ಉಡುಪಿ: ಅಪಾಯದಂಚಿನಲ್ಲಿ ಅಂಗನವಾಡಿ !
ನಾಲ್ಕೈದು ತಿಂಗಳಿನಿಂದ ಇಲ್ಲಿ ಕ್ರಷರ್ ಮಿಕ್ಸರ್ ಕಾಮಗಾರಿ ನಡೆಯುತ್ತಿದ್ದು, ಅಂಗನವಾಡಿ ಮಕ್ಕಳಿಗೆ ಕ್ರಷರ್ ಧೂಳು ತಿಂದು ಬದುಕುವ ಪರಿಸ್ಥಿತಿ ನಿರ್ಮಾಣವಾಗಿದೆ.
ಉಡುಪಿ, ಮಾರ್ಚ್ 18 : ಈ ಅಂಗನವಾಡಿಯಲ್ಲಿ ಇಪ್ಪತ್ತೈದು ಮಕ್ಕಳಿದ್ದಾರೆ. ಆದರೆ, ನಗರದ ಅಂಗನವಾಡಿಗೆ ಬಂದು, ಪಾಠ ಕೇಳಿ, ಆಟವಾಡಿದ ನಂತರ ಮಕ್ಕಳು ಮನೆಗೆ ಹೋಗುವುದೇ ಸಾಹಸಮಯ. ಯಾಕೆಂದರೆ ಈ ಅಂಗನವಾಡಿ ಹತ್ತಿರ ಬೃಹದಾಕಾರದ ಕ್ರಷರ್ ಮಿಕ್ಸರ್ ಇದೆ.
ನಾಲ್ಕೈದು ತಿಂಗಳಿನಿಂದ ಇಲ್ಲಿ ಕ್ರಷರ್ ಮಿಕ್ಸರ್ ಕಾಮಗಾರಿ ನಡೆಯುತ್ತಿದೆ. ಹೀಗಾಗಿ ಅಂಗನವಾಡಿ ಮಕ್ಕಳಿಗೆ ಕ್ರಷರ್ ಧೂಳು ತಿಂದು ಬದುಕುವ ಪರಿಸ್ಥಿತಿ.[ಉಡುಪಿ: ಚಿನ್ನದ ವ್ಯಾಪಾರಿಯ ದರೋಡೆ]

ಇನ್ನು ಇಲ್ಲೇ ಸಮೀಪ ಇರುವ ನೂರಾರು ಮನೆಗಳು ಕ್ರಷರ್ ಧೂಳಿನಿಂದ ಮುಚ್ಚಿ ಹೋಗಿವೆ. ಈ ಬಗ್ಗೆ ಯಾರೊಬ್ಬರೂ ತಲೆ ಕೆಡಿಸಿಕೊಂಡಿಲ್ಲ. ದಿನವಿಡೀ ಅಂಗನವಾಡಿಯ ಹಿಂದುಗಡೆಯೇ ಈ ಕ್ರಷರ್ ಮಿಕ್ಸರ್ ಕಾಮಗಾರಿ ನಡೆಯುತ್ತಿದೆ. ಮಕ್ಕಳ ಆಹಾರಕ್ಕೆ ಮತ್ತು ಕುಡಿಯಲು ಬಳಸುವ ಬಾವಿಯೂ ಕ್ರಷರ್ ಧೂಳಿಗೆ ಬಲಿಯಾಗಿದೆ. ಇದಕ್ಕೆ ರಕ್ಷಣೆ ನೀಡಿ ಎಂದು ನೂರಾರು ಬಾರಿ ಮನವಿ ಸಲ್ಲಿಸಲಾಗಿದೆ. ಆದರೆ ಗುತ್ತಿಗೆದಾರರು ಮಾತ್ರ ಕೇವಲ ನೆಟ್ ಹಾಕಿ ಸುಮ್ಮನಾಗಿದ್ದಾರೆ.
ಈ ಎಲ್ಲದರ ಪರಿಣಾಮವಾಗಿ ಅಂಗನವಾಡಿಯಲ್ಲಿ ಈ ಹಿಂದೆ ಬರುತ್ತಿದ್ದ 25 ಮಕ್ಕಳಲ್ಲಿ ಸುಮಾರು ಆರೇಳು ಮಕ್ಕಳಿಗೆ ಅನಾರೋಗ್ಯದ ಸಮಸ್ಯೆ ಕಾಣಿಸಿಕೊಂಡಿದೆ. ಈ ಕಾರಣದಿಂದ ಇವರು ಅಂಗನವಾಡಿಗೆ ಬರುತ್ತಿಲ್ಲ.
ಕುಂದಾಪುರ ತಾಲೂಕಿನ ಮರವಂತೆಯ ಹೊರಬಂದರು ಕಾಮಗಾರಿ ನಡೆಯುತ್ತಿರುವ ಸ್ಥಳದಲ್ಲಿರುವ ಈ ಅಂಗನವಾಡಿಯಲ್ಲಿ ದಿನದಿಂದ ದಿನಕ್ಕೆ ಮಕ್ಕಳ ಸಂಖ್ಯೆ ಕಡಿಮೆಯಾಗುತ್ತಿದೆ. ಮಕ್ಕಳ ಆರೋಗ್ಯವನ್ನು ಕೆಡಿಸುವ ಇಂತಹ ಕಾಮಗಾರಿ ನಿಲ್ಲಿಸಬೇಕೆಂದು ಸಾರ್ವಜನಿಕರು ಮನವಿ ಮಾಡಿದ್ದಾರೆ.
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications