ ಸಾರ್ವಜನಿಕರಿಗೆ ಪ್ರವೇಶ ನಿರ್ಬಂಧಿಸಿದ್ದಾರೆ. ಪ್ರತಿಯೊಂದು ವಸ್ತುಗಳನ್ನು ಪರಿಶೀಲನೆ ನಡೆಸುತ್ತಿರುವ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ.
ಜೊತೆಗೆ ಪೊಲೀಸರ ತಂಡ ಮಠದ ಸಿಬ್ಬಂದಿ ಮತ್ತು ಸ್ವಾಮೀಜಿಗೆ ಆತ್ಮೀಯರಾದವರಲ್ಲಿ ಮಾಹಿತಿ ಕಲೆ ಹಾಕುತ್ತಿದೆ. ಸ್ವಾಮೀಜಿಯ ಸಹೋದರ ಇದೊಂದು ಅಸ್ವಾಭಾವಿಕ ಸಾವು. ಸಾವಿನ ಹಿಂದೆ ಕೆಲವು ಸಂಶಯಗಳಿವೆ. ಹೀಗಾಗಿ ಇದರ ಬಗ್ಗೆ ಸಮಗ್ರ ತನಿಖೆ ನಡೆಸಬೇಕು ಎಂದು ದೂರು ನೀಡಿದ್ದರು.
-
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ












Click it and Unblock the Notifications