ಜೋಕೆ...ಮಲ್ಪೆ ಬೀಚ್ ನಲ್ಲಿ ಮತ್ತೆ ಕಾಣಿಸಿಕೊಂಡಿವೆ ಜೆಲ್ಲಿ ಫಿಶ್ ಗಳು, ನೀರಿಗಿಳಿಯುವ ಮುನ್ನ ಯೋಚಿಸಿ
Recommended Video

ಉಡುಪಿ, ಅಕ್ಟೋಬರ್. 23: ಕರಾವಳಿಯಲ್ಲಿ ಜೆಲ್ಲಿ ಫಿಶ್ ಗಳ ದಾಳಿ ಆರಂಭವಾಗಿದ್ದು, ಸಮುದ್ರದಲ್ಲಿ ನೀರಾಟಕ್ಕೆ ಇಳಿಯುವವರ ಮೇಲೆ ಜೆಲ್ಲಿ ಫಿಶ್ ದಾಳಿ ಮಾಡುತ್ತಿವೆ. ಸಮುದ್ರ ನೀರಿನಲ್ಲಿ ಸ್ನಾನ ಮಾಡುತ್ತಿದ್ದ ಆರು ಮಂದಿ ಪ್ರವಾಸಿಗರ ಮೇಲೆ ಜೆಲ್ಲಿ ಫಿಶ್ ದಾಳಿ ನಡೆಸಿದ ಘಟನೆ ಇದೀಗ ಉಡುಪಿಯಲ್ಲಿ ಬೆಳಕಿಗೆ ಬಂದಿದೆ.
ಮಲ್ಪೆ ಕಡಲ ಕಿನಾರೆಯಲ್ಲಿ ಈ ಪ್ರಕರಣ ಬೆಳಕಿಗೆ ಬಂದಿದ್ದು, ಜೆಲ್ಲಿ ಫಿಶ್ ದಾಳಿಗೆ ಒಳಗಾದವರಿಗೆ ಸ್ಥಳದಲ್ಲಿಯೇ ಚಿಕಿತ್ಸೆ ನೀಡಿ ಕಳುಹಿಸಿಕೊಡಲಾಗಿದೆ. ಸಮುದ್ರದಲ್ಲಿ ಜೆಲ್ಲಿ ಫಿಶ್ ಗಳು ಹೇರಳವಾಗಿ ಬಂದಿರುವ ಹಿನ್ನೆಲೆಯಲ್ಲಿ ಪ್ರವಾಸಿಗರು ಕಡಲಿಗೆ ಇಳಿಯದಂತೆ ಎಚ್ಚರ ವಹಿಸಲಾಗುತ್ತಿದೆ.
ಪ್ರತಿವರ್ಷ ಈ ಜೆಲ್ಲಿ ಫಿಶ್ ಹಾಗೂ ತೊರಕೆ ಮೀನುಗಳು, ಮರಿಗಳು ಕಿನಾರೆಗೆ ಬರುತ್ತವೆ. ಆದರೆ ಈ ಬಾರಿ ಹೆಚ್ಚಿನ ಸಂಖ್ಯೆಯಲ್ಲಿ ಬಂದಿವೆ. ಇವುಗಳು ಕಡಲ ಕಿನಾರೆಗೆ ಬಂದಾಗ ಈ ರೀತಿಯ ದಾಳಿಗಳನ್ನು ನಡೆಸುತ್ತವೆ. ಅವುಗಳು ಕಿನಾರೆ ಬಳಿ ಬಂದರೆ ಕೆಲವೊಮ್ಮೆ ಎರಡು ಅಥವಾ ಮೂರು ದಿನಗಳವರೆಗೆ ಇರುತ್ತವೆ.

ಜೆಲ್ಲಿ ಫಿಶ್ ಅಪಾಯಕಾರಿ ಅಲ್ಲ. ಆದರೆ ಅದರ ಸ್ಪರ್ಶದಿಂದ ವಿಪರೀತ ಉರಿ ಹಾಗೂ ಅದು ಸ್ಪರ್ಶಿಸಿದ ಭಾಗ ಊದಿ ಕೊಳ್ಳುತ್ತದೆ. ಜೆಲ್ಲಿ ಫಿಶ್ ಗಳಲ್ಲಿ ಎರಡು ಬಗೆ ಇದೆ. ಒಂದು ಬಿಳಿ ಹಾಗೂ ಇನ್ನೊಂದು ನಸುಗೆಂಪು ಬಣ್ಣದ್ದು. ಕೆಂಪು ಜಲ್ಲಿ ಫಿಶ್ ಸ್ಪರ್ಶಿಸಿದರೆ ಉರಿ ಹೆಚ್ಚು . ಮಲ್ಪೆ ಸೆಂಟ್ ಮೇರಿಸ್ ದ್ವೀಪದ ಒಂದು ಬದಿಯಲ್ಲಿ ಈ ರೀತಿಯ ಮೀನು ಸಾಮಾನ್ಯವಾಗಿ ಕಂಡು ಬರುತ್ತದೆ.
ಈ ಹಿನ್ನೆಲೆಯಲ್ಲಿ ಆ ಪ್ರದೇಶಕ್ಕೆ ಯಾರೂ ಹೋಗದಂತೆ ತಡೆಯಲಾಗುತ್ತದೆ. ಕಳೆದ 2 ದಿನಗಳಿಂದ ಉಡುಪಿಯ ಮಲ್ಪೆ ಕಡಲಕಿನಾರೆಗೆ ಜೆಲ್ಲಿ ಫಿಶ್ ಗಳು ಹೆಚ್ಚಿನ ಸಂಖ್ಯೆಯಲ್ಲಿ ಬಂದಿವೆ.
ಮಂಗಳೂರಿನ ಪಣಂಬೂರು ಕಡಲ ಕಿನಾರೆ ಬಳಿಯೂ ಕೂಡ ಈ ಜೆಲ್ಲಿ ಫಿಶ್ ಗಳು ಕಂಡು ಬಂದಿವೆ. ಉತ್ತರ ಕನ್ನಡ ಜಿಲ್ಲೆಯ ಗೋಕರ್ಣ ಬೀಚ್ ನಲ್ಲಿ ಕಳೆದ ಭಾನುವಾರ ಜೆಲ್ಲಿಫಿಶ್ ದಾಳಿ ನಡೆಸಿದ್ದವು. ಇದರಿಂದ ಕೆಲವರು ಗಾಯಗೊಂಡಿದ್ದರು. ಈ ಹಿನ್ನೆಲೆಯಲ್ಲಿ ಮಂಗಳೂರಿನಲ್ಲಿಯೂ ಪ್ರವಾಸಿಗರು ಸಮುದ್ರಕ್ಕೆ ಇಳಿಯದಂತೆ ಎಚ್ಚರವಹಿಸಲಾಗಿದೆ .

ಕಳೆದ ಸೆಪ್ಟೆಂಬರ್ ನಲ್ಲಿ ಮಲ್ಪೆ ಬೀಚ್ ನಲ್ಲಿ ಸ್ಟಿಂಗ್ ರೇ ಮೀನುಗಳು ಪ್ರವಾಸಿಗರ ಮೇಲೆ ದಾಳಿ ನಡೆಸಿದ್ದವು. ಈ ಮೀನುಗಳು ಬಾಲದಲ್ಲಿರುವ ಮುಳ್ಳಿನಿಂದ ನೀರಿಗಿಳಿಯುವ ಪ್ರವಾಸಿಗರನ್ನು ಚುಚ್ಚಿ ಗಾಯಗೊಳಿಸಿದ್ದವು.
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ












Click it and Unblock the Notifications