ಸರಕಾರ ಹಿಂದೂ ವಿರೋಧಿ ಎನ್ನುವುದು ಸ್ಪಷ್ಟಗೊಳ್ಳುತ್ತಿದೆ: ಪೇಜಾವರ ಶ್ರೀ
ಉಡುಪಿ, ಫೆಬ್ರವರಿ 7: ದೇವಾಲಯ ಮತ್ತು ಮಠಗಳ ಸ್ವಾಧೀನ ವಿಚಾರಕ್ಕೆ ಸಂಬಂಧಿಸಿದಂತೆ ಉಡುಪಿಯಲ್ಲಿ ಪ್ರತಿಕ್ರಿಯೆ ನೀಡಿರುವ ಪೇಜಾವರ ಮಠದ ವಿಶ್ವೇಶ ತೀರ್ಥ ಸ್ವಾಮೀಜಿಗಳು ಸರಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
"ದೇವಾಲಯ ಮತ್ತು ಮಠಗಳ ಸ್ವಾಧೀನಕ್ಕೆ ಕೈ ಹಾಕುವ ಮೂಲಕ ಸರಕಾರವೇ ವಿಪಕ್ಷದ ಹೋರಾಟಕ್ಕೆ ಅಸ್ತ್ರ ಕೊಟ್ಟಂತಾಗಿದೆ. ಆದರೆ ನಾನು ಇದರ ವಿರುದ್ಧ ಹೋರಾಟ ಮಾಡುವುದಿಲ್ಲ. ಈ ಹೋರಾಟವನ್ನು ಜನತೆಗೆ ಬಿಟ್ಟಿದ್ದೇನೆ," ಎಂದು ಪೇಜಾವರ ಶ್ರೀಗಳು ಹೇಳಿಕೆ ನೀಡಿದರು.
"ಸರಕಾರ ಹಿಂದೂ ವಿರೋಧಿ ಎನ್ನುವುದು ಇದರಿಂದ ಸ್ಪಷ್ಟವಾಗುತ್ತಿದೆ. ಜಾತ್ಯಾತೀತ ಸರಕಾರ ಈ ರೀತಿ ನಡೆದುಕೊಳ್ಳಬಾರದು. ಅಲ್ಪಸಂಖ್ಯಾತ, ಬಹುಸಂಖ್ಯಾತರನ್ನು ಸಮಾನವಾಗಿ ನೋಡಬೇಕು. ಆದರೆ ಸರಕಾರ ವ್ಯತಿರಿಕ್ತವಾಗಿ ನಡೆದುಕೊಳ್ಳುತ್ತಿದೆ," ಎಂದು ಅವರು ವಾಗ್ದಾಳಿ ನಡೆಸಿದರು.

"ಇತ್ತೀಚೆಗೆ ಸರಕಾರ ಅಲ್ಪಸಂಖ್ಯಾತರ ಮೇಲಿನ ಪ್ರಕರಣವನ್ನು ಕೈ ಬಿಡಲು ಮುಂದಾಗಿತ್ತು. ಮುಗ್ಧರಾದ ಎಲ್ಲರ ಮೇಲಿನ ಪ್ರಕರಣವನ್ನೂ ಸರಕಾರ ಕೈ ಬಿಡಲಿ," ಎಂದು ಪೇಜಾವರ ಶ್ರೀಗಳು ಇದೇ ಸಂದರ್ಭದಲ್ಲಿ ಸಲಹೆ ನೀಡಿದರು.
"ಕೃಷ್ಣಮಠವನ್ನು ಸ್ವಾಧೀನಪಡಿಸಿದರೆ, ನಾನು ಮಠದಿಂದ ಹೊರಬರುವೆ. ಸರಕಾರದ ನೌಕರನಾಗಿ ನಾನು ಮಠದಲ್ಲಿ ಇರಲಾರೆ. ಆದರೆ ಮಠವನ್ನು ಸರಕಾರಕ್ಕೆ ಸ್ವಾಧೀನ ಪಡಿಸಿಕೊಳ್ಳುವ ವಿಚಾರ ಈವರೆಗೆ ಯಾವುದೇ ಮೂಲಗಳಿಂದ ಖಚಿತವಾಗಿಲ್ಲ," ಎಂದು ಹೇಳಿರುವ ವಿಶ್ವೇಶತೀರ್ಥರು, "ಸ್ವಾಧೀನಪಡಿಸುವ ಪ್ರಕ್ರಿಯೆ ಇಲ್ಲದೇ ಇದ್ದಲ್ಲಿ ನಮ್ಮ ವಿರೋಧವಿಲ್ಲ," ಎಂದು ಸ್ಪಷ್ಟವಾಗಿ ಹೇಳಿದರು.
-
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD












Click it and Unblock the Notifications